ನಾನು ಜಿಮ್ ಬಾಡಿ ಇದ್ರೂ ಅಮಾಯಕ; ಆಕೆಯೇ ಚಾಟಿಂಗ್ ಮಾಡಿ ಸಿಕ್ಕಿಬಿದ್ದು, ಅಣ್ಣಂದಿರಿಗೆ ನನ್ನ ಹಾಕಿಕೊಟ್ಟಿದ್ದಾಳೆ!

ನಾನು ಜಿಮ್ ಬಾಡಿ ಇದ್ರೂ ಅಮಾಯಕ; ಆಕೆಯೇ ಚಾಟಿಂಗ್ ಮಾಡಿ ಸಿಕ್ಕಿಬಿದ್ದು, ಅಣ್ಣಂದಿರಿಗೆ ನನ್ನ ಹಾಕಿಕೊಟ್ಟಿದ್ದಾಳೆ!

Published : Oct 02, 2025, 10:46 PM IST

ಬೆಂಗಳೂರಿನಲ್ಲಿ ಎರಡು ಭಯಾನಕ ಘಟನೆಗಳು ವರದಿಯಾಗಿವೆ. ಯುವತಿಗೆ ಮೆಸೇಜ್ ಕಳುಹಿಸಿದ್ದಕ್ಕೆ ಜಿಮ್ ಟ್ರೈನರ್ ಮೇಲೆ ಹಲ್ಲೆ ನಡೆದರೆ, ಮತ್ತೊಂದೆಡೆ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತಿಯು ಪತ್ನಿಯನ್ನು ಕೊಂದು ತಾನೂ ಸಾವಿಗೆ ಶರಣಾಗಿದ್ದಾನೆ.

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಎರಡು ವಿಭಿನ್ನ ಮತ್ತು ಭಯಾನಕ ಘಟನೆಗಳು ವರದಿಯಾಗಿದ್ದು, ಒಂದು ಕಡೆ ಜಿಮ್ ಟ್ರೈನರ್ ಮೇಲೆ ಮಾರಣಾಂತಿಕ ಹಲ್ಲೆ* ನಡೆದರೆ, ಇನ್ನೊಂದೆಡೆ ಪತ್ನಿ-ಪತಿಯ ದುರಂತ ಅಂತ್ಯದ ಕಥೆ ಹೊರಬಿದ್ದಿದೆ.

1. ಜಿಮ್ ಟ್ರೈನರ್ ಮೇಲೆ 'ಮೆಸೇಜ್' ಮಾಡಿದ್ದಕ್ಕೆ ದಾಳಿ:

ಇಲ್ಲಿ ಜಿಮ್ ಟ್ರೈನರ್ ಆಗಿದ್ದ ಯುವಕನೋರ್ವ ಅನಿರೀಕ್ಷಿತವಾಗಿ ಹಲ್ಲೆಗೊಳಗಾಗಿದ್ದಾನೆ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿ ಮಗನನ್ನು ಇಂಜಿನಿಯರಿಂಗ್ ಓದಿಸಿದ ಹೆತ್ತವರ ಕನಸಿಗೆ ವಿರುದ್ಧವಾಗಿ ಯುವಕ ಜಿಮ್ ಟ್ರೈನರ್ ಆಗಿದ್ದ. ಒಂದು ದಿನ, ಮೂವರು ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಜಿಮ್‌ಗೆ ನುಗ್ಗಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಕಾರಣ ಏನು ಎಂಬುದು ಟ್ರೈನರ್‌ಗೆ ಆರಂಭದಲ್ಲಿ ತಿಳಿದಿರಲಿಲ್ಲ.

ಹಲ್ಲೆಗೆ ಪೂರ್ವಪರ ಕಾರಣವೇನು?:
ತನಿಖೆ ವೇಳೆ ತಿಳಿದುಬಂದಿರುವಂತೆ, ಇದೇ ಜಿಮ್‌ಗೆ ಬರುತ್ತಿದ್ದ ಯುವತಿಯೊಬ್ಬಳಿಗೆ ಈ ಟ್ರೈನರ್ ಆಗಾಗ್ಗೆ ಮೆಸೇಜ್‌ಗಳನ್ನು ಮಾಡುತ್ತಿದ್ದ. ಈ ವಿಷಯ ಯುವತಿಯ ಅಣ್ಣಂದಿರಿಗೆ ತಿಳಿದು ಬಂದಿದ್ದು, ಅವರು ಜಿಮ್‌ಗೆ ಬಂದು ಟ್ರೈನರ್ ಮೇಲೆ ಫಿಲ್ಮಿ ಸ್ಟೈಲ್‌ನಲ್ಲಿ ಥಳಿಸಿದ್ದಾರೆ.

ಹಲ್ಲೆಗೊಳಗಾದ ಜಿಮ್ ಟ್ರೈನರ್ ಹೇಳಿಕೆ ಪ್ರಕಾರ, ಆ ಯುವತಿ ಚಾಟ್ ಮಾಡಿ ಸಿಕ್ಕಿಬಿದ್ದಾಗ ತಾನೇ ಉಲ್ಟಾ ಹೊಡೆದು, ತನ್ನ ಅಣ್ಣಂದಿರಿಂದ ಹಲ್ಲೆ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಚಾಟ್ ಮಾಡಿದ ತಪ್ಪಿಗಾಗಿ ಅಣ್ಣಂದಿರಿಂದ ಥಳಿತಕ್ಕೊಳಗಾಗಿರುವ ಜಿಮ್ ಟ್ರೈನರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸತ್ಯಾಂಶ ಏನೆಂಬುದು ತನಿಖೆ ನಂತರವಷ್ಟೇ ತಿಳಿದು ಬರಬೇಕಿದೆ.

2. ಪತ್ನಿ ಮರ್ಡರ್ ಮಾಡಿ ಗಂಡನ ಸೂಸೈಡ್: ಪ್ರೀತಿಸಿದ ಜೋಡಿಯ ದುರಂತ ಅಂತ್ಯ:

ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜೀವನ ದುರಂತವಾಗಿ ಅಂತ್ಯಗೊಂಡಿದೆ. ಮೂಲತಃ ತಮಿಳುನಾಡಿನವರಾದ ಈ ಜೋಡಿ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದಿತ್ತು. ಎರಡು ವರ್ಷಗಳ ಹಿಂದೆ ಇವರ ಮದುವೆಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ನಡುವೆ ಜಗಳ ಸಾಮಾನ್ಯವಾಗಿದ್ದು, ಮುಖ್ಯವಾಗಿ ಪತ್ನಿ ಕೆಲಸಕ್ಕೆ ಹೋಗುವುದನ್ನು ಗಂಡ ವಿರೋಧಿಸುತ್ತಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಗಂಡ-ಹೆಂಡತಿ ನಡುವೆ ತೀವ್ರ ಕಲಹ ಉಂಟಾಗುತ್ತಿತ್ತು. ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗಷ್ಟೇ ಪತ್ನಿಯನ್ನು ನೋಡಲು ಬೆಂಗಳೂರಿಗೆ ಬಂದಿದ್ದ.

ಕತ್ತು ಸೀಳಿ ಕೊಲೆ:
ಬೆಂಗಳೂರಿಗೆ ಬಂದ ಕೆಲವೇ ದಿನಗಳಲ್ಲಿ ಪತಿ ತನ್ನ ಪತ್ನಿಯನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಚಾಕುವಿನಿಂದ ಸುಮಾರು 7-8 ಬಾರಿ ಕತ್ತು ಸೀಳಿ ಪತ್ನಿಯನ್ನು ಕೊಂದು ಹಾಕಿದ್ದಾನೆ. ನಂತರ, ಹಂತಕ ಪತಿಯು ತಾನೂ ಅದೇ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಒಂದೇ ಮನೆಯಲ್ಲಿ ಪತಿ ಮತ್ತು ಪತ್ನಿಯ ಶವಗಳು ಪತ್ತೆಯಾಗಿದ್ದು, ಪ್ರೀತಿಸಿ ಮದುವೆಯಾದ ಜೋಡಿ ದುರಂತ ಅಂತ್ಯ ಕಂಡಿದೆ.

ಎಂತಹ ಸಮಸ್ಯೆ ಇದ್ದರೂ ಕೂತು ಮಾತನಾಡಿ ಬಗೆಹರಿಸಿಕೊಳ್ಳುವ ಅವಕಾಶವಿದ್ದರೂ, ಧರ್ಮ ಕೋಪದಿಂದ ಹೀಗಾಗಿದೆ. ದಂಪತಿಯ ಸಾವಿಗೆ ಕಾರಣವಾದ ನಿಖರ ಕಾರಣಗಳು ಅವರ ಜೊತೆಗೇ ಮಸಣ ಸೇರಿರುವುದು ವಿಪರ್ಯಾಸ ಎಂದು ಹೇಳಲಾಗುತ್ತಿದೆ. ಈ ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
Read more