ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!

ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!

Published : Jan 22, 2026, 08:33 PM IST

ಬೆಳಗಾವಿಯ ಖಾನಾಪುರದಲ್ಲಿ, ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಆಕೆಯನ್ನು ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ, ಥಳಿಸಿ ಕೊಲೆ ಮಾಡಿದ್ದಾನೆ. ನಂತರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆಂದು ನಾಟಕವಾಡಿದ್ದು, ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬಿದ್ದಿದೆ. ಆರೋಪಿ ಅವಿನಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಪತಿಯೇ ಪತ್ನಿಯ ಶೀಲ ಶಂಕಿಸಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಹೆಣದ ಬಟ್ಟೆಯನ್ನು ಬಿಚ್ಚಿದಾಗ ಕೊಲೆಯ ರಹಸ್ಯ ಬಯಲಾಗಿದೆ. ಈತ ಮಕ್ಕಳ ಮುಂದೆಯೇ ತನ್ನ ಹೆಂಡತಿಯ ಬಟ್ಟೆ ಬಿಚ್ಚಿ ಬೆತ್ತಲೆಗೊಳಿಸಿ ಭೀಕರವಾಗಿ ಥಳಿಸಿ ಕೊಲೆ ಮಾಡಿದ್ದಾನೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ನಂತರ ಹೆಂಡತಿಗೆ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾಳೆ ಎಂದು ನಾಟಕ ಮಾಡಿದ್ದಾನೆ. ಇದೀಗ ಸತ್ಯ ಬಯಲಾಗುತ್ತಿದ್ದಂತೆ ಪೊಲೀಸರ ಅತಿಥಿಯಾಗಿದ್ದಾನೆ.

ಈ ಘಟನೆ ಬೆಳಗಾವಿಯ ಖಾನಾಪುರದ ಕಾಪೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ಅವಿನಾಶ್ ಬಾಳೇಕುಂದ್ರಿ ಎಂಬಾತನೇ ತನ್ನ ಹೆಂಡತಿ ಕಿರಣಾ ಬಾಳೇಕುಂದ್ರಿ (30) ಕೊಲೆಯಾದ ಮಹಿಳೆ ಆಗಿದ್ದಾರೆ. 2016ರಲ್ಲಿ ಈ ಜೋಡಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ, ಇದೀಗ ಪತ್ನಿಯನ್ನೇ ಕೊಲೆಗೈದು, ಅದಾದ ಬಳಿಕ ನಾಟಕವಾಡಿದ್ದು, ಸಂಬಂಧಿಕರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಇನ್ನು ಹೆಂಡತಿ ಕಿರಣಾ ಅವರು  ಜೀವನ ನಿರ್ವಹಣೆಗಾಗಿ ಜನರಲ್ ಸ್ಟೋರ್ ಇಟ್ಟುಕೊಂಡಿದ್ದರು. ಆದರೆ, ಅಂಗಡಿಗೆ ಬರುವವರ ಜೊತೆಗೆ ತನ್ನ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಸಂಶಯ ವ್ಯಕ್ತಪಡಿಸಿ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮಕ್ಕಳಿಬ್ಬರೂ ಅಮ್ಮನಿಗೆ ಹೊಡೆಯಬೇಡಿ ಎಂದು ಬೇಡಿಕೊಂಡರೂ ಕೇಳದೇ ರಾಕ್ಷಸೀ ಕೃತ್ಯ ಮೆರೆದಿದ್ದಾನೆ. ಇನ್ನು ಹೆಂಡತಿ ಸತ್ತ ಬಳಿಕ ಆಕೆಯ ಮನೆಯವರು ಬರುವುದಕ್ಕೂ ಮೊದಲು ಅಗ್ನಿಸ್ಪರ್ಶ ಮಾಡಿ ಹೆಂಡತಿಯ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದನು. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಬಣ್ಣ ಬಯಲಾಗಿದೆ.

24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
Read more