ಬಳ್ಳಾರಿಯಲ್ಲಿ ಎಳ್ಳಮವಾಸ್ಯೆ ದಿನದಂದು ಭಯಾನಕ ವಾಮಾಚಾರ; 4 ತಲೆಬುರುಡೆ, ಎಲುಬು ಇಟ್ಟು ಪೂಜೆ!

ಬಳ್ಳಾರಿಯಲ್ಲಿ ಎಳ್ಳಮವಾಸ್ಯೆ ದಿನದಂದು ಭಯಾನಕ ವಾಮಾಚಾರ; 4 ತಲೆಬುರುಡೆ, ಎಲುಬು ಇಟ್ಟು ಪೂಜೆ!

Published : Dec 30, 2024, 08:46 PM IST

ಬಳ್ಳಾರಿಯ ಮಾರ್ಕಂಡೇಯ ಕಾಲೋನಿಯಲ್ಲಿ ಎಳ್ಳಮವಾಸ್ಯೆ ದಿನದಂದು ನಾಲ್ಕು ತಲೆಬುರುಡೆ ಮತ್ತು ಹಲವಾರು ಎಲುಬುಗಳನ್ನು ಬಳಸಿ ವಾಮಾಚಾರ ಮಾಡಲಾಗಿದೆ. ಇದರಿಂದಾಗಿ ಸ್ಥಳೀಯರು ಭಯಭೀತರಾಗಿದ್ದು, ಮನೆಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪದೇ ಪದೇ ವಾಮಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರ ಅಳವಡಿಸುವಂತೆ ಮತ್ತು ಪೊಲೀಸ್ ಗಸ್ತು ಹೆಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಬಳ್ಳಾರಿ (ಡಿ.30): ಬಳ್ಳಾರಿ ನಗರದ ಜನತೆಯನ್ನೇ ಬೆಚ್ಚಿ ಬೀಳಿಸುವಂತಹ ಘಟನೆ ಎಳ್ಳಮವಾಸೆ ದಿನದಂದು ಮಾಡಲಾಗಿದೆ. ಬಳ್ಳಾರಿಯ ಜನರನ್ನು ಭಯ ಬೀಳುವ ರೀತಿಯಲ್ಲಿ ತುಂಬಿದ ಓಣಿಯಲ್ಲಿ ವಾಮಾಚಾರ ಮಾಡಲಾಗಿದೆ. ನಾಲ್ಕು ತಲೆಬುರುಡೆ, ಹತ್ತಾರು ಎಲುಬುಗಳನ್ನು ಮುಂದಿಟ್ಟು, ಕೂದಲು ಸುಟ್ಟು, ದೀಪ ಹಚ್ಚಿಟ್ಟು ಪೂಜೆ ಮಾಡಲಾಗಿದೆ. ಇದರಿಂದ ಮಾರ್ಕಂಡೇಯ ಕಾಲೋನಿ ಜನರು ಬೆಚ್ಚಿ ಬಿದ್ದಿದ್ದಾರೆ.

ಇಡೀ ವರ್ಷದಲ್ಲಿ ಅತ್ಯಂತ ಕೆಟ್ಟ ಅಮವಾಸ್ಯೆ ಎಂದು ಹೇಳಲಾಗುವ ಈ ಎಳ್ಳಮವಾಸ್ಯೆ ದಿನದಂದು ವಾಮಾಚಾರ ಮಾಡಿದ್ದು ಇಡೀ ಏರಿಯಾ ಜನರು ಭಯ ಬಿದ್ದು, ತಮ್ಮ ಮನೆಯನ್ನು ಒಂದಷ್ಟು ದಿನಗಳ ಕಾಲ ತೊರೆಯಲು ಮುಂದಾಗಿದ್ದಾರೆ. ವಾಮಾಚಾರ ಮಾಡಿದ ಸ್ಥಳದಲ್ಲಿ ವಾಟರ್ ಟ್ಯಾಂಕ್ ಇರೋ ಹಿನ್ನಲೆ ಯಾರು ನೀರು ತೆಗೆದುಕೊಂಡು ಹೋಗುತ್ತಿಲ್ಲ. ಪಕ್ಕದಲ್ಲಿಯೇ ಅಂಗನವಾಡಿ ಶಾಲೆಯೂ ಇದ್ದು, ಇಲ್ಲಿಗೆ ಮಕ್ಕಳನ್ನು ಕೂಡ ಕಳುಹಿಸುತ್ತಿಲ್ಲ.

ಈ ಏರಿಯಾದಲ್ಲಿ ಪದೇ ಪದೇ ಕೆಲವು ಕಿಡಿಗೇಡಿಗಳು ವಾಮಾಚಾರ ಮಾಡುತ್ತಿರುವ ಹಿನ್ನಲೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಇಲ್ಲಿನ ನಿವಾಸಿಗಳು ಭಯಭೀತರಾಗಿದ್ದಾರೆ. ಕೂಡಲೇ ಈ ಏರಿಯಾದಲ್ಲಿ ಸಿಸಿ ಕ್ಯಾಮರ ಅಳವಡಿಸಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಆಗ ವಾಮಾಚಾರ ಮಾಡುವುದು ತಪ್ಪಲಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬ್ರೂಸ್ ಪೇಟೆ ಪೊಲೀಸರು ವಾಮಾಚಾರದ ವಸ್ತುಗಳನ್ನು ತೆರವುಗೊಳಿಸಿ ಹೋಗಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more