Impact: ಗೃಹ ಸಚಿವ ತವರಲ್ಲಿ ಲಂಚದ ಹಾವಳಿ, ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ಸಸ್ಪೆಂಡ್

Impact: ಗೃಹ ಸಚಿವ ತವರಲ್ಲಿ ಲಂಚದ ಹಾವಳಿ, ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ಸಸ್ಪೆಂಡ್

Suvarna News   | Asianet News
Published : Dec 25, 2021, 03:35 PM IST

 ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ (Thirthahalli) ಹೆಚ್ಚಾದ  ಲಂಚದ ಹಾವಳಿ ಕುರಿತು ಸುವರ್ಣ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಸುದ್ದಿ ಪ್ರಸಾರದ ಬೆನ್ನಲ್ಲೇ ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ದೇವಿದಾಸ್ ಡಿ ನಾಯಕ್ ಸಸ್ಪೆಂಡ್ (Suspend) ಮಾಡಿ ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶ ಹೊರಡಿಸಿದ್ದಾರೆ. 
 

ಶಿವಮೊಗ್ಗ (ಡಿ. 25): ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್! ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರಲ್ಲೇ ಪೋಲಿಸರ ಲಂಚಾವತಾರಕ್ಕೆ (Bribe) ಬ್ರೇಕ್ ಬಿದ್ದಿದೆ. ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ (Thirthahalli) ಹೆಚ್ಚಾದ  ಲಂಚದ ಹಾವಳಿ ಕುರಿತು ಸುವರ್ಣ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಸುದ್ದಿ ಪ್ರಸಾರದ ಬೆನ್ನಲ್ಲೇ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ದೇವಿದಾಸ್ ಡಿ ನಾಯಕ್ ಸಸ್ಪೆಂಡ್ (Suspend) ಮಾಡಿ ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶ ಹೊರಡಿಸಿದ್ದಾರೆ. 

ಪೋಲಿಸರ ಬಗ್ಗೆ ಗೃಹಸಚಿವರು ನೀಡಿದ ಹೇಳಿಕೆಗೆ ಪುಷ್ಟಿ ನೀಡಿದ್ದ ಪ್ರಕರಣ ಇದಾಗಿತ್ತು. ಗೃಹ ಸಚಿವರು ಬಹಿರಂಗವಾಗಿ ಕೆಲ ಪೊಲೀಸ್ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಎಂಜಲು ಕಾಸಿಗೆ ಅಂದರೆ ಲಂಚದ ಹಣಕ್ಕೆ ಬಾಯ್ಬಿಡುತ್ತಾರೆ ಎಂದು ನೀಡಿದ್ದ ಹೇಳಿಕೆಗೆ ಇಂಬು ನೀಡಿತ್ತು. ಏಷ್ಯಾನೆಟ್ ಸುವರ್ಣ ನ್ಯೂಸ್  ಪೋಲಿಸರ ಲಂಚವತಾರದ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು. ಪೊಲೀಸ್ ಅಧಿಕಾರಿ ಮೊಬೈಲ್ ಕರೆ ಮಾಡಿ ಲಂಚದ ಬೇಡಿಕೆ ಇಟ್ಟಿದ್ದು, ಲಂಚದ ಹಣ ನೀಡಲು ತಡ ಮಾಡಿದ್ದಕ್ಕೆ ಪೋಲಿಸಪ್ಪ ನಿಂದಿಸೋದು ಎಲ್ಲಾ ಬಟಾಬಯಲಾಗಿತ್ತು.

ಆಗುಂಬೆ ಠಾಣೆಯ ASI ದೇವದಾಸ್ ಡಿ ನಾಯಕ್ ಎಂಬಾತನ ಲಂಚಗುಳಿತನ ಬಗ್ಗೆ ಪ್ರಸಾರ ಮಾಡಿತ್ತು. ಸಬ್ ಇನ್ಸ್ ಪೆಕ್ಟರ್ ಕೊರೊನಾ  ರಜೆಯಲ್ಲಿದ್ದಾಗ ಇನ್ಚಾರ್ಚ್ ಎಎಸ್ಐ ನಡೆಸಿದ್ದ ಲಂಚಾವತಾರದ ದರ್ಬಾರ್ ಬಟಾಬಯಲಾಗಿತ್ತು. ಆಗುಂಬೆ ಗ್ರಾಪಂ ಕಳೆದ 3 ವರ್ಷಗಳಿಂದ ನೀರುಗಂಟಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂಜನ್ ಎಂಬಾತನಿಗೆ ಲಂಚದ ಹಣ ನೀಡಲು ತಡವಾಗಿದ್ದಕ್ಕೆ ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಕ್ರೌರ್ಯವನ್ನು ಮೆರೆದಿದ್ದ. ಈ ಹಿಂದೆ ನೀರಗಂಟಿ ಮತ್ತು ಗ್ರಾಪಂ ಉಪಾಧ್ಯಕ್ಷ ರಾಘವೇಂದ್ರ ಎಂಬುವವರ ಜೊತೆಗೆ ಜಗಳವಾಡಿದ್ದ ಪ್ರಕರಣ ಇದಾಗಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟು ಪೋಲಿಸಪ್ಪ ಹಾಕಿದ್ದ ಒತ್ತಡ ಹಾಕಿದ್ದ. ಈ ಬಗ್ಗೆ ಸುವರ್ಣನ್ಯೂಸ್ ವರದಿ ಭಿತ್ತರವಾಗುತ್ತಿದ್ದಂತೆ , ಎಸ್ಪಿ ಸೂಚನೆಯ ಮೇರೆಗೆ ತನಿಖೆ ನಡೆಸಿದ್ದ ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರ ಈ ಪ್ರಕರಣ ದಲ್ಲಿ ಸತ್ಯಾಂಶ ಇದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್‌ಗೆ ವರದಿ ನೀಡಿದ್ದರು.  ಡಿವೈಎಸ್ಪಿ ವರದಿ ನೀಡುತ್ತಿದ್ದಂತೆ ಎಎಸ್ಐ ಸಸ್ಪೆಂಡ್ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more