ಕರೆಂಟ್ ಕಣ್ಣಾಮುಚ್ಚಾಲೆಗೆ ಹೈರಾಣಾದ ರೈತರು: ಬೆಳೆ ಉಳಿಸಿಕೊಳ್ಳಲು ಹರಸಾಹಸ

ಕರೆಂಟ್ ಕಣ್ಣಾಮುಚ್ಚಾಲೆಗೆ ಹೈರಾಣಾದ ರೈತರು: ಬೆಳೆ ಉಳಿಸಿಕೊಳ್ಳಲು ಹರಸಾಹಸ

Published : Oct 27, 2023, 11:12 AM IST

ಸಚಿವರ, ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮತ್ತು ರೈತರಿಗೆ ಮಾಹಿತಿ ನೀಡೋವಾಗ ಮಾತ್ರ ಎಷ್ಟೇ ಕಷ್ಟವಾದ್ರೂ ರೈತರಿಗೆ ಏಳು ತಾಸು ವಿದ್ಯುತ್ ನೀಡುತ್ತೇವೆ ಎನ್ನುತ್ತಿದೆ ಸರ್ಕಾರ. ಆದ್ರೇ ವಾಸ್ತವವಾಗಿ ಹಳ್ಳಿ ಕಡೆ ಹೊಲ ಗದ್ದೆಗಳ ಕಡೆ ಹೋಗಿ ನೋಡಿದ್ರೇ, ಏಳಲ್ಲ ಕನಿಷ್ಠ ನಾಲ್ಕು ತಾಸು ಕೂಡ ಸಮಯಕ್ಕೆ ಸರಿಯಾಗಿ ವಿದ್ಯುತ್  ಬರುತ್ತಿಲ್ಲ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಬೆಳೆದು ನಿಂತ ಬೆಳೆ ನೀರಿಲ್ಲದೇ ಹಾಳಾಗಿ ಹೋಗ್ತದೆ ಅನ್ನೋ ಅತಂಕದಲ್ಲಿದ್ದಾರೆ ಬಳ್ಳಾರಿ ರೈತರು. 

ರಾಜ್ಯದ ಎರಡನೇ ಅತಿದೊಡ್ಡ ಜಲಾಶವಾಗಿರೋ ತುಂಗಭದ್ರಾ ಜಲಾಶಯ ನಿರೀಕ್ಷೆಯಷ್ಟು ಈ ಬಾರಿ ತುಂಬಿಲ್ಲ. ಆದ್ರೂ ರೈತರು ಇರೋ ಬರೋ ನೀರಿನಲ್ಲಿ ಹತ್ತಿ, ಭತ್ತ, ಮೆಣಸಿನ ಕಾಯಿ ಸೇರಿದಂತೆ ಇತರೆ ಬೆಳೆಯನ್ನು ಬೆಳೆದಿದ್ದಾರೆ. ಆದ್ರೆ, ಈಗ ಬೆಳೆಗಳಿಗೆ ನೀರಿಲ್ಲದೇ ಒಣಗುತ್ತಿವೆ. ನದಿ,ಕೆರೆ, ಬಾವಿ, ತುಂಗಭದ್ರಾದ ಕಾಲುವೆಯಲ್ಲಿನ ನೀರನ್ನಾದ್ರೂ ಬಳಸಿ ಬೆಳೆ ಉಳಿಸಿಕೊಳ್ಳೋಣ ಅಂದ್ರೆ ವಿದ್ಯುತ್ ಇಲ್ಲ. ಕೆಲವರು ಟ್ರಾಕ್ಟರ್ಗೆ ಜನರೇಟರ್ ಕಟ್ಟಿ ನೀರು ಹರಿಸೋ ಸಾಹಸ ಮಾಡ್ತಿದ್ರೆ, ಮತ್ತೆ ಕೆಲವರು ಕರೆಂಟ್ ಬರೋದನ್ನು ಹಗಲಿರುಳು ಕಾಯ್ತಾ ಕುಳಿತಿದ್ದಾರೆ. ಬಳ್ಳಾರಿ ಉಸ್ತುವಾರಿ ಸಚಿವ ನಾಗೇಂದ್ರ ಮಾತ್ರ ಮೆಣಸಿನಕಾಯಿ ಮತ್ತು ಭತ್ತ ಕಟಾವಿಗೆ ಬರೋವರೆಗೂ ರೈತರಿಗೆ ನಿರಂತರವಾಗಿ ಏಳು ತಾಸು ವಿದ್ಯುತ್ ನೀಡಬೇಕೆಂದು ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಆದ್ರೆ 7 ತಾಸು ಹೋಗ್ಲಿ ಸರಿಯಾಗಿ ನಾಲ್ಕು ಗಂಟೆಯೂ ವಿದ್ಯುತ್ ಪೂರೈಕೆ ಆಗ್ತಿಲ್ವಂತೆ. ಸದ್ಯ ಬಳ್ಳಾರಿಗೆ ದಿನಕ್ಕೆ 150 ಮೆಗಾವ್ಯಾಟ್ ವಿದ್ಯುತ್ ಬೇಕು. ಆದ್ರೆ, ಸಿಕ್ತಿರೋದು 80 ರಿಂದ 90 ಮೆಗಾವ್ಯಾಟ್ ವಿದ್ಯುತ್.  ಹೀಗಾಗಿ ವಿದ್ಯುತ್ ಕೊರತೆ ಸರಿದೂಗಿಸಲು ಹಿಮಾಚಲ ಪ್ರದೇಶ ಮತ್ತು ಮೇಘಾಲಯದಿಂದ ವಿದ್ಯುತ್ ಖರೀದಿಗೆ ಮುಂದಾಗಿದ್ದು, ಯಾವುದೇ ಕಾರಣಕ್ಕೂ ರೈತರು ಭಯಪಡಬೇಕಿಲ್ಲ ಎನ್ನುತ್ತಿದ್ದಾರೆ ಸಚಿವರು. ಸಚಿವರು ವಿದ್ಯುತ್ ನೀಡುತ್ತೇವೆ ಭಯ ಬೇಡ ಎನ್ನುತ್ತಿದ್ದಾರೆ. ಆದ್ರೆ, ರೈತರ ಬೆಳೆಗಳು ಮಾತ್ರ ಒಣಗುತ್ತಲೇ ಇವೆ.  ವಿದ್ಯುತ್  ಜೊತೆಗೆ ಕಾಲುವೆಗೆ ಸಮರ್ಪಕವಾಗಿ ನೀರು ಕೂಡ ಪೂರೈಸಬೇಕಿದೆ.

ಇದನ್ನೂ ವೀಕ್ಷಿಸಿ:  ರಾಯಚೂರಿನಲ್ಲಿ ಬೆಳೆಗೆ ನೀರಿಲ್ಲದೆ ಹಾಹಾಕಾರ: ಒಣಗಿ ನಿಂತ ಭತ್ತದ ಬೆಳೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more