ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

Published : Aug 27, 2022, 12:36 PM IST

ಬೆಳಗಾವಿ ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಶುಕ್ರವಾರ ನಡೆಸಿದ ಗಜಪಡೆಯ ಕಾರ್ಯಾಚರಣೆ ಸಂಜೆಗೆ ಮುಕ್ತಾಯಗೊಂಡಿದ್ದು, ಇದು ಯಾವುದೇ ಫಲ ಕೂಡ ನೀಡಿಲ್ಲ.

ಬೆಳಗಾವಿ (ಆ.27): ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಗಜಪಡೆಯ ಕಾರ್ಯಾಚರಣೆ ಯಾವುದೇ ಫಲ ಕೂಡ ನೀಡಿಲ್ಲ. ಹೀಗಾಗಿ ಈಗ ಮತ್ತೊಂದು ಅಸ್ತ್ರವನ್ನು ಬಳಸಿಕೊಂಡಿರುವ ಅರಣ್ಯ ಇಲಾಖೆ, ಚಿರತೆ ಸೆರೆಗೆ ಆಪರೇಷನ್‌ ಹನಿಟ್ರ್ಯಾಪ್‌ಗೆ ಮೊರೆ ಹೋಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಚಿರತೆಯನ್ನು ನೋಡಿದರೆ ಅದು ಗಂಡು ಚಿರತೆ ಎಂಬ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿದೆ. ಹಾಗಾಗಿ ಚಿರತೆ ಸೆರೆಗೆ ಇಡಲಾಗಿರುವ 9 ಬೋನ್‌ಗಳಲ್ಲಿ ಹೆಣ್ಣು ಚಿರತೆಯ ಮೂತ್ರವನ್ನು ತಂದು ಸಿಂಪಡಿಸಲಾಗಿದೆ. ಭೂತರಾಮನಹಟ್ಟಿಕಿರು ಮೃಗಾಲಯದಲ್ಲಿನ ಎರಡು ಹೆಣ್ಣು ಚಿರತೆಗಳ ಮೂತ್ರವನ್ನು ತರಲಾಗಿದೆ ಎಂದು ಎಸಿಎಫ್‌ ಮಲ್ಲಿನಾಥ ಕುಸ್ನಾಳ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಚಿರತೆ ಸೆರೆಗೆ ನಿತ್ಯ 2.5 ಲಕ್ಷ ವೆಚ್ಚ!
ಚಿರತೆ ಶೋಧಕ್ಕೆ ಈವರೆಗೂ ಅರಣ್ಯ ಇಲಾಖೆಯಿಂದ ಒಟ್ಟು ಅಂದಾಜು .40 ಲಕ್ಷ ವೆಚ್ಚ ಮಾಡಲಾಗಿದೆ. ಇದೀಗ ಇಲಾಖೆಯ ಬಳಿ ಇರುವ ವಿಶೇಷ ಅನುದಾನ ಬಳಕೆ ಮಾಡಲಾಗುತ್ತಿದೆ. ನಿತ್ಯ ಅಂದಾಜು .2.50 ಲಕ್ಷ ವೆಚ್ಚವನ್ನು ಅರಣ್ಯ ಇಲಾಖೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗದ ಸಕ್ರೆಬೈಲ್‌ ಬಿಡಾರದಿಂದ ಬಂದಿರುವ ಗಜಪಡೆ, ನೂರಾರು ಸಿಬ್ಬಂದಿ ಊಟ, ವಸತಿ ವ್ಯವಸ್ಥೆಗೆ ನಿತ್ಯ ಲಕ್ಷ ಲಕ್ಷ ರು. ವೆಚ್ಚವಾಗುತ್ತಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more