ಆ್ಯಸಿಡ್ ಮಾರಾಟಕ್ಕೆ ಕಠಿಣ ನಿಯಮ ಬೇಕು: ಬೆಂಗಳೂರು ಆ್ಯಸಿಡ್‌ ದಾಳಿ ಸಂತ್ರಸ್ತೆ ಆಗ್ರಹ

ಆ್ಯಸಿಡ್ ಮಾರಾಟಕ್ಕೆ ಕಠಿಣ ನಿಯಮ ಬೇಕು: ಬೆಂಗಳೂರು ಆ್ಯಸಿಡ್‌ ದಾಳಿ ಸಂತ್ರಸ್ತೆ ಆಗ್ರಹ

Published : Aug 12, 2022, 08:09 PM IST

Bengaluru acid attack case: ಆರೋಪಿಗೆ ನನ್ನ ಮುಂದೆ ಆ್ಯಸಿಡ್ ಹಾಕಿ ನೇಣಿಗೆ ಹಾಕಬೇಕು ಎಂದಿರುವ ಯುವತಿ ಘಟನೆ ಬಗ್ಗೆ ವಿವಿರಿಸಿದ್ದಾರೆ

ಬೆಂಗಳೂರು (ಆ. 12): ಪ್ರೇಮ ನಿರಾಕರಿಸಿದ ಕಾರಣಕ್ಕೆ ಮಾಗಡಿ ರಸ್ತೆಯ ಸುಂಕದಟ್ಟೆಯಲ್ಲಿ ಕಳೆದ ಏಪ್ರಿಲ್‌ನಲ್ಲಿ 24 ವರ್ಷದ ಯುವತಿ ಮೇಲೆ ನಡೆದಿದ್ದ ಆ್ಯಸಿಡ್‌ ದಾಳಿ ನಡೆದಿತ್ತು. ಈ ಸಂಬಂಧ  ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪ ಪಟ್ಟಿಸಲ್ಲಿಸಿದ್ದಾರೆ.  ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ಥ ಯುವತಿ ಈಗ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದಾರೆ. 

ಆರೋಪಿಗೆ ನನ್ನ ಮುಂದೆ ಆ್ಯಸಿಡ್ ಹಾಕಿ ನೇಣಿಗೆ ಹಾಕಬೇಕು ಎಂದಿರುವ ಯುವತಿ ಘಟನೆ ಬಗ್ಗೆ ವಿವಿರಿಸಿದ್ದಾರೆ. "ಈಗ ಸ್ವಲ್ಪ ಪರವಾಗಿಲ್ಲ ಅರೋಗ್ಯ, ಇನ್ನೂ ಪೇನ್ ಹಾಗೇ ಇದೆ. ಏಪ್ರಿಲ್ 28 ರಂದು ನಮ್ಮ ಅಪ್ಪ 8.30 ಕ್ಕೆ ಆಫೀಸ್ ಗೆ ಬಿಟ್ರು, ಇನ್ನೂ ಆಫೀಸ್ ಓಪನ್ ಅಗಿರಲಿಲ್ಲ. ನಾನು ಅಫೀಸ್ ಸ್ಟೆಪ್ಸ್ ಹತ್ತುಕೊಂಡು ಹೋಗ್ತಾ ಇದ್ದೆ.  ಈ ಸಂದರ್ಭದಲ್ಲಿ ಹಿಂದೆಯಿಂದ ಯಾರೋ ಕರೆದ ಹಾಗೇ ಆಯ್ತು. ಅಗ ಅವನು ನಿನ್ನ ಮೇಲೆ ಆ್ಯಸಿಡ್ ಹಾಕ್ತೀನಿ ಎಂದು ಹೇಳ್ದ. ನನಗೆ ಆ ಟೈಮಲ್ಲಿ  ತುಂಬಾ ಭಯ ಆಯ್ತು. ನಂತರ ನನ್ನ ತಲೆ ಜುಟ್ಟು ಹಿಡಕೊಂಡು ಆ್ಯಸಿಡ್ ಹಾಕಿದ್ದಾನೆ" ಎಂದು ಯುವತಿ ತಿಳಿಸಿದ್ದಾರೆ. 

ಬೆಂಗಳೂರು: ಸುಂಕದಕಟ್ಟೆ ಆ್ಯಸಿಡ್‌ ದಾಳಿಗೆ ಫೋನ್‌ ರೆಕಾರ್ಡ್‌ ಧ್ವನಿ ಸಾಕ್ಷಿ..!

ಸರ್ಕಾರ ಆ್ಯಸಿಡ್ ಸಿಗದೇ ಇರೋ ಹಾಗೇ ನೋಡಕೋಬೇಕು ಆಗ್ರಹಿಸಿರುವ  ಯುವತಿ "ಆ್ಯಸಿಡ್ ಮಾರಾಟ ಮಾಡೋದ್ ಬಗ್ಗೆ ಕಠಿಣ ರೂಲ್ಸ್ ತರಬೇಕು.  ಅವನಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ ಈ ರೀತಿ ಯಾರು ಮಾಡಬಾರದು.  ಆಸ್ಪತ್ರೆಯಲ್ಲಿ ಇರುವಾಗ ಎಲ್ಲರೂ ತುಂಬಾ ಸಪೋರ್ಟ್ ಮಾಡಿದ್ದಾರೆ.  ವೈದ್ಯರು ಪೊಲೀಸರು ಸಾಕಷ್ಟು ಸಹಕಾರ ನೀಡಿದ್ದಾರೆ. ಪೊಲೀಸರು ರಕ್ತವನ್ನು ನೀಡಿದ್ದಾರೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ" ಎಂದಿದ್ದಾರೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more