Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Published : Dec 04, 2021, 05:41 PM IST

- ಈ ಗ್ರಾಮಗಳಿಗೆ ಹೆಣ್ಣು ಕೋಡೊದಿಲ್ಲ, ಯುವಕರ ಕಂಕಣಭಾಗ್ಯ ಕಸಿದ ಕಸ!

- ಸಂಬಂಧಿಕರು ಒಮ್ಮೆ ಬಂದರೇ ಮತ್ತೆ ವಾಪಸ್‌ ಬರುವ ಪ್ರಶ್ನೆಯೇ ಇಲ್ಲ!

- ಕಸದಿಂದ ಕಳೆದ  3 ವರ್ಷದಿಂದ ಅರಸಮ್ಮನ ಜಾತ್ರೆಯೇ ಸ್ಥಗಿತ
 

ಬೆಂಗಳೂರು (ಡಿ. 04):  ದೊಡ್ಡಬಳ್ಳಾಪುರ-ಕೊರಟಗೆರೆ (Doddaballapur Koratagere) ಕ್ಷೇತ್ರದ ಗಡಿರೇಖೆಯ ಮೇಲಿರುವ ಎಂಎಸ್‌ಜಿಪಿ ಇನ್ ಪ್ರಾ ಟೇಕ್ ಘನತ್ಯಾಜ್ಯ ವಿಲೇವಾರಿ ಘಟಕ  ದೊಡ್ಡಬಳ್ಳಾಪುರ, ಕೊರಟಗೆರೆ ಕ್ಷೇತ್ರದ ರೈತರ ಬದುಕಿಗೆ 6 ವರ್ಷದಿಂದ ಮಾರಕ ಆಗಿದೆ. ಈ ಘಟಕದಿಂದ ಹೊರ ಬರುವ ಅನಿಲ ಮತ್ತು ಕಸದ ರಾಶಿಯ ಕೊಳಚೆ (Garbage) ನೀರು ಕೊರಟಗೆರೆ ಕ್ಷೇತ್ರದ ಮಾವತ್ತೂರು ಕೆರೆಗೆ ಸೇರಿ ನೀರು (Polluted Water) ಕಲುಷಿತಗೊಂಡಿದೆ.  

ಎಂಎಸ್‌ಜಿಪಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಸರಕಾರ ಸ್ಥಳೀಯ ಗ್ರಾಮ ಪಂಚಾಯ್ತಿಯ ಪರವಾನಿಗೆ (License)  ಪಡೆದಿಲ್ಲ. ಭಕ್ತರಹಳ್ಳಿ ಗ್ರಾಪಂಯಿಂದ ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿದರೂ ಘಟಕದ ಮಾಲೀಕರು ಉತ್ತರ ನೀಡಿಲ್ಲ,  ಘಟಕಕ್ಕೆ ಪ್ರತಿನಿತ್ಯ 8 ರಿಂದ 10ಸಾವಿರ ಟನ್ ಕಸ ಬರುತ್ತಿದೆ. ಅಳತೆ ಮೀರಿ ತರುವ ಕಸ ವಿಲೇವಾರಿ ಆಗದೇ ಕೊಳೆತು ಭೂಮಿಗೆ ಸೇರಿ ಅಂತರ್ಜಲ ಮಟ್ಟ ವಿಷಮಯವಾಗಿದೆ. ಇದ್ರಿಂದ ಸುಮಾರು 100 ಗ್ರಾಮದ ಜನರಿಗೆ ಚರ್ಮ ರೋಗ, ಶ್ವಾಸಕೋಶದ ತೊಂದರೆ, ಕಿಡ್ನಿಯಲ್ಲಿ ಕಲ್ಲು ಸೇರಿದಂತೆ ಹಲವು ಕಾಯಿಲೆಗಳು ಬರುತ್ತಿವೆ.  ನಮ್ಮ ಗ್ರಾಮಕ್ಕೆ ಹೆಣ್ಣು ಕೂಡಲು ಯಾರು ಮುಂದೆ ಬರುತ್ತಿಲ್ಲ. ಸಂಬಂಧಿಕರ ಮನೆಗೆ ಬಂದರೇ ಅರ್ಧಗಂಟೆಯು ಇರೋದಿಲ್ಲ. ನಮ್ಮ ಊರಿನ ಗ್ರಾಮದೇವತೆ ಅರಸಮ್ಮ ಜಾತ್ರೆ ನಿಲ್ಲಿಸಿ ಐದು ವರ್ಷವಾಗಿದೆ. ಅಂತರ್ಜಲ ಮಟ್ಟ ಕಲುಷಿತವಾಗಿ ಕುಡಿಯಲು ನೀರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more