ಶಿಥಿಲಾವಸ್ಥೆ ತಲುಪಿದ ಚಿಕ್ಕಮಗಳೂರಿನ ಹಳೆಯ ಸೇತುವೆ..ಭಯದಿಂದಲೇ ವಾಹನ ಸವಾರರ ಸಂಚಾರ

ಶಿಥಿಲಾವಸ್ಥೆ ತಲುಪಿದ ಚಿಕ್ಕಮಗಳೂರಿನ ಹಳೆಯ ಸೇತುವೆ..ಭಯದಿಂದಲೇ ವಾಹನ ಸವಾರರ ಸಂಚಾರ

Published : Nov 27, 2023, 10:52 AM IST

ಅದು 125 ವರ್ಷದ ಹಳೆಯ ಸೇತುವೆ. ಬ್ರಿಟಿಷರು ಕಟ್ಟಿದ್ದು. ಆ ಸೇತುವೆ ಏನಾದ್ರು ಮುರಿದು ಬಿದ್ರೆ ಮೂರು ತಾಲೂಕಿನ ಜನ ಅತಂತ್ರರಾಗ್ತಾರೆ. 20-30 ಕಿ.ಮೀ. ದೂರಕ್ಕೆ 70-80 ಕಿ.ಮೀ. ಸುತ್ತಿಬಳಸಿ ಬರಬೇಕು. ಆ ಸೇತುವೆ ಬಿರುಕು ಬಿಟ್ಟಿದೆ. ಅಧಿಕಾರಿಗಳು ನೋ ಪ್ರಾಬ್ಲಂ ಅಂತೇಳಿದ್ದಾರೆ. ಆದ್ರು, ಸ್ಥಳಿಯರು-ಪ್ರವಾಸಿಗರ ಆತಂಕ ಮಾತ್ರ ದೂರವಾಗಿಲ್ಲ. 
 

ಶಿಥಿಲಗೊಂಡ ಸೇತುವೆ.. ಬ್ರಿಡ್ಜ್ ಅಕ್ಕಪಕ್ಕ ಬೆಳೆದಿರೋ ಗಿಡಗಂಟಿಗಳು. ಇದು ಶತಮಾನದ ಸೇತುವೆ ಅನ್ನೋದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ.. ನಿಜ ಆಂಗ್ಲರ ಕಾಲದಲ್ಲಿ ಅಂದ್ರೆ  125 ವರ್ಷಗಳ ಹಿಂದೆ ನಿರ್ಮಾಣವಾಗಿರೋ ಸೇರುವೆ ಇದು. ಚಿಕ್ಕಮಗಳೂರು(Chikkamagaluru) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಸೇತುವೆ ಎನ್.ಆರ್.ಪುರ, ಶೃಂಗೇರಿ, ಕೊಪ್ಪ ಭಾಗದ ನೂರಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುತ್ತೆ. ಆದ್ರೆ, ಶಿಥಿಲಗೊಂಡ ಸೇತುವೆ ಯಾವಾಗ ಧರೆಗುರುಳುತ್ತೋ ಅನ್ನೋ ಆತಂಕದಲ್ಲಿ ಜನ ಓಡಾಡುವಂತಾಗಿದೆ. ಈ ಸೇತುವೆ(Bridge) ಸ್ಥಿತಿ ಕಂಡು 2027ರಲ್ಲೇ ಸಿಎಂ ಸಿದ್ದರಾಮಯ್ಯ ಹೊಸ ಸೇತುವೆ ಕಾಮಗಾರಿಗೆ ಗುದ್ದಿಲಿಪೂಜೆ ನೆರವೇರಿಸಿದ್ದರು. ಕೆಲಸವೂ ಆರಂಭವಾಗಿತ್ತು. ಭದ್ರಾ ನದಿ(Bhadra River) ಮಧ್ಯೆ ಪಿಲ್ಲರ್ ಹಾಗೂ ಬೀಮ್ ಮಟ್ಟಕ್ಕೆ ಏರಿಸಿ ಕೆಲಸ ನಿಲ್ಲಿಸಿದ್ರು. ಶಾಸಕ ರಾಜೇಗೌಡ ಗುತ್ತಿಗೆದಾರನಿಗೆ ಕ್ಲಾಸ್ ತೆಗೆದುಕೊಂಡಿದ್ರು. ಇದರ ಬೆನ್ನಲ್ಲೇ ಮತ್ತಷ್ಟು ಕೆಲಸ ಮಾಡಿ ಬೀಮ್ ಮಟ್ಟಕ್ಕೆ ಏರಿಸಿದ್ರು. ಇದೀಗ ಮತ್ತೆ ಕೆಲಸ ನಿಲ್ಲಿಸಿದ್ದಾರೆ. ಸರ್ಕಾರ ಸೂಕ್ತವಾಗಿ ಹಣ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರರು ಹಣವಿಲ್ಲದೇ ಕೆಲಸ ನಿಲ್ಲಿಸಿದ್ದಾರೆ ಅನ್ನೋದು ಸ್ಥಳೀಯರ ಆರೋಪ. ಮಳೆಗಾಲದಲ್ಲಿ ಸೇತುವೆ ಮೇಲೆಲ್ಲ ನೀರು ತುಂಬಿಕೊಂಡು ಯಾವಾಗ ಸೇತುವೆ ಕೊಚ್ಚಿ ಹೋಗುತ್ತೋ ಅನ್ನೋ ಆತಂಕದಲ್ಲಿ ವಾಹನಗಳು ಓಡಾಡುತ್ತವೆ... ಆದ್ರೆ ಸೇತುವೆ ಪರಿಶೀಲಿನೆ ನಡೆಸಿದ ಅಧಿಕಾರಿಗಳು ಮಾತ್ರ ಸೇತುವೆ ಗಟ್ಟಿಮುಟ್ಟಾಗಿದೆ. ಓಡಾಡಬಹುದು ಅನ್ನೋ ವರದಿ ನೀಡಿದ್ದಾರಂತೆ.ಅಧಿಕಾರಿಗಳು ಸೇತುವೆ ಗಟ್ಟಿ ಮುಟ್ಟಾಗಿದೆ ಎಂದು ಹೇಳಿದ್ರೂ, ಮೇಲ್ನೋಟಕ್ಕೆ ಸೇತುವೆ ಎಷ್ಟು ಗಟ್ಟಿಮುಟ್ಟಾಗಿದೆ ಅನ್ನೋದನ್ನು ತೋರಿಸುತ್ತಿದೆ. ಇದೇ ಕಾರಣಕ್ಕೆ ಹೊಸ ಸೇತುವೆ ನಿರ್ಮಾಣಕ್ಕೆ ಚಾಲನೆ ಕೂಡ ಸಿಕ್ಕಿದೆ. ಆದ್ರೆ, ಸರಿಯಾಗಿ ಹಣ ಬಿಡುಗಡೆ ಆಗ್ತಿಲ್ಲ ಅನ್ನೋ ಕಾರಣಕ್ಕೆ ಕಾಮಗಾರಿ ಅರ್ಧಕ್ಕೆ ನಿಂತಿದೆ.

ಇದನ್ನೂ ವೀಕ್ಷಿಸಿ:  ಗಣಿನಾಡಲ್ಲಿ ‘ಕೈ-ಕಮಲ’ದ ಮಧ್ಯೆ ಟವರ್ ರಾಜಕೀಯ.. ರಾಷ್ಟ್ರೀಯ ಪಕ್ಷಗಳ ಕಿತ್ತಾಟದಿಂದ ಅರ್ಧಕ್ಕೆ ನಿಂತ ಕೆಲಸ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more