ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

Published : Dec 07, 2024, 06:34 PM ISTUpdated : Dec 07, 2024, 06:35 PM IST

ಕರ್ನಾಟಕದಲ್ಲಿ ಬಾಣಂತಿಯರ ಸಾವಿನ ಹಿಂದೆ ಔಷಧ ಸುರಕ್ಷತೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಕಂಡುಬಂದಿದೆ. ರಾಜ್ಯದಲ್ಲಿ 102 ಡ್ರಗ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇದ್ದು, ಔಷಧಿಗಳ ಗುಣಮಟ್ಟ ಪರಿಶೀಲನೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. 2021ರಲ್ಲಿ ನೇಮಕಗೊಂಡ 83 ಡ್ರಗ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ.

ಬೆಂಗಳೂರು (ಡಿ.7): ರಾಜ್ಯದಲ್ಲಿ ಸಾಲು ಸಾಲು ಬಾಣಂತಿಯರು ಸಾವು ಕಾಣುತ್ತಿದ್ದಾರೆ. ಇದರಲ್ಲಿ ಸರ್ಕಾರದ ಮಟ್ಟದಲ್ಲಿಯೇ ದೊಡ್ಡ ತಪ್ಪಾಗಿರುವುದೂ ಗೊತ್ತಾಗಿದೆ. ಔಷಧ ಸುರಕ್ಷತೆ ವಿಚಾರದಲ್ಲಿ ಸರ್ಕಾರದ ತೀವ್ರ ನಿರ್ಲಕ್ಷ್ಯ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ವಿಚಾರದಲ್ಲೂ ಬಯಲಾಗಿದೆ.

ರಾಜ್ಯಕ್ಕೆ ಬರುವ ಡ್ರಗ್‌ಗಳ ಮೇಲ್ವಿಚಾರಣೆ ಮಾಡುವ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆಯಲ್ಲೂ ಸರ್ಕಾರ ನಿರ್ಲಕ್ಷ್ಯ ತೋರಿದೆ. 113 ಡ್ರಗ್‌ ಇನ್ಸ್‌ಪೆಕ್ಟರ್‌ಗಳು ರಾಜ್ಯದಲ್ಲಿ ಇರಬೇಕು. ಆದರೆ,ಪ್ರಸ್ತುತ ಬರೀ 11 ಮಂದಿ ಮಾತ್ರವೇ ಕೆಲಸ ಮಾಡುತ್ತಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್‌ನ ಫನ್‌ ರೈಡ್‌ ವೇಳೆ ಮಗನ ಸಾವು, ಪೋಷಕರಿಗೆ ಸಿಕ್ತು 2624 ಕೋಟಿ ಪರಿಹಾರ!

ರಾಜ್ಯದಲ್ಲಿ ಇನ್ನೂ 102 ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆ ಖಾಲಿ ಇದೆ. ಇದಕ್ಕೆ ಜನರ ನೇಮಕ ಮಾಡುವ ಉತ್ಸಾಹವೇ ಸರ್ಕಾರಕ್ಕೆ ಇದ್ದಂತಿಲ್ಲ. ಡ್ರಗ್‌ ಇನ್ಸ್‌ಪೆಕ್ಟರ್‌ಗಳೇ ಇಲ್ಲದೆ ರಾಜ್ಯದಲ್ಲಿ ಆಸ್ಪತ್ರೆಗಳು ನಡೆಯುತ್ತಿವೆ. ಬಂದಿರುವ ಔಷಧಿಗಳು ಕಳಪೆಯೋ, ಇಲ್ಲವೋ ಅನ್ನೋದನ್ನ ಪರಿಶೀಲನೆ ಮಾಡೋರೇ ಇಲ್ಲದಂತಾಗಿದೆ. 2021ರಲ್ಲಿ 83 ಡ್ರಗ್ ಇನ್ಸ್‌ಪೆಕ್ಟರ್‌ಅನ್ನು ಕೊನೆಯ ಬಾರಿಗೆ ನೇಮಕ ಮಾಡಲಾಗಿತ್ತು. ನೇಮಕ ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಹೈಕೋರ್ಟ್ ‌ಮೊರೆ ಹೋಗಿದ್ದರು.

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more