ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

Published : Oct 03, 2023, 10:33 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಸೈಟ್ ಖರೀದಿ ಮಾಡಬೇಕು ಅನ್ನೋದು ಪ್ರತಿಯೊಬ್ಬರ‌ ಕನಸು. ಆದ್ರೆ ಅದೇ ಖುಷಿಯಲ್ಲಿ ಖರೀದಿ ಮಾಡಿದ ಸೈಟ್ನಿಂದಲೇ ಈಗ ನೆಮ್ಮದಿ ಹಾಳಾಗಿದೆ. ಸೈಟ್ ಸಮಸ್ಯೆ ಬಗೆಹರಿಸುವಂತೆ ಪ್ರತಿನಿತ್ಯ ಬಿಡಿಎ ಬಾಗಿಲಿಗೆ ಅಲೆಯುವಂತಾಗಿದೆ.
 


ಈಶ್ವರ್ ಪ್ರಸಾದ್ ಎಂಬುವವರು 2002ರಲ್ಲಿ ಬಿಟಿಎಂ ಲೇಔಟ್ 6ನೇ ಹಂತದಲ್ಲಿ ಇವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 30/40 ಅಳತೆಯ ಸೈಟ್ ಹಂಚಿಕೆ ಮಾಡಿತ್ತು. 2012ರಲ್ಲಿ ಅದನ್ನ ಸರ್ಕಾರ ಡಿನೋಟಿಫೈ ಮಾಡಿ ಸೈಟ್ ಮಾಲೀಕರಿಗೆ ಬದಲಿ ನಿವೇಶನ ಹಂಚಿಕೆ ಮಾಡಿದೆ. ಆದ್ರೆ ಬಿಡಿಎ(BDA) ಹಂಚಿಕೆ ಮಾಡಿದ ಬದಲಿ ನಿವೇಶನವು‌ ಕೂಡ ಈಶ್ವರ್ ಪ್ರಸಾದ್‌ಗೆ ಸಮಸ್ಯೆ ತಂದಿದೆ. ಬಿಡಿಎ ಏನೋ ಬದಲಿ ನಿವೇಶನ ನೀಡಿ ಕೈತೊಳೆದುಕೊಂಡಿದೆ. ಆದ್ರೆ ಆ ಜಾಗದ ಮೂಲ ಕೆದಿಕಿದಾಗಲೇ ಗೊತ್ತಾಗಿದ್ದು, ಅದು ರೆವಿನ್ಯೂ ಜಾಗ ಎಂದು. ಈ ಜಾಗದ ಮೂಲ ಮಾಲೀಕರು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದು, ನಮ್ಮ ಸಮಸ್ಯೆಯನ್ನ ಅಧಿಕಾರಿಗಳು ಬಗೆಹರಿಸುತ್ತಿಲ್ಲ ಎಂದು ಮೂಲ ಮಾಲೀಕರು ಆರೋಪಿಸಿದ್ದಾರೆ. ಇತ್ತ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಿಟಿಗೇಷನ್ ಸೈಟ್ ಪಡೆದ ಈಶ್ವರ್ ಪ್ರಸಾದ್.. ಹಣವೂ ಇಲ್ಲದೆ, ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಡ್ತಿದ್ದಾರೆ. ಬೆಂಗಳೂರು(Bengaluru) ದಕ್ಷಿಣ ತಾಲೂಕು ದೇವರಚಿಕ್ಕನಹಳ್ಳಿ ಸರ್ವೆ ನಂ 35/2 ರಲ್ಲಿ ಈಶ್ವರ್ ಪ್ರಸಾದ್ ಹಾಗೂ ಸುಂದರ್ ಎಂಬುವರಿಗೆ ಬಿಡಿಎ ‌ಬದಲಿ ನಿವೇಶನ ‌ನೀಡಿದೆ. ಬದಲಿ ನಿವೇಶನದಲ್ಲಿ ‌ಮನೆ‌ ಕಟ್ಟಲು ಸಾಧ್ಯವಾಗ್ತಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ಸತತವಾಗಿ ಬಿಡಿಎಗೆ ಅಲೆದ್ರು‌ ಪ್ರಕರಣ ಬಗೆಹರಿಸಲು ಅಧಿಕಾರಿಗಳು ‌ಮುಂದಾಗಿಲ್ಲ. ಈ ಬಗ್ಗೆ ಹಿಂದಿನ ಬಿಡಿಎ ಆಯುಕ್ತರ ಗಮನಕ್ಕೆ ತಂದಿದ್ರೂ ಕೂಡ ಸಮಸ್ಯೆ ಬಗೆಹರಿಸಿಲ್ಲ. ಈಗ ಹೊಸದಾಗಿ ‌ನೇಮಕವಾಗಿರೋ ಬಿಡಿಎ ಆಯುಕ್ತರಾದ್ರು ತಮಗೆ ನ್ಯಾಯ ಕೊಡಿಸಲಿ ಎಂದು ಈಶ್ವರ್ ಪ್ರಸಾದ್ ಮನವಿ ಮಾಡ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬುರ್ಖಾ ವೇಷದಲ್ಲಿ ಮಹಿಳಾ ಉದ್ಯಮಿ ಕಿಡ್ನಾಪ್: ಪೊಲೀಸರ ಸಮಯಪ್ರಜ್ಞೆಯಿಂದ ಬಚಾವ್!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more