ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

Published : Feb 05, 2023, 01:12 PM IST

* ಹೈಟೆನ್ಶನ್ ವೈಯರ್ ಕೆಳಗೆ ಮನೆ ಕಟ್ಟಿರುವ ಮಾಲಿಕರಿಗೆ ಬಿಗ್ ಶಾಕ್!
* 7722 ಅನಧಿಕೃತ ಕಟ್ಟಡ ಮಾಲೀಕರಿಗೆ ನೋಟೀಸ್ ನೀಡಲು KPTCL ಸೂಚನೆ

ಬೆಂಗಳೂರು (ಫೆ.05): ಸಿಲಿಕಾನ್ ಸಿಟಿಯಲ್ಲಿ  ಹೈಟೆನ್ಷನ್ ವೈಯರ್ ತಗುಲಿ ಸಾವು ನೋವುಗಳ ಸಂಖ್ಯೆ ಜಾಸ್ತಿಯಾಗ್ತಿದೆ. ಎಷ್ಟೋ ಅಮಾಯಕ ಜೀವಗಳನ್ನ ಈ ಡೆಡ್ಲಿ ಹೈ ಟೆನ್ಯನ್ ವೈಯರ್ಗಳು ಬಲಿ ಪಡೆದಿವೆ. ಇದೀಗ ಸಾಲು ಸಾಲು ಸರಣಿ ಸಾವಿನ ಬಳಿಕ ಕೆಪಿಟಿಸಿಎಲ್ ಹಾಗೂ ಬಿಬಿಎಂಪಿ ಎಚ್ಚೆತ್ತುಕೊಳ್ಳಲು ಮುಂದಾಗಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇಂಧನ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಕಟ್ಟಡಗಳನ್ನು ಸರ್ವೆ ಮಾಡಿದೆ. ಅನಧಿಕೃತ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸೋದಕ್ಕೆ ಕೆಪಿಟಿಸಿಎಲ್ ಸಜ್ಜು ಆಗ್ತಿರೋದು, ಕಟ್ಟಡ ಮಾಲೀಕರಿಗೆ ಕಂಟಕ ಎದುರಾಗಿದೆ. 

ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್, ಆರ್ಟಿನಗರದಲ್ಲಿ ಹೈಟೆನ್ಶನ್ ವೈಯರ್ ತಗುಲಿ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ರು. ಇದಾದ  ನಂತರ ಇಂಧನ ಇಲಾಖೆ ಹಾಗೂ ಬಿಬಿಎಂಪಿ ಮೈಕೊಡವಿ ಎಚ್ಚೆತ್ತುಕೊಂಡಿದೆ.  ಹೈ ಟೆನ್ಶನ್ ವೈಯರ್ ಹಾದು ಹೋಗಿರುವ ಕೆಳಗೆ ಮನೆಗಳನ್ನು ಕಟ್ಟಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ಕೆಪಿಟಿಸಿಎಲ್ ಲೆಕ್ಕ ಹಾಕಿದೆ. ದೇವನಹಳ್ಳಿ, ಎಲೆಕ್ಟ್ರಾನ್ ಸಿಟಿ, ನೆಲಮಂಗಲ, ಹೆಬ್ಬಾಳ ಸೇರಿದಂತೆ ನಗರದಾದ್ಯಂತ ಕೆಪಿಟಿಸಿಎಲ್ ಕಳೆದವಜನವರಿ 20 ರಿಂದ 30ರವರೆಗೆ ಸರ್ವೆ ನಡೆಸಿ 7,722 ಅನಧಿಕೃತ ಕಟ್ಟಡಗಳ ಲೆಕ್ಕವನ್ನು ಬಿಬಿಎಂಪಿಗೆ ನೀಡಿದೆ. ಅಲ್ಲದೆ ಅನಧಿಕೃತ  ಮನೆಗಳಿಗೆ  ನೋಟಿಸ್ ಕೊಟ್ಟು ತೆರವು ಮಾಡಿ ಅಂತ ಕೆಪಿಟಿಸಿಎಲ್  ಬಿಬಿಎಂಪಿ ಗೆ ಮನವಿಯನ್ನ ಮಾಡ್ಕೊಂಡಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more