ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

Published : Feb 29, 2024, 12:52 PM ISTUpdated : Feb 29, 2024, 01:08 PM IST

ರಾಜ್ಯ ಸರ್ಕಾರ ನೀಡಿದ್ದ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಪ್ರಶ್ನಿಸಿದ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು(Woman) ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ. ಸರ್ಕಾರಿ ರಸ್ತೆ ಜೊತೆಗೆ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ(State Government) ನೀಡಿದ್ದ ಜಮೀನನ್ನು ‌ಒತ್ತುವರಿ(Encroachment of land) ಮಾಡಿಕೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮದ ರಾಮಪ್ಪ, ಭೀಮಪ್ಪ ನಾಗನೂರಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಲಾಗಿತ್ತು. 1991 ರಲ್ಲಿ ರಾಮಪ್ಪಗೆ ಮೂರು ಎಕರೆ ಜಮೀನು ಮಂಜೂರು ಮಾಡಿದ್ದ ಸರ್ಕಾರ. ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಮಪ್ಪ ನಾಗನೂರು. ಆದ್ರೆ ಕೆಲ ದಿನಗಳ ‌ಬಳಿಕ ರಾಮಪ್ಪಗೆ ಸೇರಿದ ಜಮೀನಿನ‌ 20 ಗುಂಟೆ ಒತ್ತುವರಿ ಮಾಡಲಾಗಿದೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ,‌ ಮಾಯಪ್ಪ ಹಳ್ಯಾಳ ವಿರುದ್ಧ ‌ಒತ್ತುವರಿ ಆರೋಪ ಕೇಳಿಬಂದಿದೆ. ನಮಗೆ ರಾಜಕೀಯ ‌ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡ್ತಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ವಿವಸ್ತ್ರಗೊಳಿಸಿ ವಿಕೃತಿ ಮೆರೆದ ಕೀಚಕರು. ಜಯಶ್ರೀ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆಗೈದು ಪುಂಡಾಟ ಮೆರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more