ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

Published : Jul 17, 2024, 01:10 PM ISTUpdated : Jul 17, 2024, 01:11 PM IST


ಅಪೆಕ್ಸ್ ಬ್ಯಾಂಕ್‌ನಿಂದ ಬೇನಾಮಿ ಸಾಲ ನೀಡಿ ಅವ್ಯವಹಾರ ಆರೋಪ
3 ತಿಂಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸೂಚನೆ
ಮತ್ತೆ ಹೈಕೋರ್ಟ್ ಮೊರೆ ಹೋಗಲು ದಿನೇಶ್ ಕಲ್ಲಳ್ಳಿ ನಿರ್ಧಾರ

ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ನಿಗಮ ಹಗರಣದ ಬೆನ್ನಲ್ಲೇ ಮತ್ತೊಂದು ಅಕ್ರಮ ಬಯಲಾಗಿದೆ.
ಅಪೆಕ್ಸ್ ಬ್ಯಾಂಕ್‌ನಲ್ಲಿ(Apex Bank) ಸಾಲ ನೀಡುವಲ್ಲಿ ಭಾರೀ ಗೋಲ್‌ಮಾಲ್ ನಡೆದಿದೆ ಎನ್ನಲಾಗ್ತಿದೆ. ಬ್ಯಾಂಕ್‌ನಿಂದ ಬೇನಾಮಿ ಸಾಲ(Loan) ನೀಡಿ ಅವ್ಯವಹಾರ ಮಾಡಲಾಗಿದೆಯಂತೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ(Minister KN Rajanna) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಹಲವಾರು ಕಂಪನಿಗೆ ಬೇನಾಮಿ ಹೆಸರಲ್ಲಿ ಸಾಲ ನೀಡಿರುವ ಆರೋಪ ಕೇಳಿಬಂದಿದ್ದು, ಸಾಲ ಪಡೆದ ಕಂಪನಿಗಳು ದಿವಾಳಿ ಎಂಬ ಹೆಸರಲ್ಲಿ ಬ್ಯಾಂಕ್‌ಗೆ ಮೋಸ ಮಾಡಲಾಗಿದೆ. ಕೆ.ಎನ್.ರಾಜಣ್ಣ ಸೇರಿ ಹಲವರ ಕೈವಾಡ ಇರುವ ಬಗ್ಗೆ ಆರೋಪ ಕೇಳಿಬಂದಿದೆ. ಸರ್ಕಾರಕ್ಕೆ ಹಲವು ಬಾರಿ ದೂರು ಕೊಟ್ರೂ ಕ್ರಮಕೈಗೊಳ್ಳದ ಆರೋಪ ಕೇಳಿಬಂದಿದೆ. ಆಡಿಟ್ ರಿಪೋರ್ಟ್, ತನಿಖಾ ವರದಿ, ರಿಜಿಸ್ಟ್ರಾರ್ ವರದಿ ನೀಡಿದ್ರೂ ಕ್ರಮವಿಲ್ಲ. ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ. 2021 ರಲ್ಲಿ ಆಡಿಟ್ ರಿಪೋರ್ಟ್ ನಲ್ಲಿ ಅಕ್ರಮ ನಡೆದಿದ್ದ ಬಗ್ಗೆ ಉಲ್ಲೇಖ ಮಾಡಲಾಗಿದೆ. ತನಿಖೆ ನಡೆಸುವಂತೆ ಸಹಕಾರ ಇಲಾಖೆ ರಿಜಿಸ್ಟ್ರಾರ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 4 ವರ್ಷ ಕಳೆದರೂ ಯಾವುದೇ ಕ್ರಮಗೈಗೊಳ್ಳದೇ ಸರ್ಕಾರದಿಂದ ವಿಳಂಬ ಮಾಡಲಾಗಿದೆಯಂತೆ. ಕೇಸ್ ಸಂಬಂಧ RTI ಮೂಲಕ ದಾಖಲೆ  ಕೋರಿದ್ದ ದಿನೇಶ್ ಕಲ್ಲಹಳ್ಳಿ, ತನಿಖೆ ಪ್ರಗತಿಯಲ್ಲಿದೆ ಎಂದು ಉತ್ತರ ನೀಡಲು ನಿರಾಕರಿಸಿದ್ದ ಸರ್ಕಾರ. ಖಾಸಗಿ ದೂರು ಸಲ್ಲಿಕೆ ಮಾಡಲು ಮಾಡಿರುವ ದಿನೇಶ್ ಕಲ್ಲಹಳ್ಳಿ. ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ದಿನೇಶ್ ಕಲ್ಲಹಳ್ಳಿ ಮನವಿ ಸರ್ಕಾರಕ್ಕೆ ರವಾನೆ ಮಾಡಿದ್ದ ರಾಜ್ಯಪಾಲರು. ರಾಜ್ಯಪಾಲರ ಕಚೇರಿ ಸೂಚನೆಗೂ ಕ್ಯಾರೆ ಎನ್ನದ ಸರ್ಕಾರದ ವಿರುದ್ಧ ರಿಟ್ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಮಹಾರಾಷ್ಟ್ರದಲ್ಲಿ ಎನ್‌ಡಿಎ ಕೂಟಕ್ಕೆ ಕಾದಿದ್ಯಾ ಬಿಗ್ ಶಾಕ್? ವಿಧಾನಸಭೆಯಲ್ಲೂ ಲೋಕಸಭೆ ಮಾದರಿಯ ಫಲಿತಾಂಶ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more