ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಚಾಲಕನನ್ನು ಕರೆಸಿ, ಥಳಿಸಲು ಮುಂದಾದ ಆಟೋ ಚಾಲಕರು

Published : Sep 11, 2023, 07:04 PM ISTUpdated : Sep 11, 2023, 07:06 PM IST

ಸರ್ಕಾರದ ವಿರುದ್ಧ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದ ಆಟೋ ಚಾಲಕರು, ಪ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನನ್ನು ಕರೆಸಿಕೊಂಡು ಥಳಿಸಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರು (ಸೆ.11): ಬೆಂಗಳೂರು ಬಂದ್‌ಗೆ ಕರೆಕೊಟ್ಟ ಆಟೋ ಚಾಲಕರು, ಪ್ರತಿಭಟನೆ ವೇಳೆ ಹಲವು ಗೂಂಡಾಗಿರಿ ಹಾಗೂ ವಿಕೃತಿಗಳನ್ನು ಮೆರೆದಿರುವ ಘಟನೆಗಳು ನಡೆದಿವೆ. ಅದರಲ್ಲಿಯೂ ಹೊಟ್ಟೆಪಾಡಿಗಾಗಿ ರ್ಯಾಪಿಡೋ ಬೈಕ್‌ ಚಾಲನೆ ಮಾಡುತ್ತಿದ್ದ ಬೈಕ್‌ ಚಾಲಕನನ್ನು ಸುಳ್ಳು ಕರೆ (ಪ್ರಾಂಕ್‌ ಕಾಲ್‌) ಮಾಡಿ ಪ್ರತಿಭಟನಾನಿರತ ಆಟೋ ಚಾಲಕರು, ಆತನನ್ನು ಮನಸೋ ಇಚ್ಛೆ ಥಳಿಸಲು ಮುಂದಾಗಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಆಟೋ ಚಾಲಕರು ಸೇರಿಕೊಂಡು ಬಾಯಿಗೆ ಬಂದಂತೆ ಬೈಯುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ರ್ಯಾಪಿಡ್‌ ಚಾಲಕನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆದರೆ, ಫ್ರಾಂಕ್‌ ಕಾಲ್‌ ಮಾಡಿ ರ್ಯಾಪಿಡೋ ಬೈಕ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಮಾತ್ರ ಅಮಾನವೀಯ ಘಟನೆಯಾಗಿದೆ. 
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more