ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

Published : Oct 18, 2025, 08:29 PM IST

ಬಿ ಫಾರ್ಮಸಿ ಓದುತ್ತಿದ್ದ ಬಡ ವಿದ್ಯಾರ್ಥಿನಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಬರ್ಬರವಾಗಿ ಹತ್ಯೆಯಾಗುತ್ತಾಳೆ. ಎದುರುಮನೆ ಹುಡುಗನಿಂದಲೇ ಈ ಕೃತ್ಯ ನಡೆದಿದ್ದು, ಈ ಹಿಂದೆ ಆತನ ವಿರುದ್ಧ ಪೊಲೀಸ್ ದೂರು ಕೂಡ ನೀಡಲಾಗಿತ್ತು. ಆದರೂ ಆತ ಯುವತಿಯನ್ನು ಕೊಲೆ ಮಾಡಿ ಸೇಡು ತೀರಿಸಿಕೊಂಡಿದ್ದಾನೆ. 

ಆಕೆ ಬಡವರ ಮನೆ ಹೆಣ್ಣುಮಗಳು.. ಅಪ್ಪ ದಿನಗೂಲಿ ಕೆಲಸಕ್ಕೆ ಹೋಗ್ತಿದ್ರೆ ಅಮ್ಮ ಮನೆಗೆಲಸಕ್ಕೆ ಹೋಗ್ತಿದ್ರು. ಇಂಥ ಮನೆಯಲ್ಲಿ ಹುಟ್ಟಿದ ಹೆಣ್ಣುಮಗಳಿಗೆ ಚೆನ್ನಾಗಿ ಓದಿ ಹೆತ್ತವರನ್ನ ನೋಡಿಕೊಳ್ಳಬೇಕು ಅಂತ ಕನಸು ಕನಸಿತ್ತು.. ಹೀಗಾಗಿ ಬಿ ಫಾರ್ಮಸಿಗೆ ಸೇರಿಕೊಂಡಿದ್ಲು.. ತಾನಾಯ್ತು.. ತನ್ನ ಓದಾಯ್ತು ಅಂತ ಇದ್ದವಳು. ಆದ್ರೆ ಆವತ್ತೊಂದು ದಿನ ಎಕ್ಸಾಂ ಇದೆ ಅಂತ ಬೆಳಗ್ಗೆ 7 ಗಂಟೆಗೆ ಮನೆ ಬಿಡ್ತಾಳೆ. ಮಧ್ಯಾಹ್ನದ ಹೊತ್ತಿಗೆ ಆಕೆ ವಾಪಸ್​​ ಅಗಬೇಕಿತ್ತು.. ಆದ್ರೆ ಬಂದಿದ್ದು ಆಕೆಯ ಸಾವಿನ ಸುದ್ದಿ.. ಆಕೆಯನ್ನ ಕಿರಾತಕನೊಬ್ಬ ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ದ... ಇನ್ನೂ ಕೇಸ್​ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ರು. ಆಗಲೇ ನೋಡಿ ಅಲ್ಲೊಬ್ಬ ಪರಮಪಾಪಿಯ ಹೆಸರು ಬರೋದು.. ಅಷ್ಟಕ್ಕೂ ಯಾರು ಆ ಕಿರಾತಕ..? ಈ ಹೆಣ್ಣುಮಗಳನ್ನ ಆತ ಕೊಂದಿದ್ದೇಕೆ..? ಅಮಾಯಕ ಹೆಣ್ಣುಮಗಳೊಬ್ಬಳ ದುರಂತ ಅಂತ್ಯದ ಕಥೆಯೇ ಇವತ್ತಿನ ಎಫ್​​​.ಐ.ಆರ್

ಅವನು ಎದುರು ಮನೆಯ ಹುಡುಗ... ಇಬ್ಬರಿಗೂ ಮೊದಲಿನಿಂದಲೂ ಪರಿಚಯವಿತ್ತು.. ಆದ್ರೆ ಒಂದು ವರ್ಷದಿಂದ ಯಾಮಿನಿಗೆ ಆತ ಲವ್​ ಮಾಡುವಂತೆ ಪೀಡಿಸುತ್ತಿದ್ದ.. ಆದ್ರೆ ಆ ಯುವತಿಗೆ ಲವ್​ ಮಾಡೋ ಮನಸ್ಸಿರಲಿಲ್ಲ.. ಆಕೆ ನೋ ಅಂತ ಹೇಳಿದ್ಲು.. ಆದ್ರೂ ಈತ ಅವಳ ಹಿಂದೆ ಹೋಗೋದನ್ನ ಬಿಟ್ಟಿರಲಿಲ್ಲ.. ಒಮ್ಮೆ ಪೋಷಕರನ್ನ ಕರೆದುಕೊಂಡು ಹೋಗಿ ಆಕೆಯ ಮನೆಯಲ್ಲಿ ಹೆಣ್ಣು ಕೇಳಿದ್ದ.. ಅವರು ಬಿಲ್​ಕುಲ್​ ಆಗಲ್ಲ ಅಂದಿದ್ರು.. ಕಾರಣ ಅವನೊಬ್ಬ ಪುಡಿ ರೌಡಿ.. ಆದ್ರೂ ಈತ ಆಕೆಯನ್ನ ಪೀಡಿಸುತ್ತಿದ್ದ.. ನೋಡೋವರೆಗೂ ನೋಡಿ ಯುವತಿ ಹೆತ್ತವರು ಪೊಲೀಸ್​​ ಠಾಣೆ ಮೆಟ್ಟಿಲೇರಿದ್ರು.. ಆಗ ಈತ ಇನ್ಮುಂದೆ ಅವಳ ಸಹವಾಸಕ್ಕೆ ಹೋಗಲ್ಲ ಅಂತ ಬರೆದುಕೊಟ್ಟಿದ್ದ.. ಆದ್ರೆ ಇವತ್ತು ಇದ್ದಕ್ಕಿದ್ದಂತೆ ಬಂದು ಅವಳ ಕಥೆಯನ್ನೇ ಮುಗಿಸಿಬಿಟ್ಟಿದ್ದಾನೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more