ನದಿ ತೀರದ ಗ್ರಾಮಸ್ಥರಿಗೆ ಭೀತಿ, ಬಾಗಲಕೋಟೆಯಲ್ಲಿ ಹೆಚ್ಚುತ್ತಿದೆ ಮೊಸಳೆ ಪಾರ್ಕ್ ಬೇಡಿಕೆ

ನದಿ ತೀರದ ಗ್ರಾಮಸ್ಥರಿಗೆ ಭೀತಿ, ಬಾಗಲಕೋಟೆಯಲ್ಲಿ ಹೆಚ್ಚುತ್ತಿದೆ ಮೊಸಳೆ ಪಾರ್ಕ್ ಬೇಡಿಕೆ

Published : May 03, 2022, 03:09 PM IST

 ಉತ್ತರ ಕರ್ನಾಟಕದ ಬಾಗಲಕೋಟೆ (Bagalkot) ಜಿಲ್ಲೆ ಕೃಷ್ಣಾ,ಮಲಪ್ರಭಾ, ಘಟಪ್ರಭಾ ಮೂರು ನದಿಗಳನ್ನು ಹೊಂದಿರುವ ಜಿಲ್ಲೆ. ಇಲ್ಲಿ ಮಳೆಗಾಲ‌  ಬಂತೆಂದರೆ ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ (Flood Threat) ಶುರುವಾಗುತ್ತೆ. 
 

ಬಾಗಲಕೋಟೆ (ಮೇ. 03): ಉತ್ತರ ಕರ್ನಾಟಕದ ಬಾಗಲಕೋಟೆ (Bagalkot) ಜಿಲ್ಲೆ ಕೃಷ್ಣಾ,ಮಲಪ್ರಭಾ, ಘಟಪ್ರಭಾ ಮೂರು ನದಿಗಳನ್ನು ಹೊಂದಿರುವ ಜಿಲ್ಲೆ. ಇಲ್ಲಿ ಮಳೆಗಾಲ‌  ಬಂತೆಂದರೆ ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ (Flood Threat) ಶುರುವಾಗುತ್ತೆ. 

ಇತ್ತ ಬೇಸಿಗೆ ಕಾಲ ಬಂತೆಂದರೆ ಸಾಕು ಜನಜಾನುವಾರುಗಳಿಗೆ ಕಿಲ್ಲರ್ ಮೊಸಳೆಗಳ (Crocodile) ದಾಳಿ ಭಯ ಎದುರಾಗುತ್ತದೆ.  ಬಿರು ಬೇಸಿಗೆಯ ಮಧ್ಯೆ ಜಿಲ್ಲೆಯಲ್ಲಿ ಕೃಷ್ಣಾ ,ಮಲಪ್ರಭಾ, ಘಟಪ್ರಭಾ ನದಿ ನೀರು ಖಾಲಿಯಾಗುತ್ತಾ ಬಂದಂತೆ ನದಿ ತೀರದಲ್ಲಿ ಮೊಸಳೆಗಳ ಹಾವಳಿ ಹೆಚ್ಚಾಗುತ್ತದೆ. ಇದರಿಂದ ನದಿ ತೀರದ ಗ್ರಾಮಸ್ಥರಿಗೆ ಇನ್ನಿಲ್ಲದ ಭಯ ಸೃಷ್ಟಿಯಾಗುತ್ತಿದೆ. ಇದಕ್ಕೆ ಕಾರಣ ಅಂದರೆ ನೀರು ಖಾಲಿಯಾಗುತ್ತಿದ್ದಂತೆ ಮೊಸಳೆಗಳು ಜನಜಾನುವಾರುಗಳ ಭೇಟಿಗೆ ಹೊಂಚು ಹಾಕಿ ನಿಲ್ಲುತ್ತಿವೆ. 

ಈ ಮಧ್ಯೆ ಅಲ್ಲಲ್ಲಿ ನದಿ ತೀರದ ಗ್ರಾಮಗಳಲ್ಲಿ ಈಗಾಗಲೇ ಮೊಸಳೆಗಳು ಕಂಡು ಬರುತ್ತಿವೆ. ಕಳೆದ ಎರಡು ದಿನದ ಹಿಂದೆಯಷ್ಟೇ ಹುನಗುಂದ ತಾಲೂಕಿನ ರಾಮಥಾಳ ಗ್ರಾಮದಲ್ಲಿ 6 ಅಡಿ ಉದ್ದದ ಬೃಹತ್ ಮೊಸಳೆಯೊಂದು ರಾತ್ರೋರಾತ್ರಿ ನದಿ ಬಿಟ್ಟು ಹೊಲಕ್ಕೆ ನುಗ್ಗಿದ್ದು, ರೈತರು ಅದನ್ನು ಕಂಡು ಆತಂಕಕ್ಕೆ ಒಳಗಾದ್ರು. ತಕ್ಷಣ ರೈತರೆಲ್ಲಾ ಸೇರಿ ಮೊಸಳೆ ಕಟ್ಟಿ ಹಾಕಿ ಸುರಕ್ಷಿತ ತಾಣಕ್ಕೆ ಬಿಡಲು ಮುಂದಾದ್ರು. ಹೀಗೆ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಆತಂಕ ಶುರುವಾಗಿದ್ದು, ಇಂತಹ ಮೊಸಳೆಗಳ ನಿಯಂತ್ರಣಕ್ಕೆ ಸಧ್ಯ ಬಾಗಲಕೋಟೆ ಜಿಲ್ಲೆಯಲ್ಲಿ ಮೊಸಳೆ ಪಾರ್ಕ ನಿರ್ಮಾಣವಾಗಬೇಕು ಅಂತಾರೆ ಜಿಲ್ಲೆಯ ನಾಗರಿಕರು. 
                                   
ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿ ಬಾರಿ ಬೇಸಿಗೆ ಬಂದಾಗ ಮೂರು ನದಿ ತೀರದಲ್ಲಿ ಮೊಸಳೆ ಹಾವಳಿ ನಿರಂತರವಾಗಿರುತ್ತೆ. ಆಹಾರ ಅರಸಿ ನದಿ ದಡಕ್ಕೆ ಬರುವ ಮೊಸಳೆಗಳು ಹೊಲಕ್ಕೂ ದಾಂಗುಡಿಯಿಡುತ್ತವೆ. ಇದರಿಂದ ನದಿ ತೀರದ ಜನರಿಗೆ ನೆಮ್ಮದಿಯೇ ಮಾಯವಾದಂತಾಗಿದೆ. ಜನ‌ಜಾನುವಾರುಗಳ ಮೇಲೆ ಮೊಸಳೆಗಳು ಯಾವಾಗ ದಾಳಿ ಮಾಡುತ್ತವೆಯೋ ಎಂದು ಭಯದಲ್ಲಿ ಬದುಕಬೇಕಾಗಿದೆ. 

ಇನ್ನು ಈಗಾಗಲೇ ಒಂದು ಅಧ್ಯಯನದ ಪ್ರಕಾರ ಜಿಲ್ಲೆಯಲ್ಲಿ‌ ಮೂರು ನದಿ ತೀರದಲ್ಲಿ ಒಟ್ಟು ಐದುನೂರಕ್ಕೂ ಹೆಚ್ಚು ಮೊಸಳೆ ಇರೋದು ಬೆಳಕಿಗೆ ಬಂದಿದೆ. ಇನ್ನು ಕಳೆದ ಒಂದು ದಶಕದಲ್ಲಿ‌ ಮೊಸಳೆಗಳ ದಾಳಿಗೆ ಮೂರರಿಂದ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಅನೇಕ ಜಾನುವಾರುಗಳು ಮೊಸಳೆಗಳಿಗೆ ಆಹಾರವಾಗಿವೆ. ಇನ್ನು ಕೆಲ ಕಡೆ ಗ್ರಾಮಕ್ಕೆ ನುಗ್ಗಿದಾಗ ಜನರ ಕೈಯಲ್ಲಿ ಸಿಕ್ಕು ಮೊಸಳೆಗಳು ಕೂಡ ಸಾವನ್ನಪ್ಪಿವೆ. ಇದರಿಂದ ಜಿಲ್ಲೆಯಲ್ಲಿ ಮೊಸಳೆ ಪಾರ್ಕ್ ನಿರ್ಮಿಸಿ ಜನ ಜಾನುವಾರುಗಳನ್ನು ರಕ್ಷಣೆ ಮಾಡೋದರ ಜೊತೆಗೆ ಮೊಸಳೆಗಳನ್ನು ರಕ್ಷಣೆ ಮಾಡುವ ಕಾರ್ಯವಾಗಬೇಕಾಗಿದೆ. ಇಲ್ಲದಿದ್ದರೆ ಮತ್ತಷ್ಟು ಅನಾಹುತ ಆಗೋದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಮೊಸಳೆ ಪಾರ್ಕ ಸ್ಥಾಪನೆ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕಾಗಿದೆ  ಅಂತಾರೆ ಜಿಲ್ಲೆಯ ಜನರು.
                            
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!