ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

Published : Nov 25, 2023, 10:18 AM IST

ಬೆಂಗಳೂರು ಕಂಬಳಕ್ಕೆ ಅರಮನೆ ಮೈದಾನದಲ್ಲಿ ಅಖಾಡ ರೆಡಿಯಾಗಿದೆ. ಸುಮಾರು 200 ಜೊತೆ ಕೋಣಗಳು ಇತಿಹಾಸದಲ್ಲೇ ಮೊದಲ ಬಾರಿ ನಡೆಯುತ್ತಿರುವ ಬೆಂಗಳೂರು ಕಂಬಳದಲ್ಲಿ ಓಡಲು ರೆಡಿಯಾಗಿವೆ. ಇಂದು ಮತ್ತು ನಾಳೆ ಕಂಬಳ ಸಂಭ್ರಮ ರಂಗೇರಲಿದೆ.
 

ಕಂಬಳ..ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ. ಕರಾವಳಿಗರ ಸಾಂಸ್ಕೃತಿಕ ಜೀವನದ ಅವಿಭಾಜ್ಯ ಅಂಗ. ಕೋಣಗಳ ಜೊತೆಗೆ ಕಂಬಳದ ಅಖಾಡಕ್ಕೆ ಧುಮುಕುವ ಮಾಲೀಕ ಗೆದ್ದು ಬೀಗಬೇಕೆಂಬ ಛಲದೊಂದಿಗೆ ಮಿಂಚಿನ ಓಟ ಓಡುತ್ತಿದ್ದರೆ, ನೋಡುಗರ ಮೈ-ಮನ ರೋಮಾಂಚನಗೊಳ್ಳುತ್ತದೆ. ಇಂಥ ಐತಿಹಾಸಿಕ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಲ್ಲಿ(Bengaluru) ನಡೆಯುತ್ತಿದೆ. ಇಂದು ಮತ್ತು ನಾಳೆ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ದೂರಿ ಕಂಬಳಾಚರಣೆ ನಡೆಯಲಿದೆ. ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರಮನೆ ಮೈದಾನದಲ್ಲಿ ತುಳುನಾಡಿನ ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ. ಈಗಾಗಲೇ ಕಂಬಳದ ಕೋಣಗಳು, ಮಾಲೀಕರ ಜೊತೆಗೆ ರಾಜಧಾನಿಯನ್ನ ತಲುಪಿವೆ. ಸುಮಾರು 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೃಹತ್ ಕಂಬಳ(Kambala) ಕರೆಗೆ ಇಂದು ಬೆಳಗ್ಗೆ 10:30ಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಚಾಲನೆ ನೀಡಲಿದ್ದಾರೆ. ಬಳಿಕ ಕಂಬಳದ ಓಟ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಹಲವು ನಟ-ನಟಿಯರು ಭೇಟಿ ನೀಡಲಿದ್ದು, ಸಂಜೆ ನಡೆಯುವ ಕಂಬಳದ ಸ್ಪರ್ಧೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಾಕ್ಷಿಯಾಗಲಿದ್ದಾರೆ. 55 ಎಕರೆಗೂ ಅಧಿಕ ವಿಸ್ತೀರ್ಣವಿರುವ ಪ್ಯಾಲೇಸ್ ಮೈದಾನದಲ್ಲಿ ಕಂಬಳದ ಕೋಣಗಳ ಓಟಕ್ಕೆ 155 ಮೀಟರ್ ಅಗಲದ ಕರೆ ನಿರ್ಮಾಣವಾಗಿದ್ದು, ಈ ಜೋಡು ಕರೆಗೆ ರಾಜ, ಮಹಾರಾಜ ಅಂತಾ ಹೆಸರಿಡಲಾಗಿದೆ. ನೂರಕ್ಕೂ ಅಧಿಕ ಸ್ಟಾಲ್‌ಗಳನ್ನ ಹಾಕಲಾಗಿದ್ದು, ಕರಾವಳಿಯ ವಿವಿಧ ಬಗೆಯ ಖಾದ್ಯಗಳನ್ನ ಉಣಬಡಿಸೋಕೆ ಸಿದ್ಧತೆ ನಡೆದಿದೆ. ಇನ್ನು ಕಂಬಳದ ಗ್ಯಾಲರಿಯಲ್ಲಿ ಸುಮಾರು 8 ಸಾವಿರ ವಿಐಪಿ ಆಸನಗಳ ವ್ಯವಸ್ಥೆ ಇದ್ದು, ಜನಸಾಮಾನ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಲಾಗಿದೆ. ಕಂಬಳದ ಭಾಗವಹಿಸುವ ಕೋಣಗಳ ಆರೋಗ್ಯದತ್ತಲ್ಲೂ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯದಲ್ಲಿ ವ್ಯತ್ಯಯ ಆಗದಂತೆ ಮಂಗಳೂರಿನಿಂದಲೇ ತಂದಿರುವ ನೀರು,ಆಹಾರ  ನೀಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ತವರಿಗೆ ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ: ಸಿಎಂ, ಗವರ್ನರ್ ಸೇರಿ ಗಣ್ಯರಿಂದ ಅಂತಿಮ ಗೌರವ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!