ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

ರಾಜಧಾನಿ ಬೆಂಗಳೂರಲ್ಲಿ ಮೊದಲ ಬಾರಿಗೆ ಕಂಬಳ: ಇಂದು, ನಾಳೆ ‘ಬೆಂಗಳೂರು ಕಂಬಳ’ದ ಸಂಭ್ರಮ

Published : Nov 25, 2023, 10:18 AM IST

ಬೆಂಗಳೂರು ಕಂಬಳಕ್ಕೆ ಅರಮನೆ ಮೈದಾನದಲ್ಲಿ ಅಖಾಡ ರೆಡಿಯಾಗಿದೆ. ಸುಮಾರು 200 ಜೊತೆ ಕೋಣಗಳು ಇತಿಹಾಸದಲ್ಲೇ ಮೊದಲ ಬಾರಿ ನಡೆಯುತ್ತಿರುವ ಬೆಂಗಳೂರು ಕಂಬಳದಲ್ಲಿ ಓಡಲು ರೆಡಿಯಾಗಿವೆ. ಇಂದು ಮತ್ತು ನಾಳೆ ಕಂಬಳ ಸಂಭ್ರಮ ರಂಗೇರಲಿದೆ.
 

ಕಂಬಳ..ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ. ಕರಾವಳಿಗರ ಸಾಂಸ್ಕೃತಿಕ ಜೀವನದ ಅವಿಭಾಜ್ಯ ಅಂಗ. ಕೋಣಗಳ ಜೊತೆಗೆ ಕಂಬಳದ ಅಖಾಡಕ್ಕೆ ಧುಮುಕುವ ಮಾಲೀಕ ಗೆದ್ದು ಬೀಗಬೇಕೆಂಬ ಛಲದೊಂದಿಗೆ ಮಿಂಚಿನ ಓಟ ಓಡುತ್ತಿದ್ದರೆ, ನೋಡುಗರ ಮೈ-ಮನ ರೋಮಾಂಚನಗೊಳ್ಳುತ್ತದೆ. ಇಂಥ ಐತಿಹಾಸಿಕ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಲ್ಲಿ(Bengaluru) ನಡೆಯುತ್ತಿದೆ. ಇಂದು ಮತ್ತು ನಾಳೆ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ದೂರಿ ಕಂಬಳಾಚರಣೆ ನಡೆಯಲಿದೆ. ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರಮನೆ ಮೈದಾನದಲ್ಲಿ ತುಳುನಾಡಿನ ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ. ಈಗಾಗಲೇ ಕಂಬಳದ ಕೋಣಗಳು, ಮಾಲೀಕರ ಜೊತೆಗೆ ರಾಜಧಾನಿಯನ್ನ ತಲುಪಿವೆ. ಸುಮಾರು 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೃಹತ್ ಕಂಬಳ(Kambala) ಕರೆಗೆ ಇಂದು ಬೆಳಗ್ಗೆ 10:30ಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಚಾಲನೆ ನೀಡಲಿದ್ದಾರೆ. ಬಳಿಕ ಕಂಬಳದ ಓಟ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಹಲವು ನಟ-ನಟಿಯರು ಭೇಟಿ ನೀಡಲಿದ್ದು, ಸಂಜೆ ನಡೆಯುವ ಕಂಬಳದ ಸ್ಪರ್ಧೆಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಾಕ್ಷಿಯಾಗಲಿದ್ದಾರೆ. 55 ಎಕರೆಗೂ ಅಧಿಕ ವಿಸ್ತೀರ್ಣವಿರುವ ಪ್ಯಾಲೇಸ್ ಮೈದಾನದಲ್ಲಿ ಕಂಬಳದ ಕೋಣಗಳ ಓಟಕ್ಕೆ 155 ಮೀಟರ್ ಅಗಲದ ಕರೆ ನಿರ್ಮಾಣವಾಗಿದ್ದು, ಈ ಜೋಡು ಕರೆಗೆ ರಾಜ, ಮಹಾರಾಜ ಅಂತಾ ಹೆಸರಿಡಲಾಗಿದೆ. ನೂರಕ್ಕೂ ಅಧಿಕ ಸ್ಟಾಲ್‌ಗಳನ್ನ ಹಾಕಲಾಗಿದ್ದು, ಕರಾವಳಿಯ ವಿವಿಧ ಬಗೆಯ ಖಾದ್ಯಗಳನ್ನ ಉಣಬಡಿಸೋಕೆ ಸಿದ್ಧತೆ ನಡೆದಿದೆ. ಇನ್ನು ಕಂಬಳದ ಗ್ಯಾಲರಿಯಲ್ಲಿ ಸುಮಾರು 8 ಸಾವಿರ ವಿಐಪಿ ಆಸನಗಳ ವ್ಯವಸ್ಥೆ ಇದ್ದು, ಜನಸಾಮಾನ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಲಾಗಿದೆ. ಕಂಬಳದ ಭಾಗವಹಿಸುವ ಕೋಣಗಳ ಆರೋಗ್ಯದತ್ತಲ್ಲೂ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯದಲ್ಲಿ ವ್ಯತ್ಯಯ ಆಗದಂತೆ ಮಂಗಳೂರಿನಿಂದಲೇ ತಂದಿರುವ ನೀರು,ಆಹಾರ  ನೀಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ತವರಿಗೆ ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ: ಸಿಎಂ, ಗವರ್ನರ್ ಸೇರಿ ಗಣ್ಯರಿಂದ ಅಂತಿಮ ಗೌರವ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ