ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್ & ರೆಸ್ಟೋರೆಂಟ್‌ ಪ್ರಕರಣ: ಕ್ರಮಕ್ಕೆ ಬಿಎಂಟಿಸಿ ಎಂಡಿಗೆ ಸಾರಿಗೆ ಸಚಿವರ ಸೂಚನೆ

Published : Jul 01, 2023, 09:23 AM IST

ಬಿಎಂಟಿಸಿ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ & ರೆಸ್ಟೋರೆಂಟ್‌ ನಡೆಸಲಾಗುತ್ತಿದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿ ಬೆನ್ನಲೇ ಎಚ್ಚೆತ್ತಿರುವ ಸಾರಿಗೆ ಸಚಿವರು ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
 

ಬೆಂಗಳೂರು: ಬಿಎಂಟಿಸಿ ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಅವಕಾಶ ನೀಡಿರುವ ಬಗ್ಗೆ ಶುಕ್ರವಾರ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಟೆಂಡರ್‌ನನ್ನು 12 ವರ್ಷಕ್ಕೆ ಬಿಜೆಪಿ ಅವಧಿಯಲ್ಲಿ ನೀಡಲಾಗಿದೆ. ಅಲ್ಲದೇ ತನಿಖೆ ಮಾಡುವಂತೆ ಬಿಎಂಟಿಸಿ ಎಂಡಿಗೆ ಆದೇಶ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಬಿಟಿಎಂ ಲೇಔಟ್‌ನ ಕುವೆಂಪುನಗರದ ಬಸ್‌ ನಿಲ್ದಾಣದ ನಾಲ್ಕನೇ ಮಹಡಿಯಲ್ಲಿ ಬಾರ್‌ ಮತ್ತು ರೆಸ್ಟೋರೆಂಟ್‌ ನಡೆಸಲಾಗುತ್ತಿತ್ತು.  80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ನಿಲ್ದಾಣವನ್ನು ಕಳೆದ ವರ್ಷ ಲೋಕಾರ್ಪಣೆ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more