ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

Published : Jul 01, 2023, 09:23 AM IST

ಬಿಎಂಟಿಸಿ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ನಡೆಸಲಾಗುತ್ತಿದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿ ಬೆನ್ನಲೇ ಎಚ್ಚೆತ್ತಿರುವ ಸಾರಿಗೆ ಸಚಿವರು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
 

ಬೆಂಗಳೂರು: ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಿರುವ ಬಗ್ಗೆ ಶುಕ್ರವಾರ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಟೆಂಡರ್‌ನನ್ನು 12 ವರ್ಷಕ್ಕೆ ಬಿಜೆಪಿ ಅವಧಿಯಲ್ಲಿ ನೀಡಲಾಗಿದೆ. ಅಲ್ಲದೇ ತನಿಖೆ ಮಾಡುವಂತೆ ಬಿಎಂಟಿಸಿ ಎಂಡಿಗೆ ಆದೇಶ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ ನಡೆಸಲಾಗುತ್ತಿತ್ತು.  80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಕಳೆದ ವರ್ಷ ಲೋಕಾರ್ಪಣೆ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more