ಬಳ್ಳಾರಿಯಲ್ಲಿ ಎಳ್ಳಮವಾಸ್ಯೆ ದಿನದಂದು ಭಯಾನಕ ವಾಮಾಚಾರ; 4 ತಲೆಬುರುಡೆ, ಎಲುಬು ಇಟ್ಟು ಪೂಜೆ!

ಬಳ್ಳಾರಿಯಲ್ಲಿ ಎಳ್ಳಮವಾಸ್ಯೆ ದಿನದಂದು ಭಯಾನಕ ವಾಮಾಚಾರ; 4 ತಲೆಬುರುಡೆ, ಎಲುಬು ಇಟ್ಟು ಪೂಜೆ!

Published : Dec 30, 2024, 08:46 PM IST

ಬಳ್ಳಾರಿಯ ಮಾರ್ಕಂಡೇಯ ಕಾಲೋನಿಯಲ್ಲಿ ಎಳ್ಳಮವಾಸ್ಯೆ ದಿನದಂದು ನಾಲ್ಕು ತಲೆಬುರುಡೆ ಮತ್ತು ಹಲವಾರು ಎಲುಬುಗಳನ್ನು ಬಳಸಿ ವಾಮಾಚಾರ ಮಾಡಲಾಗಿದೆ. ಇದರಿಂದಾಗಿ ಸ್ಥಳೀಯರು ಭಯಭೀತರಾಗಿದ್ದು, ಮನೆಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪದೇ ಪದೇ ವಾಮಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರ ಅಳವಡಿಸುವಂತೆ ಮತ್ತು ಪೊಲೀಸ್ ಗಸ್ತು ಹೆಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಬಳ್ಳಾರಿ (ಡಿ.30): ಬಳ್ಳಾರಿ ನಗರದ ಜನತೆಯನ್ನೇ ಬೆಚ್ಚಿ ಬೀಳಿಸುವಂತಹ ಘಟನೆ ಎಳ್ಳಮವಾಸೆ ದಿನದಂದು ಮಾಡಲಾಗಿದೆ. ಬಳ್ಳಾರಿಯ ಜನರನ್ನು ಭಯ ಬೀಳುವ ರೀತಿಯಲ್ಲಿ ತುಂಬಿದ ಓಣಿಯಲ್ಲಿ ವಾಮಾಚಾರ ಮಾಡಲಾಗಿದೆ. ನಾಲ್ಕು ತಲೆಬುರುಡೆ, ಹತ್ತಾರು ಎಲುಬುಗಳನ್ನು ಮುಂದಿಟ್ಟು, ಕೂದಲು ಸುಟ್ಟು, ದೀಪ ಹಚ್ಚಿಟ್ಟು ಪೂಜೆ ಮಾಡಲಾಗಿದೆ. ಇದರಿಂದ ಮಾರ್ಕಂಡೇಯ ಕಾಲೋನಿ ಜನರು ಬೆಚ್ಚಿ ಬಿದ್ದಿದ್ದಾರೆ.

ಇಡೀ ವರ್ಷದಲ್ಲಿ ಅತ್ಯಂತ ಕೆಟ್ಟ ಅಮವಾಸ್ಯೆ ಎಂದು ಹೇಳಲಾಗುವ ಈ ಎಳ್ಳಮವಾಸ್ಯೆ ದಿನದಂದು ವಾಮಾಚಾರ ಮಾಡಿದ್ದು ಇಡೀ ಏರಿಯಾ ಜನರು ಭಯ ಬಿದ್ದು, ತಮ್ಮ ಮನೆಯನ್ನು ಒಂದಷ್ಟು ದಿನಗಳ ಕಾಲ ತೊರೆಯಲು ಮುಂದಾಗಿದ್ದಾರೆ. ವಾಮಾಚಾರ ಮಾಡಿದ ಸ್ಥಳದಲ್ಲಿ ವಾಟರ್ ಟ್ಯಾಂಕ್ ಇರೋ ಹಿನ್ನಲೆ ಯಾರು ನೀರು ತೆಗೆದುಕೊಂಡು ಹೋಗುತ್ತಿಲ್ಲ. ಪಕ್ಕದಲ್ಲಿಯೇ ಅಂಗನವಾಡಿ ಶಾಲೆಯೂ ಇದ್ದು, ಇಲ್ಲಿಗೆ ಮಕ್ಕಳನ್ನು ಕೂಡ ಕಳುಹಿಸುತ್ತಿಲ್ಲ.

ಈ ಏರಿಯಾದಲ್ಲಿ ಪದೇ ಪದೇ ಕೆಲವು ಕಿಡಿಗೇಡಿಗಳು ವಾಮಾಚಾರ ಮಾಡುತ್ತಿರುವ ಹಿನ್ನಲೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಇಲ್ಲಿನ ನಿವಾಸಿಗಳು ಭಯಭೀತರಾಗಿದ್ದಾರೆ. ಕೂಡಲೇ ಈ ಏರಿಯಾದಲ್ಲಿ ಸಿಸಿ ಕ್ಯಾಮರ ಅಳವಡಿಸಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಆಗ ವಾಮಾಚಾರ ಮಾಡುವುದು ತಪ್ಪಲಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬ್ರೂಸ್ ಪೇಟೆ ಪೊಲೀಸರು ವಾಮಾಚಾರದ ವಸ್ತುಗಳನ್ನು ತೆರವುಗೊಳಿಸಿ ಹೋಗಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more