ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

Published : Oct 14, 2023, 11:02 AM IST

ಕಾವೇರಿ ಸಂಘರ್ಷವಲ್ಲದೇ ತುಂಗಭದ್ರಾ ಸಂಘರ್ಷವೂ ತಲೆದೂರಿಗೆ, ರೈತರು ತಮ್ಮ ಬೆಳೆಗೆ ನೀರಿಲ್ಲದೇ ತೆಲಂಗಾಣ ಕೋಟ ನೀರನ್ನೇ ಕೊಟ್ಟು ನಮ್ಮ ಉಳಿಸಿ ಎಂದು ಸರ್ಕಾರದ ಮೊರೆ ಹೋಗಿದ್ದಾರೆ.
 

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರೈತರಿಗೆ ಕಣ್ಣಿರು ತರಿಸಿದೆ. ಒಂದ್ಕಡೆ ಮಳೆ ಇಲ್ಲದೆ ಬೆಳೆ ಇಲ್ಲ, ಇನ್ನೊಂದ್ಕಡೆ ಡ್ಯಾಂನಲ್ಲಿ ನೀರಿಲ್ಲ, ಈ ನಡುವೆ ಮೆಣಸಿನಕಾಯಿ ಮತ್ತು ಹತ್ತಿ ಬೆಳೆ ಉಳಿಸಿಕೊಳ್ಳಲು ಬಳ್ಳಾರಿ ರೈತರು ಹರಸಾಹಸ ಪಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ನವೆಂಬರ್ 10ರವರೆಗೂ ಎಚ್ಎಲ್ಸಿ ಕಾಲುವೆಗೆ ನೀರು ಬಿಡೋದಾಗಿ ಸರ್ಕಾರ ಹೇಳಿದೆ. ಆದ್ರೆ ನವೆಂಬರ್ 10ರ ನಂತರ ಸರ್ಕಾರ ನೀರು ಬಿಡದೇ ಹೋದರೆ ಬೆಳೆ ಹಾಳಾಗುತ್ತದೆ. ನವೆಂಬರ್ 30ರವರೆಗೂ ನೀರು ಬಿಡಿ ಎನ್ನುತ್ತಿದ್ದಾರೆ ರೈತರು. ಸದ್ಯ ಜಲಾಶಯದಲ್ಲಿ ಕೇವಲ 48 ಟಿಎಂಸಿ ನೀರಿದೆ. ಹಿಂಗಾರು ಮಳೆ ಏನಾದ್ರೂ ಚೆನ್ನಾಗಿ ಬಂದ್ರೇ, ಮುಂಬರುವ ಬೇಸಿಗೆಯವರೆಗೂ ಕುಡಿಯುವದಕ್ಕೆ ಮತ್ತು ಬೆಳೆಗೆ ಯಾವುದೇ ಸಮಸ್ಯೆಯಾಗಲ್ಲ. ಹಿಂಗಾರು ಮಳೆ ಕೈಬಿಟ್ಟರೆ ಬೆಳೆಗೆ ನೀರು ಬಿಡೋದಿರಲಿ, ಕುಡಿಯುವ ನೀರಿಗೂ ಸಮಸ್ಯೆಯಾಗುತ್ತದೆ. ರಾಜ್ಯದ ಬಳ್ಳಾರಿ, ಕೊಪ್ಪಳ,ವಿಜಯನಗರ ಮತ್ತು ರಾಯಚೂರು ಸೇರಿದಂತೆ ಕರ್ನೂಲ್, ಅನಂತಪುರ ಸೇರಿದಂತೆ ಹಲವು ಜಿಲ್ಲೆಗಳು ಕುಡಿಯುವ ನೀರಿಗೆ ತುಂಗಭಧ್ರ ಜಲಾಶವೇ ಆಧಾರವಾಗಿದೆ. ಸದ್ಯ ತೆಲಂಗಾಣದ ಕೋಟಾದ ಮೂರುವರೆ ಟಿಎಂಸಿ ಮಾತ್ರ ಇದೆ. ಹೀಗಾಗಿ ಆಂಧ್ರ-ತೆಲಂಗಾಣ ಸಚಿವರ ಜೊತೆ ಮಾತನಾಡಿ ಆ ನೀರು ನಮಗೆ ನೀಡಿ ಎನ್ನುತ್ತಿದ್ದಾರೆ ಬಳ್ಳಾರಿ ರೈತರು. ತೆಲಂಗಾಣ ಕೋಟಾದ ಮೂರುವರೆ ಟಿಎಂಸಿ ನೀರು ಹಂತ ಹಂತವಾಗಿ ಹೆಚ್ಎಲ್ಸಿ ಕಾಲುವೆಗೆ ಬಿಡೋದು ಅನಿವಾರ್ಯವಾಗಿದೆ. ನೀರು ಬಿಟ್ಟರೇ, ಕೇವಲ ಕರ್ನಾಟಕವಷ್ಟೇ ಅಲ್ಲದೇ ಆಂಧ್ರ ಪ್ರದೇಶ ರೈತರ ಬೆಳೆ ಉಳಿಯುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳು ಮನಸ್ಸು ಮಾಡಬೇಕಿದೆ ಎನ್ನುತ್ತಿದ್ದಾರೆ ರೈತರು.

ಇದನ್ನೂ ವೀಕ್ಷಿಸಿ: ಕೆಇಎ ಬಳಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಸರ್‌ಪ್ರೈಸ್‌: ಸಮಸ್ಯೆ ಆಲಿಸಿದ ಸಚಿವ ಎಂ.ಸಿ. ಸುಧಾಕರ್‌

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more