ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

ಬೆಳಗಾವಿ: ಚಳ್ಳೆಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ, 23ನೇ ದಿನಕ್ಕೆ ಕಾಲಿಟ್ಟ ಶೋಧ ಕಾರ್ಯಾಚರಣೆ

Published : Aug 27, 2022, 12:36 PM IST

ಬೆಳಗಾವಿ ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಶುಕ್ರವಾರ ನಡೆಸಿದ ಗಜಪಡೆಯ ಕಾರ್ಯಾಚರಣೆ ಸಂಜೆಗೆ ಮುಕ್ತಾಯಗೊಂಡಿದ್ದು, ಇದು ಯಾವುದೇ ಫಲ ಕೂಡ ನೀಡಿಲ್ಲ.

ಬೆಳಗಾವಿ (ಆ.27): ಇಲ್ಲಿನ ಗಾಲ್ಫ್ ಕೋರ್ಸ್‌ ಮೈದಾನಕ್ಕೆ ನುಸುಳಿರುವ ಚಿರತೆ 23 ದಿನ ಕಳೆದರೂ ಪತ್ತೆಯಾಗಿಲ್ಲ. ಗಜಪಡೆಯ ಕಾರ್ಯಾಚರಣೆ ಯಾವುದೇ ಫಲ ಕೂಡ ನೀಡಿಲ್ಲ. ಹೀಗಾಗಿ ಈಗ ಮತ್ತೊಂದು ಅಸ್ತ್ರವನ್ನು ಬಳಸಿಕೊಂಡಿರುವ ಅರಣ್ಯ ಇಲಾಖೆ, ಚಿರತೆ ಸೆರೆಗೆ ಆಪರೇಷನ್‌ ಹನಿಟ್ರ್ಯಾಪ್‌ಗೆ ಮೊರೆ ಹೋಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಚಿರತೆಯನ್ನು ನೋಡಿದರೆ ಅದು ಗಂಡು ಚಿರತೆ ಎಂಬ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿದೆ. ಹಾಗಾಗಿ ಚಿರತೆ ಸೆರೆಗೆ ಇಡಲಾಗಿರುವ 9 ಬೋನ್‌ಗಳಲ್ಲಿ ಹೆಣ್ಣು ಚಿರತೆಯ ಮೂತ್ರವನ್ನು ತಂದು ಸಿಂಪಡಿಸಲಾಗಿದೆ. ಭೂತರಾಮನಹಟ್ಟಿಕಿರು ಮೃಗಾಲಯದಲ್ಲಿನ ಎರಡು ಹೆಣ್ಣು ಚಿರತೆಗಳ ಮೂತ್ರವನ್ನು ತರಲಾಗಿದೆ ಎಂದು ಎಸಿಎಫ್‌ ಮಲ್ಲಿನಾಥ ಕುಸ್ನಾಳ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಚಿರತೆ ಸೆರೆಗೆ ನಿತ್ಯ 2.5 ಲಕ್ಷ ವೆಚ್ಚ!
ಚಿರತೆ ಶೋಧಕ್ಕೆ ಈವರೆಗೂ ಅರಣ್ಯ ಇಲಾಖೆಯಿಂದ ಒಟ್ಟು ಅಂದಾಜು .40 ಲಕ್ಷ ವೆಚ್ಚ ಮಾಡಲಾಗಿದೆ. ಇದೀಗ ಇಲಾಖೆಯ ಬಳಿ ಇರುವ ವಿಶೇಷ ಅನುದಾನ ಬಳಕೆ ಮಾಡಲಾಗುತ್ತಿದೆ. ನಿತ್ಯ ಅಂದಾಜು .2.50 ಲಕ್ಷ ವೆಚ್ಚವನ್ನು ಅರಣ್ಯ ಇಲಾಖೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗದ ಸಕ್ರೆಬೈಲ್‌ ಬಿಡಾರದಿಂದ ಬಂದಿರುವ ಗಜಪಡೆ, ನೂರಾರು ಸಿಬ್ಬಂದಿ ಊಟ, ವಸತಿ ವ್ಯವಸ್ಥೆಗೆ ನಿತ್ಯ ಲಕ್ಷ ಲಕ್ಷ ರು. ವೆಚ್ಚವಾಗುತ್ತಿದೆ.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more