ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

Published : Aug 27, 2022, 12:36 PM IST

ಬೆಳಗಾವಿ ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಶುಕ್ರವಾರ ನಡೆಸಿದ ಗಜಪಡೆಯ ಕಾರ್ಯಾಚರಣೆ ಸಂಜೆಗೆ ಮುಕ್ತಾಯಗೊಂಡಿದ್ದು, ಇದು ಯಾವುದೇ ಫಲ ಕೂಡ ನೀಡಿಲ್ಲ.

ಬೆಳಗಾವಿ (ಆ.27): ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಗಜಪಡೆಯ ಕಾರ್ಯಾಚರಣೆ ಯಾವುದೇ ಫಲ ಕೂಡ ನೀಡಿಲ್ಲ. ಹೀಗಾಗಿ ಈಗ ಮತ್ತೊಂದು ಅಸ್ತ್ರವನ್ನು ಬಳಸಿಕೊಂಡಿರುವ ಅರಣ್ಯ ಇಲಾಖೆ, ಚಿರತೆ ಸೆರೆಗೆ ಆಪರೇಷನ್‌ ಹನಿಟ್ರ್ಯಾಪ್‌ಗೆ ಮೊರೆ ಹೋಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಚಿರತೆಯನ್ನು ನೋಡಿದರೆ ಅದು ಗಂಡು ಚಿರತೆ ಎಂಬ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿದೆ. ಹಾಗಾಗಿ ಚಿರತೆ ಸೆರೆಗೆ ಇಡಲಾಗಿರುವ 9 ಬೋನ್‌ಗಳಲ್ಲಿ ಹೆಣ್ಣು ಚಿರತೆಯ ಮೂತ್ರವನ್ನು ತಂದು ಸಿಂಪಡಿಸಲಾಗಿದೆ. ಭೂತರಾಮನಹಟ್ಟಿಕಿರು ಮೃಗಾಲಯದಲ್ಲಿನ ಎರಡು ಹೆಣ್ಣು ಚಿರತೆಗಳ ಮೂತ್ರವನ್ನು ತರಲಾಗಿದೆ ಎಂದು ಎಸಿಎಫ್‌ ಮಲ್ಲಿನಾಥ ಕುಸ್ನಾಳ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಚಿರತೆ ಸೆರೆಗೆ ನಿತ್ಯ 2.5 ಲಕ್ಷ ವೆಚ್ಚ!
ಚಿರತೆ ಶೋಧಕ್ಕೆ ಈವರೆಗೂ ಅರಣ್ಯ ಇಲಾಖೆಯಿಂದ ಒಟ್ಟು ಅಂದಾಜು .40 ಲಕ್ಷ ವೆಚ್ಚ ಮಾಡಲಾಗಿದೆ. ಇದೀಗ ಇಲಾಖೆಯ ಬಳಿ ಇರುವ ವಿಶೇಷ ಅನುದಾನ ಬಳಕೆ ಮಾಡಲಾಗುತ್ತಿದೆ. ನಿತ್ಯ ಅಂದಾಜು .2.50 ಲಕ್ಷ ವೆಚ್ಚವನ್ನು ಅರಣ್ಯ ಇಲಾಖೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗದ ಸಕ್ರೆಬೈಲ್‌ ಬಿಡಾರದಿಂದ ಬಂದಿರುವ ಗಜಪಡೆ, ನೂರಾರು ಸಿಬ್ಬಂದಿ ಊಟ, ವಸತಿ ವ್ಯವಸ್ಥೆಗೆ ನಿತ್ಯ ಲಕ್ಷ ಲಕ್ಷ ರು. ವೆಚ್ಚವಾಗುತ್ತಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more