ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

Published : Nov 25, 2023, 10:18 AM IST

ಬೆಂಗಳೂರು ಕಂಬಳಕ್ಕೆ ಅರಮನೆ ಮೈದಾನದಲ್ಲಿ ಅಖಾಡ ರೆಡಿಯಾಗಿದೆ. ಸುಮಾರು 200 ಜೊತೆ ಕೋಣಗಳು ಇತಿಹಾಸದಲ್ಲೇ ಮೊದಲ ಬಾರಿ ನಡೆಯುತ್ತಿರುವ ಬೆಂಗಳೂರು ಕಂಬಳದಲ್ಲಿ ಓಡಲು ರೆಡಿಯಾಗಿವೆ. ಇಂದು ಮತ್ತು ನಾಳೆ ಕಂಬಳ ಸಂಭ್ರಮ ರಂಗೇರಲಿದೆ.
 

ಕಂಬಳ..ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ. ಕರಾವಳಿಗರ ಸಾಂಸ್ಕೃತಿಕ ಜೀವನದ ಅವಿಭಾಜ್ಯ ಅಂಗ. ಕೋಣಗಳ ಜೊತೆಗೆ ಕಂಬಳದ ಅಖಾಡಕ್ಕೆ ಧುಮುಕುವ ಮಾಲೀಕ ಗೆದ್ದು ಬೀಗಬೇಕೆಂಬ ಛಲದೊಂದಿಗೆ ಮಿಂಚಿನ ಓಟ ಓಡುತ್ತಿದ್ದರೆ, ನೋಡುಗರ ಮೈ-ಮನ ರೋಮಾಂಚನಗೊಳ್ಳುತ್ತದೆ. ಇಂಥ ಐತಿಹಾಸಿಕ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಲ್ಲಿ(Bengaluru) ನಡೆಯುತ್ತಿದೆ. ಇಂದು ಮತ್ತು ನಾಳೆ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ದೂರಿ ಕಂಬಳಾಚರಣೆ ನಡೆಯಲಿದೆ. ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರಮನೆ ಮೈದಾನದಲ್ಲಿ ತುಳುನಾಡಿನ ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ. ಈಗಾಗಲೇ ಕಂಬಳದ ಕೋಣಗಳು, ಮಾಲೀಕರ ಜೊತೆಗೆ ರಾಜಧಾನಿಯನ್ನ ತಲುಪಿವೆ. ಸುಮಾರು 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೃಹತ್ ಕಂಬಳ(Kambala) ಕರೆಗೆ ಇಂದು ಬೆಳಗ್ಗೆ 10:30ಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಚಾಲನೆ ನೀಡಲಿದ್ದಾರೆ. ಬಳಿಕ ಕಂಬಳದ ಓಟ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಹಲವು ನಟ-ನಟಿಯರು ಭೇಟಿ ನೀಡಲಿದ್ದು, ಸಂಜೆ ನಡೆಯುವ ಕಂಬಳದ ಸ್ಪರ್ಧೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಾಕ್ಷಿಯಾಗಲಿದ್ದಾರೆ. 55 ಎಕರೆಗೂ ಅಧಿಕ ವಿಸ್ತೀರ್ಣವಿರುವ ಪ್ಯಾಲೇಸ್ ಮೈದಾನದಲ್ಲಿ ಕಂಬಳದ ಕೋಣಗಳ ಓಟಕ್ಕೆ 155 ಮೀಟರ್ ಅಗಲದ ಕರೆ ನಿರ್ಮಾಣವಾಗಿದ್ದು, ಈ ಜೋಡು ಕರೆಗೆ ರಾಜ, ಮಹಾರಾಜ ಅಂತಾ ಹೆಸರಿಡಲಾಗಿದೆ. ನೂರಕ್ಕೂ ಅಧಿಕ ಸ್ಟಾಲ್‌ಗಳನ್ನ ಹಾಕಲಾಗಿದ್ದು, ಕರಾವಳಿಯ ವಿವಿಧ ಬಗೆಯ ಖಾದ್ಯಗಳನ್ನ ಉಣಬಡಿಸೋಕೆ ಸಿದ್ಧತೆ ನಡೆದಿದೆ. ಇನ್ನು ಕಂಬಳದ ಗ್ಯಾಲರಿಯಲ್ಲಿ ಸುಮಾರು 8 ಸಾವಿರ ವಿಐಪಿ ಆಸನಗಳ ವ್ಯವಸ್ಥೆ ಇದ್ದು, ಜನಸಾಮಾನ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಲಾಗಿದೆ. ಕಂಬಳದ ಭಾಗವಹಿಸುವ ಕೋಣಗಳ ಆರೋಗ್ಯದತ್ತಲ್ಲೂ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯದಲ್ಲಿ ವ್ಯತ್ಯಯ ಆಗದಂತೆ ಮಂಗಳೂರಿನಿಂದಲೇ ತಂದಿರುವ ನೀರು,ಆಹಾರ  ನೀಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ತವರಿಗೆ ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ: ಸಿಎಂ, ಗವರ್ನರ್ ಸೇರಿ ಗಣ್ಯರಿಂದ ಅಂತಿಮ ಗೌರವ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?