ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

Suvarna News   | Asianet News
Published : May 31, 2020, 12:08 PM ISTUpdated : May 31, 2020, 12:51 PM IST

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಬೆಳಗಾವಿ(ಮೇ.31): ಹೊರರಾಜ್ಯಗಳಿಂದ ಬಂದಂತಹ 600 ಜನ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಇವರ ಕೊರೋನಾ ರಿಪೋರ್ಟ್ ಫಲಿತಾಂಶ ಹೊರಬರುವ ಮುನ್ನವೇ ಹೊರಬಂದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ.

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಆದರೆ ಅದರ ಫಲಿತಾಂಶ ಹೊರಬರುವ ಮುನ್ನವೇ ಕ್ವಾರಂಟೈನ್‌ನಿಂದ ರಿಲೀಸ್ ಮಾಡಿ ಜಿಲ್ಲಾಡಳಿತ ಕೈತೊಳೆದುಕೊಂಡಿದೆ. ಒಂದು ವೇಳೆ ಹೆಚ್ಚುಕಡಿಮೆಯಾದರೆ ಬೆಳಗಾವಿ ಜಿಲ್ಲೆ ದೊಡ್ಡ ಬೆಲೆಯನ್ನೇ ತೆರಬೇಕಾಗಬಹುದು.

ಕೆಲವು ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾಡಳಿತ ಇದೇ ತಪ್ಪನ್ನು ಮಾಡಿತ್ತು. ಆಗ 13 ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹಳೆಯ ಪ್ರಮಾದದಿಂದ ಬುದ್ದಿ ಕಲಿಯದ ಜಿಲ್ಲಾಡಳಿತ ಇದೀಗ ಬೋರ್ಗಲ್ಲ ಮೇಲೆ ಮಳೆ ಸುರಿದಂತೆ ಎಂಬಂತೆ ಮತ್ತದೇ ತಪ್ಪು ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್