Russia Ukraine War: ಯುದ್ಧಪೀಡಿತ ಉಕ್ರೇನ್‌ನ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ!

Russia Ukraine War: ಯುದ್ಧಪೀಡಿತ ಉಕ್ರೇನ್‌ನ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ!

Published : Mar 05, 2022, 01:46 PM IST

*'ನಾವು ಬದುಕಿ ಬರತ್ತೇವೆಂದು ಒಂಚೂರು ನಂಬಿಕೆ  ಇರಲಿಲ್ಲ'
*ಉಕ್ರೇನ್ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ
*ಯುದ್ಧಭೂಮಿಯಿಂದ ಬಂದಿಳಿದ  ತಯಬ್ ಕೌಸರ್, ಸಭಾ ಕೌಸರ್ 

ಬಳ್ಳಾರಿ (ಮಾ. 05): ಉಕ್ರೇನ್‌ನ ಮಹಾನಗರಗಳನ್ನು ವಶಪಡಿಸಿಕೊಳ್ಳುವ ರಷ್ಯಾದ ಹರಸಾಹಸ ಯುದ್ಧ 10ನೇ ದಿನವೂ ಮುಂದುವರೆದಿದೆ. ಈ ಮಧ್ಯೆ ಯುದ್ಧಪೀಡಿತ ದೇಶವಾದ ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ಬಳ್ಳಾರಿಯ ಸಹೋದರಿಯರಿಬ್ಬರು ಉಕ್ರೇನನ್‌ನ ಕರಾಳತೆ ಬಿಚ್ಚಿಟ್ಟಿದ್ದಾರೆ.  
"ನಾವು ಬದುಕಿ ಬರತ್ತೇವೆಂದು ಒಂಚೂರು ನಂಬಿಕೆ  ಇರಲಿಲ್ಲ" ಇಲ್ಲ ಎಂದು ಯುದ್ಧಭೂಮಿಯಿಂದ  ಭಾರತಕ್ಕೆ ವಾಪಾಸಾದ  ತಯಬ್ ಕೌಸರ್, ಸಭಾ ಕೌಸರ್ ಹೇಳಿದ್ದಾರೆ. ಬಳ್ಳಾರಿ ವಿದ್ಯಾರ್ಥಿಗಳ ಪೈಕಿ ಈವರೆಗೆ  ನಾಲ್ವರು ವಿದ್ಯಾರ್ಥಿಗಳು ವಾಪಸಾಗಿದ್ದು ಇನ್ನೂಳಿದ ವಿದ್ಯಾರ್ಥಿಗಳನ್ನ ಆದಷ್ಟು ಬೇಗ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ  ಹಾಗೂ ಪ್ರಧಾನಿ ಮೋದಿಯವರು ಬೇಗನೆ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Russia-Ukraine War: ಮೈ ಕೊರೆಯುವ ಚಳಿ, ನಮ್ಮನ್ನು ರಕ್ಷಿಸಿ ಎಂದು ಭಾರತೀಯರ ಆರ್ತನಾದ

"ಬಂಕರ್ - ರೈಲ್ವೆ ನಿಲ್ದಾಣದಲ್ಲಿ ಅಶ್ರಯ ಪಡೆದುಕೊಂಡು ಬದುಕಿ ಬಂದಿದ್ದೇವೆ. ಯುದ್ದ ಆರಂಭವಾದ ಮೊದಲ ಮೂರು ದಿನಗಳ ಕಾಲ ಪರಿಸ್ಥಿತಿ ಸರಿಯಿತ್ತು. 4 ಮತ್ತು 5 ದಿನ ನಮಗೆ ಸಾಕಷ್ಟು ಭಯವಾಗಿತ್ತು .. ಆಹಾರ ಇದ್ರೂ ಅದನ್ನು ಹೊರಗಡೆ ಹೋಗಿ ತರೋದಕ್ಕೆ ಆಗ್ತಿರಲಿಲ್ಲ. ಬಂಕರ್ ನಲ್ಲಿದ್ದಾಗಲೂ ಹೊರಗೆ ಬಾಂಬ್‌ ಗುಂಡಿನ ದಾಳಿ ನಿರಂತರ ವಾಗಿ ಇತ್ತು ಭಯವಾಗ್ತಿತ್ತು. ಕತ್ತಲಲ್ಲಿ ನಾವೂ ಅಶ್ರಯ ಪಡೆದುಕೊಂಡು ಬದುಕಿ ಬಂದಿದ್ದೇವೆ.  ಭಾರತದ ವಿದ್ಯಾರ್ಥಿಗಳ ಪಾಸ್ ಪೋರ್ಟ್ ಪರಿಶೀಲನೆ ಮಾಡಿ ಬಿಟ್ರು. ಯುದ್ದ ಆರಂಭಕ್ಕೂ ಮುನ್ನ ಬರಬೇಕು ಅಂದ್ರೆ ಯೂನಿವರ್ಸಿಟಿಯವರು ಯುದ್ದ ಆಗಲ್ಲವೆಂದು ಭರವಸೆ ನೀಡಿದ್ರು.ಹೀಗಾಗಿ ನಾವೂ ಮರಳಿ ಬರಲಿಲ್ಲ.. ಯುದ್ದ ಘೋಷಣೆಯಾದ ನಂತರ ಕಷ್ಟ ಅನುಭವಿಸಿ ಬಂದಿದ್ದೇವೆ" ಎಂದು ಸಹೋದರಿಯರಿಬ್ಬರು ಹೇಳಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more