Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!

Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!

Published : Jan 05, 2026, 11:26 PM IST

ಬಳ್ಳಾರಿಯಲ್ಲಿ ಗಣಿಧಣಿ ರೆಡ್ಡಿ ಸಹೋದರರು ಮತ್ತು ನಾರಾ ಭರತ್ ರೆಡ್ಡಿ ಬಣದ ನಡುವಿನ ರಾಜಕೀಯ ದ್ವೇಷವು ಶೂಟೌಟ್ ಹಂತಕ್ಕೆ ತಲುಪಿದೆ. ಬ್ಯಾನರ್ ವಿಚಾರಕ್ಕೆ ಶುರುವಾದ ಈ ಸಂಘರ್ಷದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು (ಜ.5): ಬಳ್ಳಾರಿಯ ರಾಜಕೀಯ ಅಖಾಡ ಅಂದ್ರೆ ಅಲ್ಲಿ ಬರೀ ಮತಗಳ ಲೆಕ್ಕಾಚಾರ ಇರಲ್ಲ, ಬದಲಿಗೆ ರಕ್ತದ ವಾಸನೆ ಇರುತ್ತೆ. ಒಂದು ಕಡೆ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಸಹೋದರರು, ಮತ್ತೊಂದು ಕಡೆ ನಾರಾ ಸೂರ್ಯನಾರಾಯಣ ರೆಡ್ಡಿ ಮತ್ತು ಭರತ್ ರೆಡ್ಡಿ ಜೋಡಿ. 

ಬಳ್ಳಾರಿ ಈಗ 'ಗುಂಡು-ಗೂಂಡಾ'ಗಳ ರಿಪಬ್ಲಿಕ್: 'ಜನಾರ್ದನ ರೆಡ್ಡಿ ಕೊಲೆಗೆ ಸಂಚು ನಡೆದಿದೆ' ಆರ್. ಅಶೋಕ ಆರೋಪ

ಹಿಂದೆ ರೆಡ್ಡಿ ಬ್ರದರ್ಸ್ ವಿರುದ್ಧ ತೊಡೆ ತಟ್ಟಿ ನಿಂತಿದ್ದ ಬಳ್ಳಾರಿ ಕಟ್ಟಾಳು ಈ ಸೂರ್ಯನಾರಾಯಣ ರೆಡ್ಡಿ. ಇವರ ನಡುವಿನ ದ್ವೇಷ ಈಗ ಶೂಟೌಟ್ ಹಂತಕ್ಕೆ ಬಂದು ತಲುಪಿದೆ. ಸಣ್ಣದೊಂದು ಬ್ಯಾನರ್ ವಿಚಾರಕ್ಕೆ ಶುರುವಾದ ಕಿಡಿ, ಈಗ ಒಬ್ಬನ ಜೀವವನ್ನೇ ಬಲಿ ಪಡೆದಿದೆ.

ಬಳ್ಳಾರಿ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಲ್ಲೆ ಆಕಸ್ಮಿಕವೋ ಅಥವಾ ಮೊದಲೇ ಪ್ಲಾನ್ ಮಾಡಿದ್ದ ಸ್ಕೆಚ್ಚೋ? ಸಂಘರ್ಷದ ಹಿಂದೆ ಅಡಗಿರುವ ರಹಸ್ಯವೇನು?  ಗಣಿನಾಡಿನ ಶೂಟೌಟ್ ಪ್ರಕರಣ ಈಗ ಹತ್ತಾರು ಅನುಮಾನಗಳಿಗೆ ಹಾದಿ ಮಾಡಿಕೊಟ್ಟಿದೆ. ಶೂಟೌಟ್ ನಡೆದಿದ್ದು ಯಾರ ಮೇಲೆ? ಸ್ವತಃ ಜನಾರ್ದನ ರೆಡ್ಡಿ ಅವರನ್ನೇ ಟಾರ್ಗೆಟ್ ಮಾಡಲಾಗಿತ್ತಾ? ಆದರೆ ಈ ಆರೋಪವನ್ನು ಶಾಸಕ ನಾರಾ ಭರತ್ ರೆಡ್ಡಿ ಕಟುವಾಗಿ ಅಲ್ಲಗಳೆದಿದ್ದಾರೆ.
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more