ಬಸವನಗುಡಿ ವಾರ್ಡ್‌ ಹೆಸರು ಬದಲಾವಣೆ: ಹೋರಾಟದ ಎಚ್ಚರಿಕೆ ನೀಡಿದ ನಿವಾಸಿಗಳು

ಬಸವನಗುಡಿ ವಾರ್ಡ್‌ ಹೆಸರು ಬದಲಾವಣೆ: ಹೋರಾಟದ ಎಚ್ಚರಿಕೆ ನೀಡಿದ ನಿವಾಸಿಗಳು

Published : Oct 15, 2023, 11:45 AM IST

ಕರ್ನಾಟಕ ಗೆದ್ದ ಕಾಂಗ್ರೆಸ್ ಸರ್ಕಾರ ಈಗ ಬಿಬಿಎಂಪಿ ವಾರ್ಡ್ಗಳ ಹೆಸರು ಬದಲಾವಣೆಗೆ ಮುಂದಾಗಿದೆ. ಅದ್ರಲ್ಲೂ ಬೆಂಗಳೂರಿನ ಒಂದು ಪುರಾತನ ವಾರ್ಡ್ ಹೆಸರು ಬದಲಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಂಗಳೂರಿನ ಫೇಮಸ್ ವಾರ್ಡ್‌ಗಳ ಪೈಕಿ ಮೊದಲ ಸ್ಥಾನ ಅಂದ್ರೆ ಅದು ಬಸವನಗುಡಿ(Basavanagudi). ಆದ್ರೆ ಬಿಬಿಎಂಪಿ(BBMP) ಇತ್ತೀಚೆಗೆ ಪ್ರಕಟಿಸಿದ 225 ವಾರ್ಡ್ ಗಳ ಪಟ್ಟಿಯಲ್ಲಿ ಕೆಲವು ವಾರ್ಡ್ ಗಳ ಹೆಸರನ್ನು ಬದಲಾಯಿಸಿದೆ. ಈ ಪೈಕಿ ಬಸವನಗುಡಿ ವಾರ್ಡ್ ಕೂಡ ಒಂದು. ಈ ಮೂಲಕ ಲಕ್ಷಾಂತರ ಜನರ ಭಾವನೆಯ ಪ್ರತೀಕವಾದ ಹೆಸರನ್ನು ಬದಲಾಯಿಸುವ ಮೂಲಕ ಹೊಸ ಸಂಕಷ್ಟವೊಂದನ್ನು ಬಿಬಿಎಂಪಿ ಮೈಮೇಲೆ ಎಳೆದುಕೊಂಡಿದೆ. ಬಸವನಗುಡಿಯಲ್ಲಿ ಒಟ್ಟು 6 ವಾರ್ಡ್‌ಗಳಿವೆ. ಇವುಗಳಲ್ಲಿ ಕೆಲವು ಗಡಿ ಬದಲಿಸಿ ಹೆಸರನ್ನೂ ಬದಲಾವಣೆ ಮಾಡಲಾಗಿದೆ. ಬಸವನಗುಡಿ ಬದಲಿಗೆ ದೊಡ್ಡಗಣಪತಿ ವಾರ್ಡ್(Dodganapati Ward) ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಬಗ್ಗೆ ಯಾವ ಸಾರ್ವಜನಿಕರಿಗೂ ಮಾಹಿತಿ ಕೊಟ್ಟಿಲ್ಲ. ಇದರಿಂದ ಬಿಬಿಎಂಪಿಗೆ ಏನು ಲಾಭ ಇದೆ ಅಂತ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಐತಿಹಾಸಿಕ ಹೆಸರನ್ನು ಬದಲಾಯಿಸುವ ಈ ನಿರ್ಧಾರ ಯಾಕೆ ಎಂದು ಪ್ರಶ್ನಿಸುತ್ತಿದ್ದಾರೆ. ಜೊತೆಗೆ  ಸ್ಥಳೀಯ ಸಂಘಟನೆಗಳು ಬೃಹತ್ ಹೋರಾಟದ ಎಚ್ಚರಿಕೆ ನೀಡಿದೆ. 

ಇದನ್ನೂ ವೀಕ್ಷಿಸಿ:  Weekly-Horoscope: ಇಂದಿನಿಂದ ಶರತ್‌ ಕಾಲ ಆರಂಭ..ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more