ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!

ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!

Published : Jan 22, 2026, 08:33 PM IST

ಬೆಳಗಾವಿಯ ಖಾನಾಪುರದಲ್ಲಿ, ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಆಕೆಯನ್ನು ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ, ಥಳಿಸಿ ಕೊಲೆ ಮಾಡಿದ್ದಾನೆ. ನಂತರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆಂದು ನಾಟಕವಾಡಿದ್ದು, ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬಿದ್ದಿದೆ. ಆರೋಪಿ ಅವಿನಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಪತಿಯೇ ಪತ್ನಿಯ ಶೀಲ ಶಂಕಿಸಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಹೆಣದ ಬಟ್ಟೆಯನ್ನು ಬಿಚ್ಚಿದಾಗ ಕೊಲೆಯ ರಹಸ್ಯ ಬಯಲಾಗಿದೆ. ಈತ ಮಕ್ಕಳ ಮುಂದೆಯೇ ತನ್ನ ಹೆಂಡತಿಯ ಬಟ್ಟೆ ಬಿಚ್ಚಿ ಬೆತ್ತಲೆಗೊಳಿಸಿ ಭೀಕರವಾಗಿ ಥಳಿಸಿ ಕೊಲೆ ಮಾಡಿದ್ದಾನೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ನಂತರ ಹೆಂಡತಿಗೆ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾಳೆ ಎಂದು ನಾಟಕ ಮಾಡಿದ್ದಾನೆ. ಇದೀಗ ಸತ್ಯ ಬಯಲಾಗುತ್ತಿದ್ದಂತೆ ಪೊಲೀಸರ ಅತಿಥಿಯಾಗಿದ್ದಾನೆ.

ಈ ಘಟನೆ ಬೆಳಗಾವಿಯ ಖಾನಾಪುರದ ಕಾಪೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ಅವಿನಾಶ್ ಬಾಳೇಕುಂದ್ರಿ ಎಂಬಾತನೇ ತನ್ನ ಹೆಂಡತಿ ಕಿರಣಾ ಬಾಳೇಕುಂದ್ರಿ (30) ಕೊಲೆಯಾದ ಮಹಿಳೆ ಆಗಿದ್ದಾರೆ. 2016ರಲ್ಲಿ ಈ ಜೋಡಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ, ಇದೀಗ ಪತ್ನಿಯನ್ನೇ ಕೊಲೆಗೈದು, ಅದಾದ ಬಳಿಕ ನಾಟಕವಾಡಿದ್ದು, ಸಂಬಂಧಿಕರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಇನ್ನು ಹೆಂಡತಿ ಕಿರಣಾ ಅವರು  ಜೀವನ ನಿರ್ವಹಣೆಗಾಗಿ ಜನರಲ್ ಸ್ಟೋರ್ ಇಟ್ಟುಕೊಂಡಿದ್ದರು. ಆದರೆ, ಅಂಗಡಿಗೆ ಬರುವವರ ಜೊತೆಗೆ ತನ್ನ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಸಂಶಯ ವ್ಯಕ್ತಪಡಿಸಿ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮಕ್ಕಳಿಬ್ಬರೂ ಅಮ್ಮನಿಗೆ ಹೊಡೆಯಬೇಡಿ ಎಂದು ಬೇಡಿಕೊಂಡರೂ ಕೇಳದೇ ರಾಕ್ಷಸೀ ಕೃತ್ಯ ಮೆರೆದಿದ್ದಾನೆ. ಇನ್ನು ಹೆಂಡತಿ ಸತ್ತ ಬಳಿಕ ಆಕೆಯ ಮನೆಯವರು ಬರುವುದಕ್ಕೂ ಮೊದಲು ಅಗ್ನಿಸ್ಪರ್ಶ ಮಾಡಿ ಹೆಂಡತಿಯ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದನು. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಬಣ್ಣ ಬಯಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more