ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

Published : Oct 14, 2023, 11:02 AM IST

ಕಾವೇರಿ ಸಂಘರ್ಷವಲ್ಲದೇ ತುಂಗಭದ್ರಾ ಸಂಘರ್ಷವೂ ತಲೆದೂರಿಗೆ, ರೈತರು ತಮ್ಮ ಬೆಳೆಗೆ ನೀರಿಲ್ಲದೇ ತೆಲಂಗಾಣ ಕೋಟ ನೀರನ್ನೇ ಕೊಟ್ಟು ನಮ್ಮ ಉಳಿಸಿ ಎಂದು ಸರ್ಕಾರದ ಮೊರೆ ಹೋಗಿದ್ದಾರೆ.
 

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರೈತರಿಗೆ ಕಣ್ಣಿರು ತರಿಸಿದೆ. ಒಂದ್ಕಡೆ ಮಳೆ ಇಲ್ಲದೆ ಬೆಳೆ ಇಲ್ಲ, ಇನ್ನೊಂದ್ಕಡೆ ಡ್ಯಾಂನಲ್ಲಿ ನೀರಿಲ್ಲ, ಈ ನಡುವೆ ಮೆಣಸಿನಕಾಯಿ ಮತ್ತು ಹತ್ತಿ ಬೆಳೆ ಉಳಿಸಿಕೊಳ್ಳಲು ಬಳ್ಳಾರಿ ರೈತರು ಹರಸಾಹಸ ಪಡುತ್ತಿದ್ದಾರೆ. ತುಂಗಭದ್ರಾ ಜಲಾಶಯದಿಂದ ನವೆಂಬರ್ 10ರವರೆಗೂ ಎಚ್ಎಲ್ಸಿ ಕಾಲುವೆಗೆ ನೀರು ಬಿಡೋದಾಗಿ ಸರ್ಕಾರ ಹೇಳಿದೆ. ಆದ್ರೆ ನವೆಂಬರ್ 10ರ ನಂತರ ಸರ್ಕಾರ ನೀರು ಬಿಡದೇ ಹೋದರೆ ಬೆಳೆ ಹಾಳಾಗುತ್ತದೆ. ನವೆಂಬರ್ 30ರವರೆಗೂ ನೀರು ಬಿಡಿ ಎನ್ನುತ್ತಿದ್ದಾರೆ ರೈತರು. ಸದ್ಯ ಜಲಾಶಯದಲ್ಲಿ ಕೇವಲ 48 ಟಿಎಂಸಿ ನೀರಿದೆ. ಹಿಂಗಾರು ಮಳೆ ಏನಾದ್ರೂ ಚೆನ್ನಾಗಿ ಬಂದ್ರೇ, ಮುಂಬರುವ ಬೇಸಿಗೆಯವರೆಗೂ ಕುಡಿಯುವದಕ್ಕೆ ಮತ್ತು ಬೆಳೆಗೆ ಯಾವುದೇ ಸಮಸ್ಯೆಯಾಗಲ್ಲ. ಹಿಂಗಾರು ಮಳೆ ಕೈಬಿಟ್ಟರೆ ಬೆಳೆಗೆ ನೀರು ಬಿಡೋದಿರಲಿ, ಕುಡಿಯುವ ನೀರಿಗೂ ಸಮಸ್ಯೆಯಾಗುತ್ತದೆ. ರಾಜ್ಯದ ಬಳ್ಳಾರಿ, ಕೊಪ್ಪಳ,ವಿಜಯನಗರ ಮತ್ತು ರಾಯಚೂರು ಸೇರಿದಂತೆ ಕರ್ನೂಲ್, ಅನಂತಪುರ ಸೇರಿದಂತೆ ಹಲವು ಜಿಲ್ಲೆಗಳು ಕುಡಿಯುವ ನೀರಿಗೆ ತುಂಗಭಧ್ರ ಜಲಾಶವೇ ಆಧಾರವಾಗಿದೆ. ಸದ್ಯ ತೆಲಂಗಾಣದ ಕೋಟಾದ ಮೂರುವರೆ ಟಿಎಂಸಿ ಮಾತ್ರ ಇದೆ. ಹೀಗಾಗಿ ಆಂಧ್ರ-ತೆಲಂಗಾಣ ಸಚಿವರ ಜೊತೆ ಮಾತನಾಡಿ ಆ ನೀರು ನಮಗೆ ನೀಡಿ ಎನ್ನುತ್ತಿದ್ದಾರೆ ಬಳ್ಳಾರಿ ರೈತರು. ತೆಲಂಗಾಣ ಕೋಟಾದ ಮೂರುವರೆ ಟಿಎಂಸಿ ನೀರು ಹಂತ ಹಂತವಾಗಿ ಹೆಚ್ಎಲ್ಸಿ ಕಾಲುವೆಗೆ ಬಿಡೋದು ಅನಿವಾರ್ಯವಾಗಿದೆ. ನೀರು ಬಿಟ್ಟರೇ, ಕೇವಲ ಕರ್ನಾಟಕವಷ್ಟೇ ಅಲ್ಲದೇ ಆಂಧ್ರ ಪ್ರದೇಶ ರೈತರ ಬೆಳೆ ಉಳಿಯುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳು ಮನಸ್ಸು ಮಾಡಬೇಕಿದೆ ಎನ್ನುತ್ತಿದ್ದಾರೆ ರೈತರು.

ಇದನ್ನೂ ವೀಕ್ಷಿಸಿ: ಕೆಇಎ ಬಳಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಸರ್‌ಪ್ರೈಸ್‌: ಸಮಸ್ಯೆ ಆಲಿಸಿದ ಸಚಿವ ಎಂ.ಸಿ. ಸುಧಾಕರ್‌

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more