ಪ್ರೀತಿಸಿ ಪರಾರಿಯಾದ ಪ್ರೇಮಿಗಳು..ಯುವಕನ ಪೋಷಕರಿಗೆ ಥಳಿತ !

ಪ್ರೀತಿಸಿ ಪರಾರಿಯಾದ ಪ್ರೇಮಿಗಳು..ಯುವಕನ ಪೋಷಕರಿಗೆ ಥಳಿತ !

Published : Dec 19, 2023, 11:48 AM IST

ಪ್ರೇಮಿಗಳ ಪ್ರೀತಿಗೆ ಹುಡುಗಿ ಮನೆಯ ಪೋಷಕರ ವಿರೋಧವಿದ್ದ ಹಿನ್ನೆಲೆ ಇಬ್ಬರು ಓಡಿ ಹೋಗಿದ್ದಾರೆ. ಇದನ್ನು ಅರಿತ ಹುಡುಗಿ ಮನೆಯವರು ಹುಡುಗನ ಪೋಷಕರಿಗೆ ಥಳಿಸಿದ್ದಾರೆ.

ಪ್ರೀತಿಸಿ ಪರಾರಿಯಾಗಿದ್ದ ಪ್ರೇಮಿಯ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ನಡೆದಿದೆ. ಪ್ರೇಮಿಯ ತಂದೆ-ತಾಯಿಯ ಮೇಲೆ ನಡು ರಸ್ತೆಯಲ್ಲಿಯೇ ಮನಸೋ ಇಚ್ಛೆ ಹಲ್ಲೆ(Attack) ಮಾಡಲಾಗಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸೋಮವಾರ ಮನೋಜ್ ಹಾಗೂ ಅಂಕಿತಾ ಪರಾರಿಯಾಗಿದ್ರು. ಅಂಕಿತಾ ಪೋಷಕರಿಂದ ಇವರ ಪ್ರೀತಿಗೆ(Love) ವಿರೋಧ ಇತ್ತಂತೆ. ಹೀಗಾಗಿ ಅಂಕಿತಾ ಪೋಷಕರಾದ ಶ್ರೀನಿವಾಸ್ ಸೇರಿದಂತೆ ಕುಟುಂಬ ಸದಸ್ಯರಿಂದ ಮನೋಜ್ ಕುಮಾರ್ ತಂದೆ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ವೆಂಕಟಲಕ್ಷ್ಮಮ್ಮ ಹಾಗೂ ಗಂಗರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದು, ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ವೀಕ್ಷಿಸಿ:  338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more