ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

Published : Feb 05, 2023, 01:12 PM IST

* ಹೈಟೆನ್ಶನ್ ವೈಯರ್ ಕೆಳಗೆ ಮನೆ ಕಟ್ಟಿರುವ ಮಾಲಿಕರಿಗೆ ಬಿಗ್ ಶಾಕ್!
* 7722 ಅನಧಿಕೃತ ಕಟ್ಟಡ ಮಾಲೀಕರಿಗೆ ನೋಟೀಸ್ ನೀಡಲು KPTCL ಸೂಚನೆ

ಬೆಂಗಳೂರು (ಫೆ.05): ಸಿಲಿಕಾನ್ ಸಿಟಿಯಲ್ಲಿ  ಹೈಟೆನ್ಷನ್ ವೈಯರ್ ತಗುಲಿ ಸಾವು ನೋವುಗಳ ಸಂಖ್ಯೆ ಜಾಸ್ತಿಯಾಗ್ತಿದೆ. ಎಷ್ಟೋ ಅಮಾಯಕ ಜೀವಗಳನ್ನ ಈ ಡೆಡ್ಲಿ ಹೈ ಟೆನ್ಯನ್ ವೈಯರ್ಗಳು ಬಲಿ ಪಡೆದಿವೆ. ಇದೀಗ ಸಾಲು ಸಾಲು ಸರಣಿ ಸಾವಿನ ಬಳಿಕ ಕೆಪಿಟಿಸಿಎಲ್ ಹಾಗೂ ಬಿಬಿಎಂಪಿ ಎಚ್ಚೆತ್ತುಕೊಳ್ಳಲು ಮುಂದಾಗಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇಂಧನ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಕಟ್ಟಡಗಳನ್ನು ಸರ್ವೆ ಮಾಡಿದೆ. ಅನಧಿಕೃತ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸೋದಕ್ಕೆ ಕೆಪಿಟಿಸಿಎಲ್ ಸಜ್ಜು ಆಗ್ತಿರೋದು, ಕಟ್ಟಡ ಮಾಲೀಕರಿಗೆ ಕಂಟಕ ಎದುರಾಗಿದೆ. 

ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್, ಆರ್ಟಿನಗರದಲ್ಲಿ ಹೈಟೆನ್ಶನ್ ವೈಯರ್ ತಗುಲಿ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ರು. ಇದಾದ  ನಂತರ ಇಂಧನ ಇಲಾಖೆ ಹಾಗೂ ಬಿಬಿಎಂಪಿ ಮೈಕೊಡವಿ ಎಚ್ಚೆತ್ತುಕೊಂಡಿದೆ.  ಹೈ ಟೆನ್ಶನ್ ವೈಯರ್ ಹಾದು ಹೋಗಿರುವ ಕೆಳಗೆ ಮನೆಗಳನ್ನು ಕಟ್ಟಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ಕೆಪಿಟಿಸಿಎಲ್ ಲೆಕ್ಕ ಹಾಕಿದೆ. ದೇವನಹಳ್ಳಿ, ಎಲೆಕ್ಟ್ರಾನ್ ಸಿಟಿ, ನೆಲಮಂಗಲ, ಹೆಬ್ಬಾಳ ಸೇರಿದಂತೆ ನಗರದಾದ್ಯಂತ ಕೆಪಿಟಿಸಿಎಲ್ ಕಳೆದವಜನವರಿ 20 ರಿಂದ 30ರವರೆಗೆ ಸರ್ವೆ ನಡೆಸಿ 7,722 ಅನಧಿಕೃತ ಕಟ್ಟಡಗಳ ಲೆಕ್ಕವನ್ನು ಬಿಬಿಎಂಪಿಗೆ ನೀಡಿದೆ. ಅಲ್ಲದೆ ಅನಧಿಕೃತ  ಮನೆಗಳಿಗೆ  ನೋಟಿಸ್ ಕೊಟ್ಟು ತೆರವು ಮಾಡಿ ಅಂತ ಕೆಪಿಟಿಸಿಎಲ್  ಬಿಬಿಎಂಪಿ ಗೆ ಮನವಿಯನ್ನ ಮಾಡ್ಕೊಂಡಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more