ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಮಹಿಳೆ ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ !

Published : Feb 29, 2024, 12:52 PM ISTUpdated : Feb 29, 2024, 01:08 PM IST

ರಾಜ್ಯ ಸರ್ಕಾರ ನೀಡಿದ್ದ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಪ್ರಶ್ನಿಸಿದ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು(Woman) ವಿವಸ್ತ್ರಗೊಳಿಸಿ ನಡುರಸ್ತೆಯಲ್ಲೇ ಹಲ್ಲೆ ಮಾಡಲಾಗಿದೆ. ಸರ್ಕಾರಿ ರಸ್ತೆ ಜೊತೆಗೆ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ(State Government) ನೀಡಿದ್ದ ಜಮೀನನ್ನು ‌ಒತ್ತುವರಿ(Encroachment of land) ಮಾಡಿಕೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮದ ರಾಮಪ್ಪ, ಭೀಮಪ್ಪ ನಾಗನೂರಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಲಾಗಿತ್ತು. 1991 ರಲ್ಲಿ ರಾಮಪ್ಪಗೆ ಮೂರು ಎಕರೆ ಜಮೀನು ಮಂಜೂರು ಮಾಡಿದ್ದ ಸರ್ಕಾರ. ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಮಪ್ಪ ನಾಗನೂರು. ಆದ್ರೆ ಕೆಲ ದಿನಗಳ ‌ಬಳಿಕ ರಾಮಪ್ಪಗೆ ಸೇರಿದ ಜಮೀನಿನ‌ 20 ಗುಂಟೆ ಒತ್ತುವರಿ ಮಾಡಲಾಗಿದೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ,‌ ಮಾಯಪ್ಪ ಹಳ್ಯಾಳ ವಿರುದ್ಧ ‌ಒತ್ತುವರಿ ಆರೋಪ ಕೇಳಿಬಂದಿದೆ. ನಮಗೆ ರಾಜಕೀಯ ‌ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡ್ತಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ವಿವಸ್ತ್ರಗೊಳಿಸಿ ವಿಕೃತಿ ಮೆರೆದ ಕೀಚಕರು. ಜಯಶ್ರೀ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆಗೈದು ಪುಂಡಾಟ ಮೆರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Siddaramaiah: ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more