ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

ಬೆಂಗಳೂರು ಹೈಟೆನ್ಷನ್ ವೈರ್‌ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!

Published : Feb 05, 2023, 01:12 PM IST

* ಹೈಟೆನ್ಶನ್ ವೈಯರ್ ಕೆಳಗೆ ಮನೆ ಕಟ್ಟಿರುವ ಮಾಲಿಕರಿಗೆ ಬಿಗ್ ಶಾಕ್!
* 7722 ಅನಧಿಕೃತ ಕಟ್ಟಡ ಮಾಲೀಕರಿಗೆ ನೋಟೀಸ್ ನೀಡಲು KPTCL ಸೂಚನೆ

ಬೆಂಗಳೂರು (ಫೆ.05): ಸಿಲಿಕಾನ್ ಸಿಟಿಯಲ್ಲಿ  ಹೈಟೆನ್ಷನ್ ವೈಯರ್ ತಗುಲಿ ಸಾವು ನೋವುಗಳ ಸಂಖ್ಯೆ ಜಾಸ್ತಿಯಾಗ್ತಿದೆ. ಎಷ್ಟೋ ಅಮಾಯಕ ಜೀವಗಳನ್ನ ಈ ಡೆಡ್ಲಿ ಹೈ ಟೆನ್ಯನ್ ವೈಯರ್ಗಳು ಬಲಿ ಪಡೆದಿವೆ. ಇದೀಗ ಸಾಲು ಸಾಲು ಸರಣಿ ಸಾವಿನ ಬಳಿಕ ಕೆಪಿಟಿಸಿಎಲ್ ಹಾಗೂ ಬಿಬಿಎಂಪಿ ಎಚ್ಚೆತ್ತುಕೊಳ್ಳಲು ಮುಂದಾಗಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇಂಧನ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಕಟ್ಟಡಗಳನ್ನು ಸರ್ವೆ ಮಾಡಿದೆ. ಅನಧಿಕೃತ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸೋದಕ್ಕೆ ಕೆಪಿಟಿಸಿಎಲ್ ಸಜ್ಜು ಆಗ್ತಿರೋದು, ಕಟ್ಟಡ ಮಾಲೀಕರಿಗೆ ಕಂಟಕ ಎದುರಾಗಿದೆ. 

ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್, ಆರ್ಟಿನಗರದಲ್ಲಿ ಹೈಟೆನ್ಶನ್ ವೈಯರ್ ತಗುಲಿ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ರು. ಇದಾದ  ನಂತರ ಇಂಧನ ಇಲಾಖೆ ಹಾಗೂ ಬಿಬಿಎಂಪಿ ಮೈಕೊಡವಿ ಎಚ್ಚೆತ್ತುಕೊಂಡಿದೆ.  ಹೈ ಟೆನ್ಶನ್ ವೈಯರ್ ಹಾದು ಹೋಗಿರುವ ಕೆಳಗೆ ಮನೆಗಳನ್ನು ಕಟ್ಟಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ಕೆಪಿಟಿಸಿಎಲ್ ಲೆಕ್ಕ ಹಾಕಿದೆ. ದೇವನಹಳ್ಳಿ, ಎಲೆಕ್ಟ್ರಾನ್ ಸಿಟಿ, ನೆಲಮಂಗಲ, ಹೆಬ್ಬಾಳ ಸೇರಿದಂತೆ ನಗರದಾದ್ಯಂತ ಕೆಪಿಟಿಸಿಎಲ್ ಕಳೆದವಜನವರಿ 20 ರಿಂದ 30ರವರೆಗೆ ಸರ್ವೆ ನಡೆಸಿ 7,722 ಅನಧಿಕೃತ ಕಟ್ಟಡಗಳ ಲೆಕ್ಕವನ್ನು ಬಿಬಿಎಂಪಿಗೆ ನೀಡಿದೆ. ಅಲ್ಲದೆ ಅನಧಿಕೃತ  ಮನೆಗಳಿಗೆ  ನೋಟಿಸ್ ಕೊಟ್ಟು ತೆರವು ಮಾಡಿ ಅಂತ ಕೆಪಿಟಿಸಿಎಲ್  ಬಿಬಿಎಂಪಿ ಗೆ ಮನವಿಯನ್ನ ಮಾಡ್ಕೊಂಡಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more