Russia Ukraine War: ಯುದ್ಧಪೀಡಿತ ಉಕ್ರೇನ್‌ನ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ!

Russia Ukraine War: ಯುದ್ಧಪೀಡಿತ ಉಕ್ರೇನ್‌ನ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ!

Published : Mar 05, 2022, 01:46 PM IST

*'ನಾವು ಬದುಕಿ ಬರತ್ತೇವೆಂದು ಒಂಚೂರು ನಂಬಿಕೆ  ಇರಲಿಲ್ಲ'
*ಉಕ್ರೇನ್ ಕರಾಳತೆ ಬಿಚ್ಚಿಟ್ಟ ಬಳ್ಳಾರಿ ಸಹೋದರಿಯರ ಕಥೆ
*ಯುದ್ಧಭೂಮಿಯಿಂದ ಬಂದಿಳಿದ  ತಯಬ್ ಕೌಸರ್, ಸಭಾ ಕೌಸರ್ 

ಬಳ್ಳಾರಿ (ಮಾ. 05): ಉಕ್ರೇನ್‌ನ ಮಹಾನಗರಗಳನ್ನು ವಶಪಡಿಸಿಕೊಳ್ಳುವ ರಷ್ಯಾದ ಹರಸಾಹಸ ಯುದ್ಧ 10ನೇ ದಿನವೂ ಮುಂದುವರೆದಿದೆ. ಈ ಮಧ್ಯೆ ಯುದ್ಧಪೀಡಿತ ದೇಶವಾದ ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ಬಳ್ಳಾರಿಯ ಸಹೋದರಿಯರಿಬ್ಬರು ಉಕ್ರೇನನ್‌ನ ಕರಾಳತೆ ಬಿಚ್ಚಿಟ್ಟಿದ್ದಾರೆ.  
"ನಾವು ಬದುಕಿ ಬರತ್ತೇವೆಂದು ಒಂಚೂರು ನಂಬಿಕೆ  ಇರಲಿಲ್ಲ" ಇಲ್ಲ ಎಂದು ಯುದ್ಧಭೂಮಿಯಿಂದ  ಭಾರತಕ್ಕೆ ವಾಪಾಸಾದ  ತಯಬ್ ಕೌಸರ್, ಸಭಾ ಕೌಸರ್ ಹೇಳಿದ್ದಾರೆ. ಬಳ್ಳಾರಿ ವಿದ್ಯಾರ್ಥಿಗಳ ಪೈಕಿ ಈವರೆಗೆ  ನಾಲ್ವರು ವಿದ್ಯಾರ್ಥಿಗಳು ವಾಪಸಾಗಿದ್ದು ಇನ್ನೂಳಿದ ವಿದ್ಯಾರ್ಥಿಗಳನ್ನ ಆದಷ್ಟು ಬೇಗ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ  ಹಾಗೂ ಪ್ರಧಾನಿ ಮೋದಿಯವರು ಬೇಗನೆ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Russia-Ukraine War: ಮೈ ಕೊರೆಯುವ ಚಳಿ, ನಮ್ಮನ್ನು ರಕ್ಷಿಸಿ ಎಂದು ಭಾರತೀಯರ ಆರ್ತನಾದ

"ಬಂಕರ್ - ರೈಲ್ವೆ ನಿಲ್ದಾಣದಲ್ಲಿ ಅಶ್ರಯ ಪಡೆದುಕೊಂಡು ಬದುಕಿ ಬಂದಿದ್ದೇವೆ. ಯುದ್ದ ಆರಂಭವಾದ ಮೊದಲ ಮೂರು ದಿನಗಳ ಕಾಲ ಪರಿಸ್ಥಿತಿ ಸರಿಯಿತ್ತು. 4 ಮತ್ತು 5 ದಿನ ನಮಗೆ ಸಾಕಷ್ಟು ಭಯವಾಗಿತ್ತು .. ಆಹಾರ ಇದ್ರೂ ಅದನ್ನು ಹೊರಗಡೆ ಹೋಗಿ ತರೋದಕ್ಕೆ ಆಗ್ತಿರಲಿಲ್ಲ. ಬಂಕರ್ ನಲ್ಲಿದ್ದಾಗಲೂ ಹೊರಗೆ ಬಾಂಬ್‌ ಗುಂಡಿನ ದಾಳಿ ನಿರಂತರ ವಾಗಿ ಇತ್ತು ಭಯವಾಗ್ತಿತ್ತು. ಕತ್ತಲಲ್ಲಿ ನಾವೂ ಅಶ್ರಯ ಪಡೆದುಕೊಂಡು ಬದುಕಿ ಬಂದಿದ್ದೇವೆ.  ಭಾರತದ ವಿದ್ಯಾರ್ಥಿಗಳ ಪಾಸ್ ಪೋರ್ಟ್ ಪರಿಶೀಲನೆ ಮಾಡಿ ಬಿಟ್ರು. ಯುದ್ದ ಆರಂಭಕ್ಕೂ ಮುನ್ನ ಬರಬೇಕು ಅಂದ್ರೆ ಯೂನಿವರ್ಸಿಟಿಯವರು ಯುದ್ದ ಆಗಲ್ಲವೆಂದು ಭರವಸೆ ನೀಡಿದ್ರು.ಹೀಗಾಗಿ ನಾವೂ ಮರಳಿ ಬರಲಿಲ್ಲ.. ಯುದ್ದ ಘೋಷಣೆಯಾದ ನಂತರ ಕಷ್ಟ ಅನುಭವಿಸಿ ಬಂದಿದ್ದೇವೆ" ಎಂದು ಸಹೋದರಿಯರಿಬ್ಬರು ಹೇಳಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more