ನದಿ ತೀರದ ಗ್ರಾಮಸ್ಥರಿಗೆ ಭೀತಿ, ಬಾಗಲಕೋಟೆಯಲ್ಲಿ ಹೆಚ್ಚುತ್ತಿದೆ ಮೊಸಳೆ ಪಾರ್ಕ್ ಬೇಡಿಕೆ

ನದಿ ತೀರದ ಗ್ರಾಮಸ್ಥರಿಗೆ ಭೀತಿ, ಬಾಗಲಕೋಟೆಯಲ್ಲಿ ಹೆಚ್ಚುತ್ತಿದೆ ಮೊಸಳೆ ಪಾರ್ಕ್ ಬೇಡಿಕೆ

Published : May 03, 2022, 03:09 PM IST

 ಉತ್ತರ ಕರ್ನಾಟಕದ ಬಾಗಲಕೋಟೆ (Bagalkot) ಜಿಲ್ಲೆ ಕೃಷ್ಣಾ,ಮಲಪ್ರಭಾ, ಘಟಪ್ರಭಾ ಮೂರು ನದಿಗಳನ್ನು ಹೊಂದಿರುವ ಜಿಲ್ಲೆ. ಇಲ್ಲಿ ಮಳೆಗಾಲ‌  ಬಂತೆಂದರೆ ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ (Flood Threat) ಶುರುವಾಗುತ್ತೆ. 
 

ಬಾಗಲಕೋಟೆ (ಮೇ. 03): ಉತ್ತರ ಕರ್ನಾಟಕದ ಬಾಗಲಕೋಟೆ (Bagalkot) ಜಿಲ್ಲೆ ಕೃಷ್ಣಾ,ಮಲಪ್ರಭಾ, ಘಟಪ್ರಭಾ ಮೂರು ನದಿಗಳನ್ನು ಹೊಂದಿರುವ ಜಿಲ್ಲೆ. ಇಲ್ಲಿ ಮಳೆಗಾಲ‌  ಬಂತೆಂದರೆ ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ (Flood Threat) ಶುರುವಾಗುತ್ತೆ. 

ಇತ್ತ ಬೇಸಿಗೆ ಕಾಲ ಬಂತೆಂದರೆ ಸಾಕು ಜನಜಾನುವಾರುಗಳಿಗೆ ಕಿಲ್ಲರ್ ಮೊಸಳೆಗಳ (Crocodile) ದಾಳಿ ಭಯ ಎದುರಾಗುತ್ತದೆ.  ಬಿರು ಬೇಸಿಗೆಯ ಮಧ್ಯೆ ಜಿಲ್ಲೆಯಲ್ಲಿ ಕೃಷ್ಣಾ ,ಮಲಪ್ರಭಾ, ಘಟಪ್ರಭಾ ನದಿ ನೀರು ಖಾಲಿಯಾಗುತ್ತಾ ಬಂದಂತೆ ನದಿ ತೀರದಲ್ಲಿ ಮೊಸಳೆಗಳ ಹಾವಳಿ ಹೆಚ್ಚಾಗುತ್ತದೆ. ಇದರಿಂದ ನದಿ ತೀರದ ಗ್ರಾಮಸ್ಥರಿಗೆ ಇನ್ನಿಲ್ಲದ ಭಯ ಸೃಷ್ಟಿಯಾಗುತ್ತಿದೆ. ಇದಕ್ಕೆ ಕಾರಣ ಅಂದರೆ ನೀರು ಖಾಲಿಯಾಗುತ್ತಿದ್ದಂತೆ ಮೊಸಳೆಗಳು ಜನಜಾನುವಾರುಗಳ ಭೇಟಿಗೆ ಹೊಂಚು ಹಾಕಿ ನಿಲ್ಲುತ್ತಿವೆ. 

ಈ ಮಧ್ಯೆ ಅಲ್ಲಲ್ಲಿ ನದಿ ತೀರದ ಗ್ರಾಮಗಳಲ್ಲಿ ಈಗಾಗಲೇ ಮೊಸಳೆಗಳು ಕಂಡು ಬರುತ್ತಿವೆ. ಕಳೆದ ಎರಡು ದಿನದ ಹಿಂದೆಯಷ್ಟೇ ಹುನಗುಂದ ತಾಲೂಕಿನ ರಾಮಥಾಳ ಗ್ರಾಮದಲ್ಲಿ 6 ಅಡಿ ಉದ್ದದ ಬೃಹತ್ ಮೊಸಳೆಯೊಂದು ರಾತ್ರೋರಾತ್ರಿ ನದಿ ಬಿಟ್ಟು ಹೊಲಕ್ಕೆ ನುಗ್ಗಿದ್ದು, ರೈತರು ಅದನ್ನು ಕಂಡು ಆತಂಕಕ್ಕೆ ಒಳಗಾದ್ರು. ತಕ್ಷಣ ರೈತರೆಲ್ಲಾ ಸೇರಿ ಮೊಸಳೆ ಕಟ್ಟಿ ಹಾಕಿ ಸುರಕ್ಷಿತ ತಾಣಕ್ಕೆ ಬಿಡಲು ಮುಂದಾದ್ರು. ಹೀಗೆ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಆತಂಕ ಶುರುವಾಗಿದ್ದು, ಇಂತಹ ಮೊಸಳೆಗಳ ನಿಯಂತ್ರಣಕ್ಕೆ ಸಧ್ಯ ಬಾಗಲಕೋಟೆ ಜಿಲ್ಲೆಯಲ್ಲಿ ಮೊಸಳೆ ಪಾರ್ಕ ನಿರ್ಮಾಣವಾಗಬೇಕು ಅಂತಾರೆ ಜಿಲ್ಲೆಯ ನಾಗರಿಕರು. 
                                   
ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿ ಬಾರಿ ಬೇಸಿಗೆ ಬಂದಾಗ ಮೂರು ನದಿ ತೀರದಲ್ಲಿ ಮೊಸಳೆ ಹಾವಳಿ ನಿರಂತರವಾಗಿರುತ್ತೆ. ಆಹಾರ ಅರಸಿ ನದಿ ದಡಕ್ಕೆ ಬರುವ ಮೊಸಳೆಗಳು ಹೊಲಕ್ಕೂ ದಾಂಗುಡಿಯಿಡುತ್ತವೆ. ಇದರಿಂದ ನದಿ ತೀರದ ಜನರಿಗೆ ನೆಮ್ಮದಿಯೇ ಮಾಯವಾದಂತಾಗಿದೆ. ಜನ‌ಜಾನುವಾರುಗಳ ಮೇಲೆ ಮೊಸಳೆಗಳು ಯಾವಾಗ ದಾಳಿ ಮಾಡುತ್ತವೆಯೋ ಎಂದು ಭಯದಲ್ಲಿ ಬದುಕಬೇಕಾಗಿದೆ. 

ಇನ್ನು ಈಗಾಗಲೇ ಒಂದು ಅಧ್ಯಯನದ ಪ್ರಕಾರ ಜಿಲ್ಲೆಯಲ್ಲಿ‌ ಮೂರು ನದಿ ತೀರದಲ್ಲಿ ಒಟ್ಟು ಐದುನೂರಕ್ಕೂ ಹೆಚ್ಚು ಮೊಸಳೆ ಇರೋದು ಬೆಳಕಿಗೆ ಬಂದಿದೆ. ಇನ್ನು ಕಳೆದ ಒಂದು ದಶಕದಲ್ಲಿ‌ ಮೊಸಳೆಗಳ ದಾಳಿಗೆ ಮೂರರಿಂದ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಅನೇಕ ಜಾನುವಾರುಗಳು ಮೊಸಳೆಗಳಿಗೆ ಆಹಾರವಾಗಿವೆ. ಇನ್ನು ಕೆಲ ಕಡೆ ಗ್ರಾಮಕ್ಕೆ ನುಗ್ಗಿದಾಗ ಜನರ ಕೈಯಲ್ಲಿ ಸಿಕ್ಕು ಮೊಸಳೆಗಳು ಕೂಡ ಸಾವನ್ನಪ್ಪಿವೆ. ಇದರಿಂದ ಜಿಲ್ಲೆಯಲ್ಲಿ ಮೊಸಳೆ ಪಾರ್ಕ್ ನಿರ್ಮಿಸಿ ಜನ ಜಾನುವಾರುಗಳನ್ನು ರಕ್ಷಣೆ ಮಾಡೋದರ ಜೊತೆಗೆ ಮೊಸಳೆಗಳನ್ನು ರಕ್ಷಣೆ ಮಾಡುವ ಕಾರ್ಯವಾಗಬೇಕಾಗಿದೆ. ಇಲ್ಲದಿದ್ದರೆ ಮತ್ತಷ್ಟು ಅನಾಹುತ ಆಗೋದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಮೊಸಳೆ ಪಾರ್ಕ ಸ್ಥಾಪನೆ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕಾಗಿದೆ  ಅಂತಾರೆ ಜಿಲ್ಲೆಯ ಜನರು.
                            
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!