ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

Published : Oct 18, 2025, 08:29 PM IST

ಬಿ ಫಾರ್ಮಸಿ ಓದುತ್ತಿದ್ದ ಬಡ ವಿದ್ಯಾರ್ಥಿನಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಬರ್ಬರವಾಗಿ ಹತ್ಯೆಯಾಗುತ್ತಾಳೆ. ಎದುರುಮನೆ ಹುಡುಗನಿಂದಲೇ ಈ ಕೃತ್ಯ ನಡೆದಿದ್ದು, ಈ ಹಿಂದೆ ಆತನ ವಿರುದ್ಧ ಪೊಲೀಸ್ ದೂರು ಕೂಡ ನೀಡಲಾಗಿತ್ತು. ಆದರೂ ಆತ ಯುವತಿಯನ್ನು ಕೊಲೆ ಮಾಡಿ ಸೇಡು ತೀರಿಸಿಕೊಂಡಿದ್ದಾನೆ. 

ಆಕೆ ಬಡವರ ಮನೆ ಹೆಣ್ಣುಮಗಳು.. ಅಪ್ಪ ದಿನಗೂಲಿ ಕೆಲಸಕ್ಕೆ ಹೋಗ್ತಿದ್ರೆ ಅಮ್ಮ ಮನೆಗೆಲಸಕ್ಕೆ ಹೋಗ್ತಿದ್ರು. ಇಂಥ ಮನೆಯಲ್ಲಿ ಹುಟ್ಟಿದ ಹೆಣ್ಣುಮಗಳಿಗೆ ಚೆನ್ನಾಗಿ ಓದಿ ಹೆತ್ತವರನ್ನ ನೋಡಿಕೊಳ್ಳಬೇಕು ಅಂತ ಕನಸು ಕನಸಿತ್ತು.. ಹೀಗಾಗಿ ಬಿ ಫಾರ್ಮಸಿಗೆ ಸೇರಿಕೊಂಡಿದ್ಲು.. ತಾನಾಯ್ತು.. ತನ್ನ ಓದಾಯ್ತು ಅಂತ ಇದ್ದವಳು. ಆದ್ರೆ ಆವತ್ತೊಂದು ದಿನ ಎಕ್ಸಾಂ ಇದೆ ಅಂತ ಬೆಳಗ್ಗೆ 7 ಗಂಟೆಗೆ ಮನೆ ಬಿಡ್ತಾಳೆ. ಮಧ್ಯಾಹ್ನದ ಹೊತ್ತಿಗೆ ಆಕೆ ವಾಪಸ್​​ ಅಗಬೇಕಿತ್ತು.. ಆದ್ರೆ ಬಂದಿದ್ದು ಆಕೆಯ ಸಾವಿನ ಸುದ್ದಿ.. ಆಕೆಯನ್ನ ಕಿರಾತಕನೊಬ್ಬ ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ದ... ಇನ್ನೂ ಕೇಸ್​ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ರು. ಆಗಲೇ ನೋಡಿ ಅಲ್ಲೊಬ್ಬ ಪರಮಪಾಪಿಯ ಹೆಸರು ಬರೋದು.. ಅಷ್ಟಕ್ಕೂ ಯಾರು ಆ ಕಿರಾತಕ..? ಈ ಹೆಣ್ಣುಮಗಳನ್ನ ಆತ ಕೊಂದಿದ್ದೇಕೆ..? ಅಮಾಯಕ ಹೆಣ್ಣುಮಗಳೊಬ್ಬಳ ದುರಂತ ಅಂತ್ಯದ ಕಥೆಯೇ ಇವತ್ತಿನ ಎಫ್​​​.ಐ.ಆರ್

ಅವನು ಎದುರು ಮನೆಯ ಹುಡುಗ... ಇಬ್ಬರಿಗೂ ಮೊದಲಿನಿಂದಲೂ ಪರಿಚಯವಿತ್ತು.. ಆದ್ರೆ ಒಂದು ವರ್ಷದಿಂದ ಯಾಮಿನಿಗೆ ಆತ ಲವ್​ ಮಾಡುವಂತೆ ಪೀಡಿಸುತ್ತಿದ್ದ.. ಆದ್ರೆ ಆ ಯುವತಿಗೆ ಲವ್​ ಮಾಡೋ ಮನಸ್ಸಿರಲಿಲ್ಲ.. ಆಕೆ ನೋ ಅಂತ ಹೇಳಿದ್ಲು.. ಆದ್ರೂ ಈತ ಅವಳ ಹಿಂದೆ ಹೋಗೋದನ್ನ ಬಿಟ್ಟಿರಲಿಲ್ಲ.. ಒಮ್ಮೆ ಪೋಷಕರನ್ನ ಕರೆದುಕೊಂಡು ಹೋಗಿ ಆಕೆಯ ಮನೆಯಲ್ಲಿ ಹೆಣ್ಣು ಕೇಳಿದ್ದ.. ಅವರು ಬಿಲ್​ಕುಲ್​ ಆಗಲ್ಲ ಅಂದಿದ್ರು.. ಕಾರಣ ಅವನೊಬ್ಬ ಪುಡಿ ರೌಡಿ.. ಆದ್ರೂ ಈತ ಆಕೆಯನ್ನ ಪೀಡಿಸುತ್ತಿದ್ದ.. ನೋಡೋವರೆಗೂ ನೋಡಿ ಯುವತಿ ಹೆತ್ತವರು ಪೊಲೀಸ್​​ ಠಾಣೆ ಮೆಟ್ಟಿಲೇರಿದ್ರು.. ಆಗ ಈತ ಇನ್ಮುಂದೆ ಅವಳ ಸಹವಾಸಕ್ಕೆ ಹೋಗಲ್ಲ ಅಂತ ಬರೆದುಕೊಟ್ಟಿದ್ದ.. ಆದ್ರೆ ಇವತ್ತು ಇದ್ದಕ್ಕಿದ್ದಂತೆ ಬಂದು ಅವಳ ಕಥೆಯನ್ನೇ ಮುಗಿಸಿಬಿಟ್ಟಿದ್ದಾನೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more