ಬಾಗಲಕೋಟೆ  ಒತ್ತುವರಿ ತೆರವಿಗೆ ನಲುಗಿದ ಮಲಪ್ರಭೆ, ಕಣ್ತೆರೆಯಬೇಕಿದೆ ಸರ್ಕಾರ

ಬಾಗಲಕೋಟೆ ಒತ್ತುವರಿ ತೆರವಿಗೆ ನಲುಗಿದ ಮಲಪ್ರಭೆ, ಕಣ್ತೆರೆಯಬೇಕಿದೆ ಸರ್ಕಾರ

Published : May 23, 2022, 02:26 PM IST

ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ಪ್ರತಿವರ್ಷ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಕೂಗು ಕೇಳಿ ಬರ್ತಿದೆ. 

ಬಾಗಲಕೋಟೆ (ಮೇ. 23): ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ಪ್ರತಿವರ್ಷ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಕೂಗು ಕೇಳಿ ಬರ್ತಿದೆ. ಈ ಮಧ್ಯೆ ಪ್ರತಿವರ್ಷ ಪ್ರವಾಹ ಭೀತಿ ಒಂದೆಡೆಯಾದ್ರೆ ಮತ್ತೊಂದೆಡೆ ಕಳಸಾ ಬಂಡೂರಿ ತಿರುವು ಯೋಜನೆ ಅನುಷ್ಠಾನ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಎಚ್ಚರಿಕೆ ಹೆಜ್ಜೆ ಇಡಬೇಕಿದೆ. 

 2009 ರಿಂದ ಹಿಡಿದು ಆಗಾಗ ಈಚೆಗೆ ಸತತವಾಗಿ ಬಹುತೇಕ ಪ್ರವಾಹದ ಎಫೆಕ್ಟ್ ಜೋರಾಗ್ತಿರೋದ್ರಿಂದ ಇದೀಗ ರಾಜ್ಯ ಸಕಾ೯ರಕ್ಕೂ ತಲೆನೋವಾಗಿ ಪರಿಣಮಿಸಿದೆ. ಹೀಗೆ ಪದೇ ಪದೇ ಪ್ರವಾಹಕ್ಕೆ ಕಾರಣವೇನು ಎಂದು ನೋಡಿದಾಗ ನದಿಯಲ್ಲಿ ಹೂಳಿರುವುದು ಮತ್ತು ನದಿಯ ಇಕ್ಕೆಲಗಳಲ್ಲಿ ಒತ್ತುವರಿ ಮಾಡಿದ್ದೇ ಮೂಲ ಕಾರಣ ಅಂತ ಗೊತ್ತಾಗಿದ್ದು, ಈ ಹಿನ್ನೆಲೆಯಲ್ಲಿ ಸಕಾ೯ರ ನದಿಯ ಅಕ್ಕಪಕ್ಕದ ಅತಿಕ್ರಮಣ ತೆರವು ಕಾಯ೯ ನಡೆಸಲು ಮುಂದಾಗಬೇಕಿದೆ. ಆದ್ರೆ ಆ ಕೆಲಸ ಆಗುತ್ತಿಲ್ಲ. ಹೀಗಾಗಿ ಸರ್ಕಾರ ಒತ್ತುವರಿಗೆ ತೆರವಿಗೆ ಮುಂದಾಗಬೇಕು ಇಲ್ಲವಾದಲ್ಲಿ ಮತ್ತೇ ಪ್ರವಾಹ ಬಂದಲ್ಲಿ ಇನ್ನಷ್ಟು ಬೆಲೆ ತೆರಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.  

ಇನ್ನು ಬೆಳಗಾವಿ ಜಿಲ್ಲೆಯ ಖಾನಾಪೂರ ದ ಕನಕುಂಬಿಯಲ್ಲಿ ಹುಟ್ಟುವ ಮಲಪ್ರಭಾ ನದಿಯು ಮುಂದೆ ಮುನವಳ್ಳಿ , ಗದಗ ಜಿಲ್ಲೆಯ ಕೊಣ್ಣೂರ ಭಾಗವನ್ನ ದಾಟಿ ನಂತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿ , ಕಮತಗಿ ಮಾರ್ಗವಾಗಿ ಕೂಡಲಸಂಗಮ ಸೇರುತ್ತದೆ. ಹೀಗಾಗಿ  ಮಲಪ್ರಭಾ ನದಿಯು ಬಾಗಲಕೋಟೆ, ಬೆಳಗಾವಿ, ಗದಗ ಸೇರಿ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಂದಾಜು 360 ಕಿಮೀಗೂ ಅಧಿಕ ಉದ್ದವನ್ನು ಹೊಂದಿದ್ದು, ಈ ನದಿ ಪಾತ್ರದಲ್ಲಿ ಸಾವಿರಾರು ಕಿಮೀ ಒತ್ತುವರಿ ಯಾಗಿದೆ. ಕಳೆದ 40 ವರ್ಷಗಳ ಹಿಂದೆ 1980ರಲ್ಲಿಯೇ ರಾಮದುರ್ಗದ ನಿವಾಸಿ ಮಾರುತಿ ಚಂದರಗಿ ನಾಗರಿಕ ವೇದಿಕೆಯನ್ನು ಕಟ್ಟಿಕೊಂಡು ಮಲಪ್ರಭೆ ಸ್ವಚ್ಚತೆ ಮತ್ತು ಒತ್ತುವರಿ ತೆರವಿಗೆ ಇನ್ನಿಲ್ಲದ ಹೋರಾಟ ಮಾಡುತ್ತಲೇ ಬಂದಿದ್ರು. ಬಳಿಕ ಸೂರೇಬಾನ ಗ್ರಾಮದ ಪೂರ್ಣಿಮಾ ಗೌರೋಜಿ ನ್ಯಾಯಾಲಯದ ಮೆಟ್ಟಿಲು ಏರಿದ್ರು. ಹೀಗೆ ಸತತವಾಗಿ ಹೋರಾಟದ ಮಧ್ಯೆ ಇಂದು ನಿರಂತರ ಮಲಪ್ರಭಾ ನದಿಯ ಪ್ರವಾಹ ಸರ್ಕಾರವನ್ನು ಕಂಗೆಡುವಂತೆ ಮಾಡಿದ್ದು, ಆದ್ದರಿಂದ ಸರ್ಕಾರವೇ ಇದೀಗ ನದಿಯ ಹೂಳು ತೆಗೆಯುವುದು ಸೇರಿದಂತೆ ಒತ್ತುವರಿ ತೆರವು ನಡೆಸಲು ಮುಂದಾಗಬೇಕಿದೆ ಅಂತಾರೆ ಸಾರ್ವಜನಿಕರು. 
                                 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more