ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

Published : Aug 27, 2022, 12:36 PM IST

ಬೆಳಗಾವಿ ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಶುಕ್ರವಾರ ನಡೆಸಿದ ಗಜಪಡೆಯ ಕಾರ್ಯಾಚರಣೆ ಸಂಜೆಗೆ ಮುಕ್ತಾಯಗೊಂಡಿದ್ದು, ಇದು ಯಾವುದೇ ಫಲ ಕೂಡ ನೀಡಿಲ್ಲ.

ಬೆಳಗಾವಿ (ಆ.27): ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಗಜಪಡೆಯ ಕಾರ್ಯಾಚರಣೆ ಯಾವುದೇ ಫಲ ಕೂಡ ನೀಡಿಲ್ಲ. ಹೀಗಾಗಿ ಈಗ ಮತ್ತೊಂದು ಅಸ್ತ್ರವನ್ನು ಬಳಸಿಕೊಂಡಿರುವ ಅರಣ್ಯ ಇಲಾಖೆ, ಚಿರತೆ ಸೆರೆಗೆ ಆಪರೇಷನ್‌ ಹನಿಟ್ರ್ಯಾಪ್‌ಗೆ ಮೊರೆ ಹೋಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಚಿರತೆಯನ್ನು ನೋಡಿದರೆ ಅದು ಗಂಡು ಚಿರತೆ ಎಂಬ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿದೆ. ಹಾಗಾಗಿ ಚಿರತೆ ಸೆರೆಗೆ ಇಡಲಾಗಿರುವ 9 ಬೋನ್‌ಗಳಲ್ಲಿ ಹೆಣ್ಣು ಚಿರತೆಯ ಮೂತ್ರವನ್ನು ತಂದು ಸಿಂಪಡಿಸಲಾಗಿದೆ. ಭೂತರಾಮನಹಟ್ಟಿಕಿರು ಮೃಗಾಲಯದಲ್ಲಿನ ಎರಡು ಹೆಣ್ಣು ಚಿರತೆಗಳ ಮೂತ್ರವನ್ನು ತರಲಾಗಿದೆ ಎಂದು ಎಸಿಎಫ್‌ ಮಲ್ಲಿನಾಥ ಕುಸ್ನಾಳ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಚಿರತೆ ಸೆರೆಗೆ ನಿತ್ಯ 2.5 ಲಕ್ಷ ವೆಚ್ಚ!
ಚಿರತೆ ಶೋಧಕ್ಕೆ ಈವರೆಗೂ ಅರಣ್ಯ ಇಲಾಖೆಯಿಂದ ಒಟ್ಟು ಅಂದಾಜು .40 ಲಕ್ಷ ವೆಚ್ಚ ಮಾಡಲಾಗಿದೆ. ಇದೀಗ ಇಲಾಖೆಯ ಬಳಿ ಇರುವ ವಿಶೇಷ ಅನುದಾನ ಬಳಕೆ ಮಾಡಲಾಗುತ್ತಿದೆ. ನಿತ್ಯ ಅಂದಾಜು .2.50 ಲಕ್ಷ ವೆಚ್ಚವನ್ನು ಅರಣ್ಯ ಇಲಾಖೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗದ ಸಕ್ರೆಬೈಲ್‌ ಬಿಡಾರದಿಂದ ಬಂದಿರುವ ಗಜಪಡೆ, ನೂರಾರು ಸಿಬ್ಬಂದಿ ಊಟ, ವಸತಿ ವ್ಯವಸ್ಥೆಗೆ ನಿತ್ಯ ಲಕ್ಷ ಲಕ್ಷ ರು. ವೆಚ್ಚವಾಗುತ್ತಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more