ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

Published : Oct 18, 2025, 08:29 PM IST

ಬಿ ಫಾರ್ಮಸಿ ಓದುತ್ತಿದ್ದ ಬಡ ವಿದ್ಯಾರ್ಥಿನಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಬರ್ಬರವಾಗಿ ಹತ್ಯೆಯಾಗುತ್ತಾಳೆ. ಎದುರುಮನೆ ಹುಡುಗನಿಂದಲೇ ಈ ಕೃತ್ಯ ನಡೆದಿದ್ದು, ಈ ಹಿಂದೆ ಆತನ ವಿರುದ್ಧ ಪೊಲೀಸ್ ದೂರು ಕೂಡ ನೀಡಲಾಗಿತ್ತು. ಆದರೂ ಆತ ಯುವತಿಯನ್ನು ಕೊಲೆ ಮಾಡಿ ಸೇಡು ತೀರಿಸಿಕೊಂಡಿದ್ದಾನೆ. 

ಆಕೆ ಬಡವರ ಮನೆ ಹೆಣ್ಣುಮಗಳು.. ಅಪ್ಪ ದಿನಗೂಲಿ ಕೆಲಸಕ್ಕೆ ಹೋಗ್ತಿದ್ರೆ ಅಮ್ಮ ಮನೆಗೆಲಸಕ್ಕೆ ಹೋಗ್ತಿದ್ರು. ಇಂಥ ಮನೆಯಲ್ಲಿ ಹುಟ್ಟಿದ ಹೆಣ್ಣುಮಗಳಿಗೆ ಚೆನ್ನಾಗಿ ಓದಿ ಹೆತ್ತವರನ್ನ ನೋಡಿಕೊಳ್ಳಬೇಕು ಅಂತ ಕನಸು ಕನಸಿತ್ತು.. ಹೀಗಾಗಿ ಬಿ ಫಾರ್ಮಸಿಗೆ ಸೇರಿಕೊಂಡಿದ್ಲು.. ತಾನಾಯ್ತು.. ತನ್ನ ಓದಾಯ್ತು ಅಂತ ಇದ್ದವಳು. ಆದ್ರೆ ಆವತ್ತೊಂದು ದಿನ ಎಕ್ಸಾಂ ಇದೆ ಅಂತ ಬೆಳಗ್ಗೆ 7 ಗಂಟೆಗೆ ಮನೆ ಬಿಡ್ತಾಳೆ. ಮಧ್ಯಾಹ್ನದ ಹೊತ್ತಿಗೆ ಆಕೆ ವಾಪಸ್​​ ಅಗಬೇಕಿತ್ತು.. ಆದ್ರೆ ಬಂದಿದ್ದು ಆಕೆಯ ಸಾವಿನ ಸುದ್ದಿ.. ಆಕೆಯನ್ನ ಕಿರಾತಕನೊಬ್ಬ ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ದ... ಇನ್ನೂ ಕೇಸ್​ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ರು. ಆಗಲೇ ನೋಡಿ ಅಲ್ಲೊಬ್ಬ ಪರಮಪಾಪಿಯ ಹೆಸರು ಬರೋದು.. ಅಷ್ಟಕ್ಕೂ ಯಾರು ಆ ಕಿರಾತಕ..? ಈ ಹೆಣ್ಣುಮಗಳನ್ನ ಆತ ಕೊಂದಿದ್ದೇಕೆ..? ಅಮಾಯಕ ಹೆಣ್ಣುಮಗಳೊಬ್ಬಳ ದುರಂತ ಅಂತ್ಯದ ಕಥೆಯೇ ಇವತ್ತಿನ ಎಫ್​​​.ಐ.ಆರ್

ಅವನು ಎದುರು ಮನೆಯ ಹುಡುಗ... ಇಬ್ಬರಿಗೂ ಮೊದಲಿನಿಂದಲೂ ಪರಿಚಯವಿತ್ತು.. ಆದ್ರೆ ಒಂದು ವರ್ಷದಿಂದ ಯಾಮಿನಿಗೆ ಆತ ಲವ್​ ಮಾಡುವಂತೆ ಪೀಡಿಸುತ್ತಿದ್ದ.. ಆದ್ರೆ ಆ ಯುವತಿಗೆ ಲವ್​ ಮಾಡೋ ಮನಸ್ಸಿರಲಿಲ್ಲ.. ಆಕೆ ನೋ ಅಂತ ಹೇಳಿದ್ಲು.. ಆದ್ರೂ ಈತ ಅವಳ ಹಿಂದೆ ಹೋಗೋದನ್ನ ಬಿಟ್ಟಿರಲಿಲ್ಲ.. ಒಮ್ಮೆ ಪೋಷಕರನ್ನ ಕರೆದುಕೊಂಡು ಹೋಗಿ ಆಕೆಯ ಮನೆಯಲ್ಲಿ ಹೆಣ್ಣು ಕೇಳಿದ್ದ.. ಅವರು ಬಿಲ್​ಕುಲ್​ ಆಗಲ್ಲ ಅಂದಿದ್ರು.. ಕಾರಣ ಅವನೊಬ್ಬ ಪುಡಿ ರೌಡಿ.. ಆದ್ರೂ ಈತ ಆಕೆಯನ್ನ ಪೀಡಿಸುತ್ತಿದ್ದ.. ನೋಡೋವರೆಗೂ ನೋಡಿ ಯುವತಿ ಹೆತ್ತವರು ಪೊಲೀಸ್​​ ಠಾಣೆ ಮೆಟ್ಟಿಲೇರಿದ್ರು.. ಆಗ ಈತ ಇನ್ಮುಂದೆ ಅವಳ ಸಹವಾಸಕ್ಕೆ ಹೋಗಲ್ಲ ಅಂತ ಬರೆದುಕೊಟ್ಟಿದ್ದ.. ಆದ್ರೆ ಇವತ್ತು ಇದ್ದಕ್ಕಿದ್ದಂತೆ ಬಂದು ಅವಳ ಕಥೆಯನ್ನೇ ಮುಗಿಸಿಬಿಟ್ಟಿದ್ದಾನೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more