ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!

Published : Oct 18, 2025, 08:29 PM IST

ಬಿ ಫಾರ್ಮಸಿ ಓದುತ್ತಿದ್ದ ಬಡ ವಿದ್ಯಾರ್ಥಿನಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಬರ್ಬರವಾಗಿ ಹತ್ಯೆಯಾಗುತ್ತಾಳೆ. ಎದುರುಮನೆ ಹುಡುಗನಿಂದಲೇ ಈ ಕೃತ್ಯ ನಡೆದಿದ್ದು, ಈ ಹಿಂದೆ ಆತನ ವಿರುದ್ಧ ಪೊಲೀಸ್ ದೂರು ಕೂಡ ನೀಡಲಾಗಿತ್ತು. ಆದರೂ ಆತ ಯುವತಿಯನ್ನು ಕೊಲೆ ಮಾಡಿ ಸೇಡು ತೀರಿಸಿಕೊಂಡಿದ್ದಾನೆ. 

ಆಕೆ ಬಡವರ ಮನೆ ಹೆಣ್ಣುಮಗಳು.. ಅಪ್ಪ ದಿನಗೂಲಿ ಕೆಲಸಕ್ಕೆ ಹೋಗ್ತಿದ್ರೆ ಅಮ್ಮ ಮನೆಗೆಲಸಕ್ಕೆ ಹೋಗ್ತಿದ್ರು. ಇಂಥ ಮನೆಯಲ್ಲಿ ಹುಟ್ಟಿದ ಹೆಣ್ಣುಮಗಳಿಗೆ ಚೆನ್ನಾಗಿ ಓದಿ ಹೆತ್ತವರನ್ನ ನೋಡಿಕೊಳ್ಳಬೇಕು ಅಂತ ಕನಸು ಕನಸಿತ್ತು.. ಹೀಗಾಗಿ ಬಿ ಫಾರ್ಮಸಿಗೆ ಸೇರಿಕೊಂಡಿದ್ಲು.. ತಾನಾಯ್ತು.. ತನ್ನ ಓದಾಯ್ತು ಅಂತ ಇದ್ದವಳು. ಆದ್ರೆ ಆವತ್ತೊಂದು ದಿನ ಎಕ್ಸಾಂ ಇದೆ ಅಂತ ಬೆಳಗ್ಗೆ 7 ಗಂಟೆಗೆ ಮನೆ ಬಿಡ್ತಾಳೆ. ಮಧ್ಯಾಹ್ನದ ಹೊತ್ತಿಗೆ ಆಕೆ ವಾಪಸ್​​ ಅಗಬೇಕಿತ್ತು.. ಆದ್ರೆ ಬಂದಿದ್ದು ಆಕೆಯ ಸಾವಿನ ಸುದ್ದಿ.. ಆಕೆಯನ್ನ ಕಿರಾತಕನೊಬ್ಬ ಬರ್ಬರವಾಗಿ ಕೊಲೆ ಮಾಡಿಬಿಟ್ಟಿದ್ದ... ಇನ್ನೂ ಕೇಸ್​ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ರು. ಆಗಲೇ ನೋಡಿ ಅಲ್ಲೊಬ್ಬ ಪರಮಪಾಪಿಯ ಹೆಸರು ಬರೋದು.. ಅಷ್ಟಕ್ಕೂ ಯಾರು ಆ ಕಿರಾತಕ..? ಈ ಹೆಣ್ಣುಮಗಳನ್ನ ಆತ ಕೊಂದಿದ್ದೇಕೆ..? ಅಮಾಯಕ ಹೆಣ್ಣುಮಗಳೊಬ್ಬಳ ದುರಂತ ಅಂತ್ಯದ ಕಥೆಯೇ ಇವತ್ತಿನ ಎಫ್​​​.ಐ.ಆರ್

ಅವನು ಎದುರು ಮನೆಯ ಹುಡುಗ... ಇಬ್ಬರಿಗೂ ಮೊದಲಿನಿಂದಲೂ ಪರಿಚಯವಿತ್ತು.. ಆದ್ರೆ ಒಂದು ವರ್ಷದಿಂದ ಯಾಮಿನಿಗೆ ಆತ ಲವ್​ ಮಾಡುವಂತೆ ಪೀಡಿಸುತ್ತಿದ್ದ.. ಆದ್ರೆ ಆ ಯುವತಿಗೆ ಲವ್​ ಮಾಡೋ ಮನಸ್ಸಿರಲಿಲ್ಲ.. ಆಕೆ ನೋ ಅಂತ ಹೇಳಿದ್ಲು.. ಆದ್ರೂ ಈತ ಅವಳ ಹಿಂದೆ ಹೋಗೋದನ್ನ ಬಿಟ್ಟಿರಲಿಲ್ಲ.. ಒಮ್ಮೆ ಪೋಷಕರನ್ನ ಕರೆದುಕೊಂಡು ಹೋಗಿ ಆಕೆಯ ಮನೆಯಲ್ಲಿ ಹೆಣ್ಣು ಕೇಳಿದ್ದ.. ಅವರು ಬಿಲ್​ಕುಲ್​ ಆಗಲ್ಲ ಅಂದಿದ್ರು.. ಕಾರಣ ಅವನೊಬ್ಬ ಪುಡಿ ರೌಡಿ.. ಆದ್ರೂ ಈತ ಆಕೆಯನ್ನ ಪೀಡಿಸುತ್ತಿದ್ದ.. ನೋಡೋವರೆಗೂ ನೋಡಿ ಯುವತಿ ಹೆತ್ತವರು ಪೊಲೀಸ್​​ ಠಾಣೆ ಮೆಟ್ಟಿಲೇರಿದ್ರು.. ಆಗ ಈತ ಇನ್ಮುಂದೆ ಅವಳ ಸಹವಾಸಕ್ಕೆ ಹೋಗಲ್ಲ ಅಂತ ಬರೆದುಕೊಟ್ಟಿದ್ದ.. ಆದ್ರೆ ಇವತ್ತು ಇದ್ದಕ್ಕಿದ್ದಂತೆ ಬಂದು ಅವಳ ಕಥೆಯನ್ನೇ ಮುಗಿಸಿಬಿಟ್ಟಿದ್ದಾನೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more