ಬಸವನಗುಡಿ ವಾರ್ಡ್‌ ಹೆಸರು ಬದಲಾವಣೆ: ಹೋರಾಟದ ಎಚ್ಚರಿಕೆ ನೀಡಿದ ನಿವಾಸಿಗಳು

ಬಸವನಗುಡಿ ವಾರ್ಡ್‌ ಹೆಸರು ಬದಲಾವಣೆ: ಹೋರಾಟದ ಎಚ್ಚರಿಕೆ ನೀಡಿದ ನಿವಾಸಿಗಳು

Published : Oct 15, 2023, 11:45 AM IST

ಕರ್ನಾಟಕ ಗೆದ್ದ ಕಾಂಗ್ರೆಸ್ ಸರ್ಕಾರ ಈಗ ಬಿಬಿಎಂಪಿ ವಾರ್ಡ್ಗಳ ಹೆಸರು ಬದಲಾವಣೆಗೆ ಮುಂದಾಗಿದೆ. ಅದ್ರಲ್ಲೂ ಬೆಂಗಳೂರಿನ ಒಂದು ಪುರಾತನ ವಾರ್ಡ್ ಹೆಸರು ಬದಲಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಂಗಳೂರಿನ ಫೇಮಸ್ ವಾರ್ಡ್‌ಗಳ ಪೈಕಿ ಮೊದಲ ಸ್ಥಾನ ಅಂದ್ರೆ ಅದು ಬಸವನಗುಡಿ(Basavanagudi). ಆದ್ರೆ ಬಿಬಿಎಂಪಿ(BBMP) ಇತ್ತೀಚೆಗೆ ಪ್ರಕಟಿಸಿದ 225 ವಾರ್ಡ್ ಗಳ ಪಟ್ಟಿಯಲ್ಲಿ ಕೆಲವು ವಾರ್ಡ್ ಗಳ ಹೆಸರನ್ನು ಬದಲಾಯಿಸಿದೆ. ಈ ಪೈಕಿ ಬಸವನಗುಡಿ ವಾರ್ಡ್ ಕೂಡ ಒಂದು. ಈ ಮೂಲಕ ಲಕ್ಷಾಂತರ ಜನರ ಭಾವನೆಯ ಪ್ರತೀಕವಾದ ಹೆಸರನ್ನು ಬದಲಾಯಿಸುವ ಮೂಲಕ ಹೊಸ ಸಂಕಷ್ಟವೊಂದನ್ನು ಬಿಬಿಎಂಪಿ ಮೈಮೇಲೆ ಎಳೆದುಕೊಂಡಿದೆ. ಬಸವನಗುಡಿಯಲ್ಲಿ ಒಟ್ಟು 6 ವಾರ್ಡ್‌ಗಳಿವೆ. ಇವುಗಳಲ್ಲಿ ಕೆಲವು ಗಡಿ ಬದಲಿಸಿ ಹೆಸರನ್ನೂ ಬದಲಾವಣೆ ಮಾಡಲಾಗಿದೆ. ಬಸವನಗುಡಿ ಬದಲಿಗೆ ದೊಡ್ಡಗಣಪತಿ ವಾರ್ಡ್(Dodganapati Ward) ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಬಗ್ಗೆ ಯಾವ ಸಾರ್ವಜನಿಕರಿಗೂ ಮಾಹಿತಿ ಕೊಟ್ಟಿಲ್ಲ. ಇದರಿಂದ ಬಿಬಿಎಂಪಿಗೆ ಏನು ಲಾಭ ಇದೆ ಅಂತ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಐತಿಹಾಸಿಕ ಹೆಸರನ್ನು ಬದಲಾಯಿಸುವ ಈ ನಿರ್ಧಾರ ಯಾಕೆ ಎಂದು ಪ್ರಶ್ನಿಸುತ್ತಿದ್ದಾರೆ. ಜೊತೆಗೆ  ಸ್ಥಳೀಯ ಸಂಘಟನೆಗಳು ಬೃಹತ್ ಹೋರಾಟದ ಎಚ್ಚರಿಕೆ ನೀಡಿದೆ. 

ಇದನ್ನೂ ವೀಕ್ಷಿಸಿ:  Weekly-Horoscope: ಇಂದಿನಿಂದ ಶರತ್‌ ಕಾಲ ಆರಂಭ..ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more