ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

Published : Oct 14, 2023, 11:02 AM IST

ಕಾವೇರಿ ಸಂಘರ್ಷವಲ್ಲದೇ ತುಂಗಭದ್ರಾ ಸಂಘರ್ಷವೂ ತಲೆದೂರಿಗೆ, ರೈತರು ತಮ್ಮ ಬೆಳೆಗೆ ನೀರಿಲ್ಲದೇ ತೆಲಂಗಾಣ ಕೋಟ ನೀರನ್ನೇ ಕೊಟ್ಟು ನಮ್ಮ ಉಳಿಸಿ ಎಂದು ಸರ್ಕಾರದ ಮೊರೆ ಹೋಗಿದ್ದಾರೆ.
 

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರೈತರಿಗೆ ಕಣ್ಣಿರು ತರಿಸಿದೆ. ಒಂದ್ಕಡೆ ಮಳೆ ಇಲ್ಲದೆ ಬೆಳೆ ಇಲ್ಲ, ಇನ್ನೊಂದ್ಕಡೆ ಡ್ಯಾಂನಲ್ಲಿ ನೀರಿಲ್ಲ, ಈ ನಡುವೆ ಮೆಣಸಿನಕಾಯಿ ಮತ್ತು ಹತ್ತಿ ಬೆಳೆ ಉಳಿಸಿಕೊಳ್ಳಲು ಬಳ್ಳಾರಿ ರೈತರು ಹರಸಾಹಸ ಪಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ನವೆಂಬರ್ 10ರವರೆಗೂ ಎಚ್ಎಲ್ಸಿ ಕಾಲುವೆಗೆ ನೀರು ಬಿಡೋದಾಗಿ ಸರ್ಕಾರ ಹೇಳಿದೆ. ಆದ್ರೆ ನವೆಂಬರ್ 10ರ ನಂತರ ಸರ್ಕಾರ ನೀರು ಬಿಡದೇ ಹೋದರೆ ಬೆಳೆ ಹಾಳಾಗುತ್ತದೆ. ನವೆಂಬರ್ 30ರವರೆಗೂ ನೀರು ಬಿಡಿ ಎನ್ನುತ್ತಿದ್ದಾರೆ ರೈತರು. ಸದ್ಯ ಜಲಾಶಯದಲ್ಲಿ ಕೇವಲ 48 ಟಿಎಂಸಿ ನೀರಿದೆ. ಹಿಂಗಾರು ಮಳೆ ಏನಾದ್ರೂ ಚೆನ್ನಾಗಿ ಬಂದ್ರೇ, ಮುಂಬರುವ ಬೇಸಿಗೆಯವರೆಗೂ ಕುಡಿಯುವದಕ್ಕೆ ಮತ್ತು ಬೆಳೆಗೆ ಯಾವುದೇ ಸಮಸ್ಯೆಯಾಗಲ್ಲ. ಹಿಂಗಾರು ಮಳೆ ಕೈಬಿಟ್ಟರೆ ಬೆಳೆಗೆ ನೀರು ಬಿಡೋದಿರಲಿ, ಕುಡಿಯುವ ನೀರಿಗೂ ಸಮಸ್ಯೆಯಾಗುತ್ತದೆ. ರಾಜ್ಯದ ಬಳ್ಳಾರಿ, ಕೊಪ್ಪಳ,ವಿಜಯನಗರ ಮತ್ತು ರಾಯಚೂರು ಸೇರಿದಂತೆ ಕರ್ನೂಲ್, ಅನಂತಪುರ ಸೇರಿದಂತೆ ಹಲವು ಜಿಲ್ಲೆಗಳು ಕುಡಿಯುವ ನೀರಿಗೆ ತುಂಗಭಧ್ರ ಜಲಾಶವೇ ಆಧಾರವಾಗಿದೆ. ಸದ್ಯ ತೆಲಂಗಾಣದ ಕೋಟಾದ ಮೂರುವರೆ ಟಿಎಂಸಿ ಮಾತ್ರ ಇದೆ. ಹೀಗಾಗಿ ಆಂಧ್ರ-ತೆಲಂಗಾಣ ಸಚಿವರ ಜೊತೆ ಮಾತನಾಡಿ ಆ ನೀರು ನಮಗೆ ನೀಡಿ ಎನ್ನುತ್ತಿದ್ದಾರೆ ಬಳ್ಳಾರಿ ರೈತರು. ತೆಲಂಗಾಣ ಕೋಟಾದ ಮೂರುವರೆ ಟಿಎಂಸಿ ನೀರು ಹಂತ ಹಂತವಾಗಿ ಹೆಚ್ಎಲ್ಸಿ ಕಾಲುವೆಗೆ ಬಿಡೋದು ಅನಿವಾರ್ಯವಾಗಿದೆ. ನೀರು ಬಿಟ್ಟರೇ, ಕೇವಲ ಕರ್ನಾಟಕವಷ್ಟೇ ಅಲ್ಲದೇ ಆಂಧ್ರ ಪ್ರದೇಶ ರೈತರ ಬೆಳೆ ಉಳಿಯುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳು ಮನಸ್ಸು ಮಾಡಬೇಕಿದೆ ಎನ್ನುತ್ತಿದ್ದಾರೆ ರೈತರು.

ಇದನ್ನೂ ವೀಕ್ಷಿಸಿ: ಕೆಇಎ ಬಳಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಸರ್‌ಪ್ರೈಸ್‌: ಸಮಸ್ಯೆ ಆಲಿಸಿದ ಸಚಿವ ಎಂ.ಸಿ. ಸುಧಾಕರ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more