ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

Published : May 31, 2020, 12:08 PM ISTUpdated : May 31, 2020, 12:51 PM IST

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಬೆಳಗಾವಿ(ಮೇ.31): ಹೊರರಾಜ್ಯಗಳಿಂದ ಬಂದಂತಹ 600 ಜನ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಇವರ ಕೊರೋನಾ ರಿಪೋರ್ಟ್ ಫಲಿತಾಂಶ ಹೊರಬರುವ ಮುನ್ನವೇ ಹೊರಬಂದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ.

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಆದರೆ ಅದರ ಫಲಿತಾಂಶ ಹೊರಬರುವ ಮುನ್ನವೇ ಕ್ವಾರಂಟೈನ್‌ನಿಂದ ರಿಲೀಸ್ ಮಾಡಿ ಜಿಲ್ಲಾಡಳಿತ ಕೈತೊಳೆದುಕೊಂಡಿದೆ. ಒಂದು ವೇಳೆ ಹೆಚ್ಚುಕಡಿಮೆಯಾದರೆ ಬೆಳಗಾವಿ ಜಿಲ್ಲೆ ದೊಡ್ಡ ಬೆಲೆಯನ್ನೇ ತೆರಬೇಕಾಗಬಹುದು.

ಕೆಲವು ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾಡಳಿತ ಇದೇ ತಪ್ಪನ್ನು ಮಾಡಿತ್ತು. ಆಗ 13 ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹಳೆಯ ಪ್ರಮಾದದಿಂದ ಬುದ್ದಿ ಕಲಿಯದ ಜಿಲ್ಲಾಡಳಿತ ಇದೀಗ ಬೋರ್ಗಲ್ಲ ಮೇಲೆ ಮಳೆ ಸುರಿದಂತೆ ಎಂಬಂತೆ ಮತ್ತದೇ ತಪ್ಪು ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?