ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

Published : Oct 14, 2023, 11:02 AM IST

ಕಾವೇರಿ ಸಂಘರ್ಷವಲ್ಲದೇ ತುಂಗಭದ್ರಾ ಸಂಘರ್ಷವೂ ತಲೆದೂರಿಗೆ, ರೈತರು ತಮ್ಮ ಬೆಳೆಗೆ ನೀರಿಲ್ಲದೇ ತೆಲಂಗಾಣ ಕೋಟ ನೀರನ್ನೇ ಕೊಟ್ಟು ನಮ್ಮ ಉಳಿಸಿ ಎಂದು ಸರ್ಕಾರದ ಮೊರೆ ಹೋಗಿದ್ದಾರೆ.
 

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರೈತರಿಗೆ ಕಣ್ಣಿರು ತರಿಸಿದೆ. ಒಂದ್ಕಡೆ ಮಳೆ ಇಲ್ಲದೆ ಬೆಳೆ ಇಲ್ಲ, ಇನ್ನೊಂದ್ಕಡೆ ಡ್ಯಾಂನಲ್ಲಿ ನೀರಿಲ್ಲ, ಈ ನಡುವೆ ಮೆಣಸಿನಕಾಯಿ ಮತ್ತು ಹತ್ತಿ ಬೆಳೆ ಉಳಿಸಿಕೊಳ್ಳಲು ಬಳ್ಳಾರಿ ರೈತರು ಹರಸಾಹಸ ಪಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ನವೆಂಬರ್ 10ರವರೆಗೂ ಎಚ್ಎಲ್ಸಿ ಕಾಲುವೆಗೆ ನೀರು ಬಿಡೋದಾಗಿ ಸರ್ಕಾರ ಹೇಳಿದೆ. ಆದ್ರೆ ನವೆಂಬರ್ 10ರ ನಂತರ ಸರ್ಕಾರ ನೀರು ಬಿಡದೇ ಹೋದರೆ ಬೆಳೆ ಹಾಳಾಗುತ್ತದೆ. ನವೆಂಬರ್ 30ರವರೆಗೂ ನೀರು ಬಿಡಿ ಎನ್ನುತ್ತಿದ್ದಾರೆ ರೈತರು. ಸದ್ಯ ಜಲಾಶಯದಲ್ಲಿ ಕೇವಲ 48 ಟಿಎಂಸಿ ನೀರಿದೆ. ಹಿಂಗಾರು ಮಳೆ ಏನಾದ್ರೂ ಚೆನ್ನಾಗಿ ಬಂದ್ರೇ, ಮುಂಬರುವ ಬೇಸಿಗೆಯವರೆಗೂ ಕುಡಿಯುವದಕ್ಕೆ ಮತ್ತು ಬೆಳೆಗೆ ಯಾವುದೇ ಸಮಸ್ಯೆಯಾಗಲ್ಲ. ಹಿಂಗಾರು ಮಳೆ ಕೈಬಿಟ್ಟರೆ ಬೆಳೆಗೆ ನೀರು ಬಿಡೋದಿರಲಿ, ಕುಡಿಯುವ ನೀರಿಗೂ ಸಮಸ್ಯೆಯಾಗುತ್ತದೆ. ರಾಜ್ಯದ ಬಳ್ಳಾರಿ, ಕೊಪ್ಪಳ,ವಿಜಯನಗರ ಮತ್ತು ರಾಯಚೂರು ಸೇರಿದಂತೆ ಕರ್ನೂಲ್, ಅನಂತಪುರ ಸೇರಿದಂತೆ ಹಲವು ಜಿಲ್ಲೆಗಳು ಕುಡಿಯುವ ನೀರಿಗೆ ತುಂಗಭಧ್ರ ಜಲಾಶವೇ ಆಧಾರವಾಗಿದೆ. ಸದ್ಯ ತೆಲಂಗಾಣದ ಕೋಟಾದ ಮೂರುವರೆ ಟಿಎಂಸಿ ಮಾತ್ರ ಇದೆ. ಹೀಗಾಗಿ ಆಂಧ್ರ-ತೆಲಂಗಾಣ ಸಚಿವರ ಜೊತೆ ಮಾತನಾಡಿ ಆ ನೀರು ನಮಗೆ ನೀಡಿ ಎನ್ನುತ್ತಿದ್ದಾರೆ ಬಳ್ಳಾರಿ ರೈತರು. ತೆಲಂಗಾಣ ಕೋಟಾದ ಮೂರುವರೆ ಟಿಎಂಸಿ ನೀರು ಹಂತ ಹಂತವಾಗಿ ಹೆಚ್ಎಲ್ಸಿ ಕಾಲುವೆಗೆ ಬಿಡೋದು ಅನಿವಾರ್ಯವಾಗಿದೆ. ನೀರು ಬಿಟ್ಟರೇ, ಕೇವಲ ಕರ್ನಾಟಕವಷ್ಟೇ ಅಲ್ಲದೇ ಆಂಧ್ರ ಪ್ರದೇಶ ರೈತರ ಬೆಳೆ ಉಳಿಯುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳು ಮನಸ್ಸು ಮಾಡಬೇಕಿದೆ ಎನ್ನುತ್ತಿದ್ದಾರೆ ರೈತರು.

ಇದನ್ನೂ ವೀಕ್ಷಿಸಿ: ಕೆಇಎ ಬಳಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಸರ್‌ಪ್ರೈಸ್‌: ಸಮಸ್ಯೆ ಆಲಿಸಿದ ಸಚಿವ ಎಂ.ಸಿ. ಸುಧಾಕರ್‌

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more