ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

Published : Oct 03, 2023, 10:33 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಸೈಟ್ ಖರೀದಿ ಮಾಡಬೇಕು ಅನ್ನೋದು ಪ್ರತಿಯೊಬ್ಬರ‌ ಕನಸು. ಆದ್ರೆ ಅದೇ ಖುಷಿಯಲ್ಲಿ ಖರೀದಿ ಮಾಡಿದ ಸೈಟ್ನಿಂದಲೇ ಈಗ ನೆಮ್ಮದಿ ಹಾಳಾಗಿದೆ. ಸೈಟ್ ಸಮಸ್ಯೆ ಬಗೆಹರಿಸುವಂತೆ ಪ್ರತಿನಿತ್ಯ ಬಿಡಿಎ ಬಾಗಿಲಿಗೆ ಅಲೆಯುವಂತಾಗಿದೆ.
 


ಈಶ್ವರ್ ಪ್ರಸಾದ್ ಎಂಬುವವರು 2002ರಲ್ಲಿ ಬಿಟಿಎಂ ಲೇಔಟ್ 6ನೇ ಹಂತದಲ್ಲಿ ಇವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 30/40 ಅಳತೆಯ ಸೈಟ್ ಹಂಚಿಕೆ ಮಾಡಿತ್ತು. 2012ರಲ್ಲಿ ಅದನ್ನ ಸರ್ಕಾರ ಡಿನೋಟಿಫೈ ಮಾಡಿ ಸೈಟ್ ಮಾಲೀಕರಿಗೆ ಬದಲಿ ನಿವೇಶನ ಹಂಚಿಕೆ ಮಾಡಿದೆ. ಆದ್ರೆ ಬಿಡಿಎ(BDA) ಹಂಚಿಕೆ ಮಾಡಿದ ಬದಲಿ ನಿವೇಶನವು‌ ಕೂಡ ಈಶ್ವರ್ ಪ್ರಸಾದ್‌ಗೆ ಸಮಸ್ಯೆ ತಂದಿದೆ. ಬಿಡಿಎ ಏನೋ ಬದಲಿ ನಿವೇಶನ ನೀಡಿ ಕೈತೊಳೆದುಕೊಂಡಿದೆ. ಆದ್ರೆ ಆ ಜಾಗದ ಮೂಲ ಕೆದಿಕಿದಾಗಲೇ ಗೊತ್ತಾಗಿದ್ದು, ಅದು ರೆವಿನ್ಯೂ ಜಾಗ ಎಂದು. ಈ ಜಾಗದ ಮೂಲ ಮಾಲೀಕರು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದು, ನಮ್ಮ ಸಮಸ್ಯೆಯನ್ನ ಅಧಿಕಾರಿಗಳು ಬಗೆಹರಿಸುತ್ತಿಲ್ಲ ಎಂದು ಮೂಲ ಮಾಲೀಕರು ಆರೋಪಿಸಿದ್ದಾರೆ. ಇತ್ತ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಿಟಿಗೇಷನ್ ಸೈಟ್ ಪಡೆದ ಈಶ್ವರ್ ಪ್ರಸಾದ್.. ಹಣವೂ ಇಲ್ಲದೆ, ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಡ್ತಿದ್ದಾರೆ. ಬೆಂಗಳೂರು(Bengaluru) ದಕ್ಷಿಣ ತಾಲೂಕು ದೇವರಚಿಕ್ಕನಹಳ್ಳಿ ಸರ್ವೆ ನಂ 35/2 ರಲ್ಲಿ ಈಶ್ವರ್ ಪ್ರಸಾದ್ ಹಾಗೂ ಸುಂದರ್ ಎಂಬುವರಿಗೆ ಬಿಡಿಎ ‌ಬದಲಿ ನಿವೇಶನ ‌ನೀಡಿದೆ. ಬದಲಿ ನಿವೇಶನದಲ್ಲಿ ‌ಮನೆ‌ ಕಟ್ಟಲು ಸಾಧ್ಯವಾಗ್ತಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ಸತತವಾಗಿ ಬಿಡಿಎಗೆ ಅಲೆದ್ರು‌ ಪ್ರಕರಣ ಬಗೆಹರಿಸಲು ಅಧಿಕಾರಿಗಳು ‌ಮುಂದಾಗಿಲ್ಲ. ಈ ಬಗ್ಗೆ ಹಿಂದಿನ ಬಿಡಿಎ ಆಯುಕ್ತರ ಗಮನಕ್ಕೆ ತಂದಿದ್ರೂ ಕೂಡ ಸಮಸ್ಯೆ ಬಗೆಹರಿಸಿಲ್ಲ. ಈಗ ಹೊಸದಾಗಿ ‌ನೇಮಕವಾಗಿರೋ ಬಿಡಿಎ ಆಯುಕ್ತರಾದ್ರು ತಮಗೆ ನ್ಯಾಯ ಕೊಡಿಸಲಿ ಎಂದು ಈಶ್ವರ್ ಪ್ರಸಾದ್ ಮನವಿ ಮಾಡ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬುರ್ಖಾ ವೇಷದಲ್ಲಿ ಮಹಿಳಾ ಉದ್ಯಮಿ ಕಿಡ್ನಾಪ್: ಪೊಲೀಸರ ಸಮಯಪ್ರಜ್ಞೆಯಿಂದ ಬಚಾವ್!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more