ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

Published : Oct 03, 2023, 10:33 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಸೈಟ್ ಖರೀದಿ ಮಾಡಬೇಕು ಅನ್ನೋದು ಪ್ರತಿಯೊಬ್ಬರ‌ ಕನಸು. ಆದ್ರೆ ಅದೇ ಖುಷಿಯಲ್ಲಿ ಖರೀದಿ ಮಾಡಿದ ಸೈಟ್ನಿಂದಲೇ ಈಗ ನೆಮ್ಮದಿ ಹಾಳಾಗಿದೆ. ಸೈಟ್ ಸಮಸ್ಯೆ ಬಗೆಹರಿಸುವಂತೆ ಪ್ರತಿನಿತ್ಯ ಬಿಡಿಎ ಬಾಗಿಲಿಗೆ ಅಲೆಯುವಂತಾಗಿದೆ.
 


ಈಶ್ವರ್ ಪ್ರಸಾದ್ ಎಂಬುವವರು 2002ರಲ್ಲಿ ಬಿಟಿಎಂ ಲೇಔಟ್ 6ನೇ ಹಂತದಲ್ಲಿ ಇವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 30/40 ಅಳತೆಯ ಸೈಟ್ ಹಂಚಿಕೆ ಮಾಡಿತ್ತು. 2012ರಲ್ಲಿ ಅದನ್ನ ಸರ್ಕಾರ ಡಿನೋಟಿಫೈ ಮಾಡಿ ಸೈಟ್ ಮಾಲೀಕರಿಗೆ ಬದಲಿ ನಿವೇಶನ ಹಂಚಿಕೆ ಮಾಡಿದೆ. ಆದ್ರೆ ಬಿಡಿಎ(BDA) ಹಂಚಿಕೆ ಮಾಡಿದ ಬದಲಿ ನಿವೇಶನವು‌ ಕೂಡ ಈಶ್ವರ್ ಪ್ರಸಾದ್‌ಗೆ ಸಮಸ್ಯೆ ತಂದಿದೆ. ಬಿಡಿಎ ಏನೋ ಬದಲಿ ನಿವೇಶನ ನೀಡಿ ಕೈತೊಳೆದುಕೊಂಡಿದೆ. ಆದ್ರೆ ಆ ಜಾಗದ ಮೂಲ ಕೆದಿಕಿದಾಗಲೇ ಗೊತ್ತಾಗಿದ್ದು, ಅದು ರೆವಿನ್ಯೂ ಜಾಗ ಎಂದು. ಈ ಜಾಗದ ಮೂಲ ಮಾಲೀಕರು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದು, ನಮ್ಮ ಸಮಸ್ಯೆಯನ್ನ ಅಧಿಕಾರಿಗಳು ಬಗೆಹರಿಸುತ್ತಿಲ್ಲ ಎಂದು ಮೂಲ ಮಾಲೀಕರು ಆರೋಪಿಸಿದ್ದಾರೆ. ಇತ್ತ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲಿಟಿಗೇಷನ್ ಸೈಟ್ ಪಡೆದ ಈಶ್ವರ್ ಪ್ರಸಾದ್.. ಹಣವೂ ಇಲ್ಲದೆ, ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಡ್ತಿದ್ದಾರೆ. ಬೆಂಗಳೂರು(Bengaluru) ದಕ್ಷಿಣ ತಾಲೂಕು ದೇವರಚಿಕ್ಕನಹಳ್ಳಿ ಸರ್ವೆ ನಂ 35/2 ರಲ್ಲಿ ಈಶ್ವರ್ ಪ್ರಸಾದ್ ಹಾಗೂ ಸುಂದರ್ ಎಂಬುವರಿಗೆ ಬಿಡಿಎ ‌ಬದಲಿ ನಿವೇಶನ ‌ನೀಡಿದೆ. ಬದಲಿ ನಿವೇಶನದಲ್ಲಿ ‌ಮನೆ‌ ಕಟ್ಟಲು ಸಾಧ್ಯವಾಗ್ತಿಲ್ಲ. ಕಳೆದ ಒಂದೂವರೆ ವರ್ಷಗಳಿಂದ ಸತತವಾಗಿ ಬಿಡಿಎಗೆ ಅಲೆದ್ರು‌ ಪ್ರಕರಣ ಬಗೆಹರಿಸಲು ಅಧಿಕಾರಿಗಳು ‌ಮುಂದಾಗಿಲ್ಲ. ಈ ಬಗ್ಗೆ ಹಿಂದಿನ ಬಿಡಿಎ ಆಯುಕ್ತರ ಗಮನಕ್ಕೆ ತಂದಿದ್ರೂ ಕೂಡ ಸಮಸ್ಯೆ ಬಗೆಹರಿಸಿಲ್ಲ. ಈಗ ಹೊಸದಾಗಿ ‌ನೇಮಕವಾಗಿರೋ ಬಿಡಿಎ ಆಯುಕ್ತರಾದ್ರು ತಮಗೆ ನ್ಯಾಯ ಕೊಡಿಸಲಿ ಎಂದು ಈಶ್ವರ್ ಪ್ರಸಾದ್ ಮನವಿ ಮಾಡ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬುರ್ಖಾ ವೇಷದಲ್ಲಿ ಮಹಿಳಾ ಉದ್ಯಮಿ ಕಿಡ್ನಾಪ್: ಪೊಲೀಸರ ಸಮಯಪ್ರಜ್ಞೆಯಿಂದ ಬಚಾವ್!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more