ಬಾಗಲಕೋಟೆ  ಒತ್ತುವರಿ ತೆರವಿಗೆ ನಲುಗಿದ ಮಲಪ್ರಭೆ, ಕಣ್ತೆರೆಯಬೇಕಿದೆ ಸರ್ಕಾರ

ಬಾಗಲಕೋಟೆ ಒತ್ತುವರಿ ತೆರವಿಗೆ ನಲುಗಿದ ಮಲಪ್ರಭೆ, ಕಣ್ತೆರೆಯಬೇಕಿದೆ ಸರ್ಕಾರ

Published : May 23, 2022, 02:26 PM IST

ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ಪ್ರತಿವರ್ಷ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಕೂಗು ಕೇಳಿ ಬರ್ತಿದೆ. 

ಬಾಗಲಕೋಟೆ (ಮೇ. 23): ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ಪ್ರತಿವರ್ಷ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಕೂಗು ಕೇಳಿ ಬರ್ತಿದೆ. ಈ ಮಧ್ಯೆ ಪ್ರತಿವರ್ಷ ಪ್ರವಾಹ ಭೀತಿ ಒಂದೆಡೆಯಾದ್ರೆ ಮತ್ತೊಂದೆಡೆ ಕಳಸಾ ಬಂಡೂರಿ ತಿರುವು ಯೋಜನೆ ಅನುಷ್ಠಾನ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಎಚ್ಚರಿಕೆ ಹೆಜ್ಜೆ ಇಡಬೇಕಿದೆ. 

 2009 ರಿಂದ ಹಿಡಿದು ಆಗಾಗ ಈಚೆಗೆ ಸತತವಾಗಿ ಬಹುತೇಕ ಪ್ರವಾಹದ ಎಫೆಕ್ಟ್ ಜೋರಾಗ್ತಿರೋದ್ರಿಂದ ಇದೀಗ ರಾಜ್ಯ ಸಕಾ೯ರಕ್ಕೂ ತಲೆನೋವಾಗಿ ಪರಿಣಮಿಸಿದೆ. ಹೀಗೆ ಪದೇ ಪದೇ ಪ್ರವಾಹಕ್ಕೆ ಕಾರಣವೇನು ಎಂದು ನೋಡಿದಾಗ ನದಿಯಲ್ಲಿ ಹೂಳಿರುವುದು ಮತ್ತು ನದಿಯ ಇಕ್ಕೆಲಗಳಲ್ಲಿ ಒತ್ತುವರಿ ಮಾಡಿದ್ದೇ ಮೂಲ ಕಾರಣ ಅಂತ ಗೊತ್ತಾಗಿದ್ದು, ಈ ಹಿನ್ನೆಲೆಯಲ್ಲಿ ಸಕಾ೯ರ ನದಿಯ ಅಕ್ಕಪಕ್ಕದ ಅತಿಕ್ರಮಣ ತೆರವು ಕಾಯ೯ ನಡೆಸಲು ಮುಂದಾಗಬೇಕಿದೆ. ಆದ್ರೆ ಆ ಕೆಲಸ ಆಗುತ್ತಿಲ್ಲ. ಹೀಗಾಗಿ ಸರ್ಕಾರ ಒತ್ತುವರಿಗೆ ತೆರವಿಗೆ ಮುಂದಾಗಬೇಕು ಇಲ್ಲವಾದಲ್ಲಿ ಮತ್ತೇ ಪ್ರವಾಹ ಬಂದಲ್ಲಿ ಇನ್ನಷ್ಟು ಬೆಲೆ ತೆರಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.  

ಇನ್ನು ಬೆಳಗಾವಿ ಜಿಲ್ಲೆಯ ಖಾನಾಪೂರ ದ ಕನಕುಂಬಿಯಲ್ಲಿ ಹುಟ್ಟುವ ಮಲಪ್ರಭಾ ನದಿಯು ಮುಂದೆ ಮುನವಳ್ಳಿ , ಗದಗ ಜಿಲ್ಲೆಯ ಕೊಣ್ಣೂರ ಭಾಗವನ್ನ ದಾಟಿ ನಂತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿ , ಕಮತಗಿ ಮಾರ್ಗವಾಗಿ ಕೂಡಲಸಂಗಮ ಸೇರುತ್ತದೆ. ಹೀಗಾಗಿ  ಮಲಪ್ರಭಾ ನದಿಯು ಬಾಗಲಕೋಟೆ, ಬೆಳಗಾವಿ, ಗದಗ ಸೇರಿ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಂದಾಜು 360 ಕಿಮೀಗೂ ಅಧಿಕ ಉದ್ದವನ್ನು ಹೊಂದಿದ್ದು, ಈ ನದಿ ಪಾತ್ರದಲ್ಲಿ ಸಾವಿರಾರು ಕಿಮೀ ಒತ್ತುವರಿ ಯಾಗಿದೆ. ಕಳೆದ 40 ವರ್ಷಗಳ ಹಿಂದೆ 1980ರಲ್ಲಿಯೇ ರಾಮದುರ್ಗದ ನಿವಾಸಿ ಮಾರುತಿ ಚಂದರಗಿ ನಾಗರಿಕ ವೇದಿಕೆಯನ್ನು ಕಟ್ಟಿಕೊಂಡು ಮಲಪ್ರಭೆ ಸ್ವಚ್ಚತೆ ಮತ್ತು ಒತ್ತುವರಿ ತೆರವಿಗೆ ಇನ್ನಿಲ್ಲದ ಹೋರಾಟ ಮಾಡುತ್ತಲೇ ಬಂದಿದ್ರು. ಬಳಿಕ ಸೂರೇಬಾನ ಗ್ರಾಮದ ಪೂರ್ಣಿಮಾ ಗೌರೋಜಿ ನ್ಯಾಯಾಲಯದ ಮೆಟ್ಟಿಲು ಏರಿದ್ರು. ಹೀಗೆ ಸತತವಾಗಿ ಹೋರಾಟದ ಮಧ್ಯೆ ಇಂದು ನಿರಂತರ ಮಲಪ್ರಭಾ ನದಿಯ ಪ್ರವಾಹ ಸರ್ಕಾರವನ್ನು ಕಂಗೆಡುವಂತೆ ಮಾಡಿದ್ದು, ಆದ್ದರಿಂದ ಸರ್ಕಾರವೇ ಇದೀಗ ನದಿಯ ಹೂಳು ತೆಗೆಯುವುದು ಸೇರಿದಂತೆ ಒತ್ತುವರಿ ತೆರವು ನಡೆಸಲು ಮುಂದಾಗಬೇಕಿದೆ ಅಂತಾರೆ ಸಾರ್ವಜನಿಕರು. 
                                 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more